Narendra Modi: ಎರಡು ದಿನದಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರವಾಸ ನಡೆಸಲಿದ್ದಾರೆ ಪ್ರಧಾನಿ ಮೋದಿ!

ನವದೆಹಲಿ, ಜುಲೈ. 04: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ಅಂದರೆ ಕೇವಲ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ತೆಲಂಗಾಣ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಸೇರಿ ನಾಲ್ಕು ರಾಜ್ಯಗಳಲ್ಲಿ ತೀವ್ರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸರ್ಕಾರದ ಮೂಲಗಳು ಮಂಗಳವಾರ ತಿಳಿಸಿವೆ.

ಗೋರಖ್‌ಪುರ, ವಾರಣಾಸಿ, ರಾಯ್‌ಪುರ್, ವಾರಂಗಲ್ ಮತ್ತು ಬಿಕಾನೇರ್ ಎಂಬ ಐದು ನಗರಗಳಲ್ಲಿ ಸುಮಾರು ಹನ್ನೆರಡು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸುಮಾರು 50,000 ಕೋಟಿ ರೂಪಾಯಿ ಮೊತ್ತದ ಸುಮಾರು 50 ಯೋಜನೆಗಳ ಅನಾವರಣ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

PM Narendra Modi will visit 4 states

ಪ್ರಧಾನಿಯವರು ಜುಲೈ 7 ರಂದು ರಾಯ್‌ಪುರಕ್ಕೆ ಭೇಟಿ ನೀಡುವ ಮೂಲಕ ತಮ್ಮ ಸಮಗ್ರ ಪ್ರವಾಸವನ್ನು ಪ್ರಾರಂಭಿಸುತ್ತಾರೆ. ಇಲ್ಲಿ ಅವರು ಶಂಕುಸ್ಥಾಪನೆ ಮತ್ತು ಅನೇಕ ಯೋಜನೆಗಳನ್ನು ರಾಜ್ಯಕ್ಕೆ ಸಮರ್ಪಿಸಲಿದ್ದಾರೆ. ಇವುಗಳಲ್ಲಿ ರಾಯ್‌ಪುರ - ವಿಶಾಖಪಟ್ಟಣಂ ಕಾರಿಡಾರ್‌ನ ವಿವಿಧ ಆರು ಲೇನ್ ವಿಭಾಗಗಳ ಅಡಿಪಾಯ ಸೇರಿವೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಯ್‌ಪುರದಿಂದ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳಲಿರುವ ಮೋದಿ ಅಲ್ಲಿ ಧಾರ್ಮಿಕ ಪುಸ್ತಕಗಳ ಖ್ಯಾತ ಪ್ರಕಾಶಕರಾದ ಗೀತಾ ಪ್ರೆಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ನೂತನ 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಗೋರಖ್‌ಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಗೋರಖ್‌ಪುರದ ನಂತರ ಪ್ರಧಾನಿ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಲ್ಲಿದ್ದಾರೆ. ಬಹುಮುಖ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಅನ್ನು ಸೋನ್ ನಗರಕ್ಕೆ ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಹೊಸ ಮಾರ್ಗಕ್ಕೆ ಸಮರ್ಪಿಸಲಿದ್ದಾರೆ.

ಇದರ ಜೊತೆಗೆ NH-56 (ವಾರಣಾಸಿ - ಜೌನ್‌ಪುರ್) ನ ನಾಲ್ಕು ಪಥದ ಕಾಮಗಾರಿ ಅಗಲೀಕರಣಕ್ಕೆ ಚಾಲನೆ ನೀಡಲಿದ್ದಾರೆ. ಮಣಿಕರ್ಣಿಕಾ ಘಾಟ್ ಮತ್ತು ಹರಿಶ್ಚಂದ್ರ ಘಾಟ್ ನವೀಕರಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜುಲೈ 8 ರಂದು ಪ್ರಧಾನಿ ಮೋದಿ ವಾರಣಾಸಿಯಿಂದ ತೆಲಂಗಾಣದ ವಾರಂಗಲ್‌ಗೆ ಪ್ರಯಾಣಿಸಲಿದ್ದಾರೆ. ನಾಗ್ಪುರ - ವಿಜಯವಾಡ ಕಾರಿಡಾರ್‌ನ ಪ್ರಮುಖ ವಿಭಾಗಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಕರೀಂನಗರ - ವಾರಂಗಲ್ ಭಾಗದ NH- 563 ರ ನಾಲ್ಕು ಪಥಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಅವರು ವಾರಂಗಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಾರಂಗಲ್‌ನಿಂದ, ಪ್ರಧಾನಿ ಮೋದಿ ನಂತರ ಬಿಕಾನೇರ್‌ಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಶಂಕುಸ್ಥಾಪನೆ ಮತ್ತು ಅನೇಕ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಮೃತಸರ - ಜಾಮ್‌ನಗರ ಎಕ್ಸ್‌ಪ್ರೆಸ್‌ವೇಯ ವಿವಿಧ ವಿಭಾಗಗಳನ್ನು ಪ್ರಧಾನಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ. ಗ್ರೀನ್ ಎನರ್ಜಿ ಕಾರಿಡಾರ್ ಹಂತ-I ಗಾಗಿ ಅಂತರ-ರಾಜ್ಯ ಪ್ರಸರಣ ಮಾರ್ಗವನ್ನು ಸಹ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಅಡಿಪಾಯ ಹಾಕಿದ ಬಳಿಕ ಬಿಕಾನೇರ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+