ನಿವೃತ್ತರಾದ ಧೋನಿಗೆ ಪ್ರಧಾನಿ ನರೇಂದ್ರ ಮೋದಿ ಹೃದಯಸ್ಪರ್ಶಿ ಪತ್ರ
ನವದೆಹಲಿ, ಆಗಸ್ಟ್ 20: ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಅವರು ಭಾರತೀಯ ಕ್ರಿಕೆಟ್ ಕ್ಷೇತ್ರಕ್ಕೆ ನೀಡಿದ್ದ ಅನುಪಮ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ. ಕಳೆದ ಒಂದೂವರೆ ದಶಕದಿಂದ ನೀಡಿದ ಕೊಡುಗೆಗಾಗಿ ಧೋನಿಗೆ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಆಗಸ್ಟ್ 15ರಂದು ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಧೋನಿಗೆ, ಪ್ರಧಾನಿ ನರೇಂದ್ರ ಮೋದಿ ಬುಧವಾರ ಎರಡು ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ. ಧೋನಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿರುವ ಪ್ರಧಾನಿ, ಭವಿಷ್ಯದ ಜೀವನದ ಕುರಿತು ಶುಭ ಹಾರೈಸಿದ್ದಾರೆ.
'ಕಲಾವಿದ, ಸೈನಿಕ ಮತ್ತು ಕ್ರೀಡಾಪಟು ಬಯಸುವುದು ಮೆಚ್ಚುಗೆಯನ್ನು. ಅವರ ಕಠಿಣ ಶ್ರಮ ಮತ್ತು ತ್ಯಾಗವನ್ನು ಗಮನಿಸಿ ಎಲ್ಲರಿಂದಲೂ ಪ್ರಶಂಸೆ ಸಿಗಬೇಕೆನ್ನುತ್ತಾರೆ. ನಿಮ್ಮ ಮೆಚ್ಚುಗೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು' ಎಂದು ಧೋನಿ ಪ್ರತಿಕ್ರಿಯಿಸಿದ್ದಾರೆ. ಮುಂದೆ ಓದಿ...

ನಿಮ್ಮ ಕೊಡುಗೆ ಅಜರಾಮರ
ನಿಮ್ಮ ನಿವೃತ್ತಿ ನಿರ್ಧಾರದಿಂದ 130 ಕೋಟಿ ಭಾರತೀಯರು ನಿರಾಶೆಗೊಂಡಿದ್ದಾರೆ, ಆದರೆ ಕಳೆದ ಒಂದೂವರೆ ದಶಕದಲ್ಲಿ ಭಾರತೀಯ ಕ್ರಿಕೆಟ್ಗೆ ನೀವು ನೀಡಿದ ಕೊಡುಗೆಗೆ ಎಂದೆಂದಿಗೂ ಕೃತಜ್ಞರಾಗಿರುತ್ತಾರೆ. ಅಂಕಿಅಂಶಗಳ ಮೂಲಕ ನಿಮ್ಮ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ನೋಡಿದರೆ ನೀವು ಬಹಳ ಯಶಸ್ವಿ ನಾಯಕರಲ್ಲಿ ಒಬ್ಬರು. ಭಾರತ ತಂಡವನ್ನು ಜಗತ್ತಿನ ಕ್ರಿಕೆಟ್ ಪಟ್ಟಿಗಳಲ್ಲಿ ಮುಂಚೂಣಿಗೆ ಕೊಂಡೊಯ್ದವರು.
ನಿಮ್ಮ ಹೆಸರು ಜಗತ್ತಿನ ಬ್ಯಾಟಿಂಗ್ ದಿಗ್ಗಜರಲ್ಲಿ ಒಬ್ಬರಾಗಿ, ಮಹಾನ್ ಕ್ರಿಕೆಟ್ ನಾಯಕರಲ್ಲಿ ಒಬ್ಬರಾಗಿ, ಕ್ರಿಕೆಟ್ ಕ್ರೀಡೆ ಕಂಡ ಅತ್ಯುತ್ತಮ ವಿಕೆಟ್ ಕೀಪರ್ಗಳಲ್ಲಿ ಒಬ್ಬರಾಗಿ ಇತಿಹಾಸದಲ್ಲಿ ನಿಮ್ಮ ಹೆಸರು ಚಿರವಾಗಿ ಉಳಿಯುತ್ತದೆ ಎಂದು ಮೋದಿ ಹೇಳಿದ್ದಾರೆ.

ಕ್ರೀಡಾಪಟುವಷ್ಟೇ ಅಲ್ಲ
ಕಠಿಣ ಸನ್ನಿವೇಶಗಳಲ್ಲಿ ನಿಮ್ಮ ಮೇಲಿನ ವಿಶ್ವಾಸಾರ್ಹತೆ, ಪಂದ್ಯಗಳನ್ನು ಮುಗಿಸುವ ನಿಮ್ಮ ಶೈಲಿ, ಮುಖ್ಯವಾಗಿ 2011ರ ವಿಶ್ವಕಪ್ ಫೈನಲ್ ಪಂದ್ಯ ಹಲವು ಪೀಳಿಗೆಗಳ ನೆನಪಿನಲ್ಲಿ ಎಂದೆಂದಿಗೂ ಇರಲಿದೆ. ಆದರೆ ಮಹೇಂದ್ರ ಸಿಂಗ್ ಧೋನಿ ಎಂಬ ಹೆಸರು ಅವರ ವೃತ್ತಿ ಬದುಕಿನ ಅಂಕಿ ಅಂಶಗಳು ಅಥವಾ ಪಂದ್ಯ ಗೆಲ್ಲಿಸುವ ನಿರ್ದಿಷ್ಟ ಪಾತ್ರಗಳಿಂದಾಗಿ ಮಾತ್ರವೇ ನೆನಪಿನಲ್ಲಿ ಉಳಿಯುವುದಿಲ್ಲ. ನಿಮ್ಮನ್ನು ಒಬ್ಬ ಕ್ರೀಡಾಪಡುವಾಗಿ ಮಾತ್ರವೇ ನೋಡುವುದು ಅನ್ಯಾಯವಾಗುತ್ತದೆ. ನೀವು ಮೂಡಿಸಿದ ಪ್ರಭಾವವನ್ನು ಮಾಪನ ಮಾಡುವುದು ಸಾಧ್ಯವಾಗದು.

ಕೋಟ್ಯಂತರ ಜನರಿಗೆ ಸ್ಫೂರ್ತಿ
ಸಣ್ಣ ಪಟ್ಟಣವೊಂದರಿಂದ ಕಷ್ಟಪಟ್ಟು ಬೆಳೆದ ನೀವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರಿ. ನಿಮ್ಮಷ್ಟಕ್ಕೆ ಹೆಸರು ಮಾಡಿದಿರಿ. ಎಲ್ಲಕ್ಕಿಂತ ಮುಖ್ಯವಾಗಿ ಭಾರತಕ್ಕೆ ಹೆಮ್ಮೆ ತಂದಿರಿ. ನಿಮ್ಮ ಬೆಳವಣಿಗೆ ಮತ್ತು ನಡತೆ ಕೋಟ್ಯಂತರ ಯುವ ಜನರಿಗೆ ಬಲ ಮತ್ತು ಸ್ಫೂರ್ತಿ ನೀಡಿದೆ. ನವ ಭಾರತದ ಚೈತನ್ಯದ ಮುಖ್ಯ ದೃಷ್ಟಾಂತಗಳಲ್ಲಿ ನೀವು ಒಬ್ಬರು. ಕುಟುಂಬದ ಹೆಸರು ಯುವ ಜನರ ಹಣೆಬರಹವನ್ನು ಬರೆಯುವುದಿಲ್ಲ. ಅವರಾಗಿಯೇ ತಮ್ಮ ಹೆಸರು ಮತ್ತು ಗುರಿಯನ್ನು ಸಾಧಿಸುತ್ತಾರೆ.

ಒತ್ತಡ ಎದುರಿಸುವುದನ್ನು ಕಲಿಸಿದ್ದೀರಿ
ಮೈದಾನದಲ್ಲಿನ ನಿಮ್ಮ ಅನೇಕ ಕ್ಷಣಗಳು ಭಾರತದ ಒಂದು ನಿರ್ದಿಷ್ಟ ಪೀಳಿಗೆಗೆ ಪ್ರೇರಣೆಯಾಗಿದೆ. ಈ ಪೀಳಿಗೆಯ ಭಾರತೀಯರು ಸವಾಲುಗಳನ್ನು ಎದುರಿಸಲು ಹಿಂಜರಿಯುವುದಿಲ್ಲ ಮತ್ತು ಕಠಿಣ ಸಂದರ್ಭಗಳಲ್ಲಿ ಒಬ್ಬರನ್ನೊಬ್ಬರು ಬೆಂಬಲಿಸುತ್ತಾರೆ. ನೀವು ಸವಾಲುಗಳನ್ನು ಎದುರಿಸುವ ಮತ್ತು ಅತ್ಯಂತ ಒತ್ತಡದ ಸಂದರ್ಭಗಳಲ್ಲಿ ಹೆಚ್ಚು ತಿಳಿವಳಿಕೆಯಿಲ್ಲದ ಯುವಕರಿಗೆ ಬೆಂಬಲ ನೀಡುವುದನ್ನು ನೋಡಿದ್ದೇವೆ. ಇದಕ್ಕೆ 2007ರ ಟಿ-20 ವಿಶ್ವಕಪ್ ಫೈನಲ್ ಅತ್ಯಂತ ಸೂಕ್ತ ಉದಾಹರಣೆ.

ಭಾರತೀಯ ಸೇನೆಯ ನಂಟು
ನೀವು ಯಾವ ರೀತಿಯ ಕೇಶ ವಿನ್ಯಾಸ ಶೈಲಿ ಹೊಂದಿದ್ದಿರಿ ಎನ್ನುವುದು ಮುಖ್ಯವಲ್ಲ. ಸೋಲು ಮತ್ತು ಗೆಲುವು ಎರಡೂ ಸಂದರ್ಭಗಳಲ್ಲಿ ಶಾಂತಯುತವಾಗಿ ಇರುತ್ತಿದ್ದದ್ದು ಪ್ರತಿ ಯುವಕರಿಗೂ ಮುಖ್ಯ ಪಾಠ. ಭಾರತೀಯ ಸಶಸ್ತ್ರ ಪಡೆಗಳೊಂದಿಗಿನ ನಿಮ್ಮ ವಿಶೇಷ ನಂಟನ್ನು ಶ್ಲಾಘಿಸುತ್ತೇನೆ. ನಿಮ್ಮೊಂದಿಗೆ ಕಾಲ ಕಳೆಯಲು ಇನ್ನು ಸಾಕ್ಷಿ ಮತ್ತು ಜಿವಾಗೆ ಸಮಯ ಸಿಗಲಿದೆ ಎಂದು ಭಾವಿಸುತ್ತೇನೆ ಎಂದಿರುವ ಮೋದಿ, ಧೋನಿಯ ಭವಿಷ್ಯದ ಬದುಕಿಗೆ ಶುಭ ಕೋರಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications