ಒನ್ಇಂಡಿಯಾ ವರದಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ
ಬೆಂಗಳೂರು, ಜೂ. 29: ಪ್ರಧಾನಿ ನರೇಂದ್ರ ಮೋದಿ ಒನ್ ಇಂಡಿಯಾದಲ್ಲಿ ಪ್ರಕಟವಾದ ಬೆಂಗಳೂರು ಬಾಲಕಿಯರ ಸಾಧನೆಯನ್ನು ಟ್ವಿಟ್ ಮಾಡುವ ಮೂಲಕ ಸಾಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಹೊರೈಜಾನ್ ಪಬ್ಲಿಕ್ ಶಾಲೆಯ (ಎನ್ ಎಚ್ ಪಿಎಸ್) 5 ಜನ ವಿದ್ಯಾರ್ಥಿನಿಯರು ಅಭಿವೃದ್ಧಿ ಪಡಿಸಿದ ಮೊಬೈಲ್ ಅಪ್ಲಿಕೇಶನ್ ಸಾನ್ ಫ್ರಾನ್ಸಿಸ್ಕೋ ದಲ್ಲಿ ನಡೆದ ಸ್ಪರ್ಧೆಯಲ್ಲಿ 10 ಸಾವಿರ ಅಮೆರಿಕನ್ ಡಾಲರ್ ಮೊತ್ತದ ಬಹುಮಾನವನ್ನು ಗೆದ್ದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.[ಬೆಂಗಳೂರು ವಿದ್ಯಾರ್ಥಿನಿಯರ ಜಗಮೆಚ್ಚಿದ ಸಾಧನೆ]

ಸೆಲೆಕ್ಸೋ (Sellixo ) ಹೆಸರಿನ ಅಪ್ಲಿಕೇಶನ್ ಮೂಲಕ ಒಣ ಕಸ ಮಾರಾಟ ಮತ್ತು ಖರೀದಿ ಮಾಡಬಹುದು. ವಿದ್ಯಾರ್ಥಿಗಳು ಮೋದಿ ಅವರ ಸ್ವಚ್ಛ ಭಾರತ, ಡಿಜಿಟಲ್ ಇಂಡಿಯಾ ಮತ್ತು ಸೇವ್ ಗರ್ಲ್ ಚೈಲ್ಡ್ ಅಭಿಯಾನದಿಂದ ಪ್ರೇರೇಪಿತರಾಗಿ ಇಂಥ ಸಂಶೋಧನೆ ಮಾಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಮಾಹಿತಿ ನೀಡಿತ್ತು.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಎನ್ ಎಚ್ ಪಿಎಸ್ ಸಂಸ್ಥೆ ಅಧ್ಯಕ್ಷ ಮೋಹನ್ ಮಂಘ್ ನಾನಿ, ಮೋದಿ ಟ್ವೀಟ್ ಮಾಡಿದ ನಂತರ ನಮಗೆ ನಿರಂತರ ಕರೆಗಳು ಬರತೊಡಗಿದವು. ವಿದ್ಯಾರ್ಥಿಗಳು ಪ್ರಧಾನಿ ಮೋದಿ ಮತ್ತು ವಿಜ್ಞಾನಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡುವ ಬಯಕೆಯನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಸಂಜನಾ ವಸಂತ, ಅನುಪಮ ಎನ್, ಮಹಿಮಾ ಮಹಂದಾಲೆ, ಸ್ವಾತಿ ಪಿ ರಾವ್ ಮತ್ತು ನವ್ಯಶ್ರೀ ಬಿ 64 ದೇಶಗಳ ಸುಮಾರು 400 ತಂಡಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಬಹುಮಾನ ಪಡೆದು ಹಿಂದಿರುಗಿದ್ದರು.
Congrats to these youngsters. Kudos to their innovative zeal & proud of their efforts to create a Clean India. http://t.co/xZlm3sGJl6
— Narendra Modi (@narendramodi) July 2, 2015 -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications