ದೇಶದಲ್ಲಿ ಕೊರೊನಾ ಭೀತಿ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ನವದೆಹಲಿ, ಡಿ. 22: ಭಾರತದಲ್ಲಿ ಒಮಿಕ್ರಾನ್ ಸಬ್ವೇರಿಯಂಟ್ BF.7 ರೂಪಾಂತರದ ನಾಲ್ಕು ಪ್ರಕರಣಗಳು ವರದಿಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ದೇಶದ ಕೋವಿಡ್ 19 ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಧ್ಯಾಹ್ನ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಚೀನಾದಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಇತರ ದೇಶಗಳಲ್ಲಿಯೂ ಒಮಿಕ್ರಾನ್ ಸಬ್ವೇರಿಯಂಟ್ BF.7 ರೂಪಾಂತರದ ನಾಲ್ಕು ಪ್ರಕರಣಗಳು ಬುಧವಾರ ಭಾರತದಲ್ಲಿ ಪತ್ತೆಯಾಗಿವೆ. ಇದು ದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇತ್ತ, ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳು ಗುರುವಾರ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.
ಗುಜರಾತ್ ಮತ್ತು ಒಡಿಶಾದಲ್ಲಿ ಪ್ರಕರಣಗಳು ಪತ್ತೆಯಗಿವೆ. ಗುಜರಾತ್ನ ಆರೋಗ್ಯ ಇಲಾಖೆಯು ಎರಡು ಪ್ರಕರಣಗಳು ವರದಿಯಾಗಿವೆ ಎಂಬುದನ್ನು ತಿಳಿಸಿದೆ. ಅಕ್ಟೋಬರ್ ಮತ್ತು ನವೆಂಬರ್ನಲ್ಲಿ BF.7 ಮತ್ತು BF.12 ರೂಪದ ಒಮಿಕ್ರಾನ್ ಸೋಂಕಿತ ರೋಗಿಗಳು ವರದಿಯಾಗಿದ್ದಾರೆ ಎಂದು ದೃಢಪಡಿಸಿದೆ.
ಸೋಂಕಿತ ಇಬ್ಬರಿಗೂ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗಿದ್ದು, ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಮೊದಲ ಪ್ರಕರಣ ಜುಲೈನಲ್ಲಿ ಬೆಳಕಿಗೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.
ಇನ್ನು, "ಭಾರತದಲ್ಲಿ ಕೋವಿಡ್ನಿಂದ ಚೇತರಿಸಿಕೊಂಡವರು ಉತ್ತಮ ರಕ್ಷಣೆ ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸಲು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ. ಈಗ ಎಲ್ಲಾ ಕೊರೊನಾ ರೂಪಾಂತರಗಳನ್ನು ಮೇಲ್ವಿಚಾರಣೆ ಮಾಡುವುದು ಮುಖ್ಯ. ಪ್ರಸ್ತುತ ಸನ್ನಿವೇಶದಲ್ಲಿ ವೈರಸ್ನಿಂದ ನಾವು ಯಾವುದೇ ಗಂಭೀರ ಸಮಸ್ಯೆಯನ್ನು ಎದುರಿಸುವುದು ಅಸಂಭವ" ಎಂದು ದೆಹಲಿ ಏಮ್ಸ್ನ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ ಸಂಜಯ್ ರೈ ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications