ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ನಷ್ಟದ ಕಾರಣ: ನಿಲ್ಲಲಿದೆಯೇ ಉಚಿತ ಪಡಿತರ ವಿತರಣೆ ವ್ಯವಸ್ಥೆ?
ನವದೆಹಲಿ ಜೂ.24: ಕೊರೋನಾ ಆರ್ಥಿಕ ಸಂಕಷ್ಟ ಹಿನ್ನೆಲೆ ಕೇಂದ್ರ ಸರ್ಕಾರದ ದೇಶದ ಸುಮಾರು 80ಕೋಟಿ ಜನರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ನೀಡುತ್ತಿದ್ದ ಪಡಿತರ ವಿತರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗಿದೆ. ಹಣಕಾಸಿನ ಸ್ಥಿತಿ ಸ್ಥಿರಗೊಳಿಸುವ ನಿಟ್ಟಿನಲ್ಲಿ ಯೋಜನೆ ನಿಲ್ಲಿಸುವ ಕುರಿತು ಕೇಂದ್ರ ಹಣಕಾಸು ಸಚಿವಾಲಯ ಚರ್ಚಿಸಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ' (ಪಿಕೆಜಿಕೆಎವೈ)ಅಥವಾ ಉಚಿತ ಆಹಾರ ಧ್ಯಾನ್ಯ ವಿತರಣೆ ಯೋಜನೆಯಡಿ ಒಬ್ಬ ವ್ಯಕ್ತಿಗೆ ಒಂದು ತಿಂಗಳಿಗೆ ಐದು ಕೇಜಿ ಅಕ್ಕಿ, ಒಂದು ಕೇಜಿ ಗೋಧಿಯನ್ನು ವಿತರಿಸುತ್ತಿದೆ. ಈ ಯೋಜನೆಯನ್ನು ಮುಂದಿನ ಸೆಪ್ಟಂಬರ್ ವರೆಗೂ (ಹೆಚ್ಚುವರಿ ಆರು ತಿಂಗಳು) ವಿಸ್ತರಿಸಿ ಸರ್ಕಾರ ಈ ಹಿಂದೆಯೇ ಆದೇಶಿಸಿತ್ತು.
ಉದ್ದೇಶದಂತೆ ಸಪ್ಟೆಂಬರ್ ನಂತರ ಯೋಜನೆ ನಿಲ್ಲಿಸಬೇಕಾ? ಮುಂದುವರಿಸಬೇಕಾ? ಎಂಬುದರ ಬಗ್ಗೆ ಹಣಕಾಸು ಸಚಿವಾಲಯ ಕೆಲವು ಮಾಹಿತಿಗಳನ್ನು ಸರ್ಕಾರದೊಂದಿಗೆ ಹಂಚಿಕೊಂಡಿದೆ. ಅದರ ಪ್ರಕಾರ ಯೋಜನೆ ನಿಲ್ಲಿಸಬೇಕು ಇಲ್ಲವೇ ಒಂದಷ್ಟು ಹೊರೆಯಾಗುವ ಒಂದಷ್ಟು ತೆರಿಗೆಗಳನ್ನು ಕಡಿತಗೊಳಿಸಬೇಕು ಎಂದು ಸರ್ಕಾರವನ್ನು ಕೇಳಿದೆ ಎನ್ನಲಾಗಿದೆ.

ಗಂಭೀರ ಹಣಕಾಸಿನ ಪರಿಸ್ಥಿತಿ
ಪ್ರಸಕ್ತ ವರ್ಷದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಆಹಾರದ ಮೇಲಿನ ಸಹಾಯಧನ (ಸಬ್ಸಿಡಿ) ಕಡಿತಗೊಳಿಸಿದ್ದರು. ವರ್ಷದ ಹಿಂದೆ ಆಹಾರದ ಮೇಲೆ ನೀಡುತ್ತಿದ್ದ 2.88ಲಕ್ಷ ಕೋಟಿ ರೂ. ಅನ್ನು 2.07ಲಕ್ಷ ಕೋಟಿಗಳಿಗೆ ಇಳಿಕೆ ಮಾಡಿ ತಮ್ಮ 2022ರ ಆಯವ್ಯಯದಲ್ಲಿ ತಿಳಿಸಿದ್ದರು.
ಇನ್ನು ಸರ್ಕಾರ ಉದ್ದೇಶದಂತೆ ಸಪ್ಟೆಂಬರ್ ವರೆಗೆ ಉಚಿತವಾಗಿ ಪಡಿತರ ನೀಡಿದರೆ ಆಹಾರದ ಮೇಲಿನ ಸಬ್ಸಿಡಿ 2.87ಲಕ್ಷ ಕೋಟಿ ರು. ತಲುಪುವ ನಿರೀಕ್ಷೆ ಇದೆ ಎನ್ನಲಾಗಿದೆ. ಒಂದು ವೇಳೆ ಉಚಿತ ಪಡಿತರ ವಿತರಣೆ ಮತ್ತೆ ವಿಸ್ತರಣೆಯಾದರೆ ಸಬ್ಸಿಡಿ ಬಿಲ್ 3.7ಲಕ್ಷ ಕೋಟಿಗಳಿಗೆ ಹೆಚ್ಚಾಬಹುದು ಎಂದು ಅಂದಾಜಿಸಲಾಗಿದೆ.

ಅಲ್ಲದೇ ಸರ್ಕಾರ ಕೈಗೊಂಡ ಕ್ರಮಗಳು ಸಹ ಕೇಂದ್ರ ಹಣಕಾಸಿನ ನೀತಿಯ ಮೇಲೆ ಒತ್ತಡ ಹೆಚ್ಚಾಗಲು ಕಾರಣವಾಗಿದೆ. ಇದರಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿರುವುದು , ರಸಗೊಬ್ಬರ ಮೇಲಿನ ಸಹಾಯಧನ ಹೆಚ್ಚಿಸಿರುವುದು ಕಸ್ಟಮ್ಸ್ ಸುಂಕ ಕಡಿತಗೊಳಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಹಣಕಾಸಿ ಸ್ಥಿತಿಯಲ್ಲಿ ಸ್ಥಿರತೆ ಉಳಿದಲ್ಲ ಎಂದು ಕೇಂದ್ರದ ಗಮನಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಿಕೆಜಿಕೆಎವೈ ಯೋಜನೆ ಮುಂದುವರಿಸುವ ಅಥವಾ ನಿಲ್ಲಿಸುವ ಬಗ್ಗೆ ಸರ್ಕಾರ ಇನ್ನು ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಹಣಕಾಸು ಸಚಿವಾಲಯದ ನೀಡಿದ ಮಾಹಿತಿ ಮೇರೆಗೆ ಮುಂದಿನ ದಿನಗಳಲ್ಲಿ ತನ್ನ ನಿಲುವು ತಿಳಿಸಲಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications