ಪಿಎನ್ಬಿ ವಂಚನೆ ಆರೋಪಿ ಚೋಕ್ಸಿ ಆಂಟಿಗುವಾದಲ್ಲಿ ಸೆಟ್ಲ್!
ನವದೆಹಲಿ, ಜುಲೈ 27: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೇಶಭ್ರಷ್ಟನಾಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ, ಪ್ರಕರಣ ಬಹಿರಂಗವಾಗಿ ಸಿಬಿಐ ತನಿಖೆ ಆರಂಭಿಸುವ ಕೆಲವು ತಿಂಗಳ ಮುಂಚೆಯಷ್ಟೇ ಆಂಟಿಗುವಾದ ಪೌರತ್ವ ಪಡೆದುಕೊಂಡಿದ್ದರು.
ಚೋಕ್ಸಿ ಅವರು ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧ ಯಾವುದಾದರೂ ಪ್ರಕರಣಗಳಿದ್ದರೆ ಮಾಹಿತಿ ನೀಡುವಂತೆ ಆಂಟಿಗುವಾ ಅಧಿಕಾರಿಗಳು ಭಾರತಕ್ಕೆ ತಿಳಿಸಿದ್ದರು. ಆದರೆ, ಆಗ ಚೋಕ್ಸಿ ವಿರುದ್ಧ ಯಾವ ಪ್ರಕರಣವೂ ಇರಲಿಲ್ಲ.
ಜನವರಿ ಮೊದಲ ವಾರ ಭಾರತದಿಂದ ತೆರಳಿದ್ದ ಚೋಕ್ಸಿ, ಜನವರಿ 15ರಂದು ಅಲ್ಲಿನ ಪೌರತ್ವದ ದಾಖಲೆಗಳನ್ನು ಪಡೆದುಕೊಂಡಿದ್ದರು.

ಸಂಬಂಧಿ ನೀರವ್ ಮೋದಿ ಜತೆಗೂಡಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ವಿವಿಧ ಶಾಖೆಗಳಿಗೆ 13,000 ಕೋಟಿ ರೂ ವಂಚಿಸಿದ ಪ್ರಕರಣದಲ್ಲಿ ಚೋಕ್ಸಿ ಭಾರತಕ್ಕೆ ಬೇಕಾಗಿದ್ದಾರೆ.
ದೇಶಭ್ರಷ್ಟ ಆರೋಪ ಹೊತ್ತಿರುವ ಚೋಕ್ಸಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಿದರೆ ಅದನ್ನು ಪರಿಗಣಿಸಬಹುದು ಎಂದು ಆಂಟಿಗುವಾ ಹೇಳಿದೆ.
ಉದ್ಯಮ ವಿಸ್ತರಣೆಯ ಉದ್ದೇಶ
ಕೆರೆಬಿಯನ್ನಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸುವ ಹಾಗೂ 130 ದೇಶಗಳಿಗೆ ವೀಸಾ ರಹಿತವಾಗಿ ಪ್ರಯಾಣಿಸಬಹುದಾದ ಸೌಲಭ್ಯಕ್ಕಾಗಿ ಆಂಟಿಗುವಾದ ಪೌರತ್ವವನ್ನು ಬಯಸಿ ಅರ್ಜಿ ಸಲ್ಲಿಸಿದ್ದಾಗಿ ಚೋಕ್ಸಿ ಹೇಳಿದ್ದಾರೆ.
ಹೂಡಿಕೆ ಯೋಜನೆಯ ಪೌರತ್ವದ ಸೌಲಭ್ಯದ ಅಡಿಯಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾಗಿ ಹೇಳಿಕೊಂಡಿದ್ದಾರೆ.
ಚೋಕ್ಸಿ ಆಂಟಿಗುವಾದ ಪೌರತ್ವ ಪಡೆದ ಬಳಿಕ ಜನವರಿ 29ರಂದು ಸಿಬಿಐ ಚೋಕ್ಸಿ ಹಾಗೂ ನೀರವ್ ಮೋದಿ ವಿರುದ್ಧ ತನಿಖೆ ಆರಂಭಿಸಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications