ಉಗ್ರರ ಲಾಂಚ್ ಪ್ಯಾಡ್ಗಳು ಭರ್ತಿ, ದಾಳಿಗೆ ಪಾಕ್ ಹುನ್ನಾರ: ಭಾರತೀಯ ಸೇನೆ ಎಚ್ಚರಿಕೆ
ನವದೆಹಲಿ, ಜೂನ್ 1: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ಯಲ್ಲಿ ಇರುವಂತಹ ಉಗ್ರರ ಶಿಬಿರಗಳು ಮತ್ತು 15 ಲಾಂಚ್ಪ್ಯಾಡ್ಗಳು ತುಂಬಿವೆ, ಯಾವುದೇ ಕ್ಷಣದಲ್ಲಿ ಬೇಕಾದರೂ ಉಗ್ರರು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮುಂದಾಗಬಹುದು ಎಂದು ಭಾರತೀಯ ಸೇನೆ ಎಚ್ಚರಿಸಿದೆ.
'ಜಮ್ಮು ಮತ್ತು ಕಾಶ್ಮೀರದ ಗಡಿಯುದ್ಧಕ್ಕೂ ಈ ಬೇಸಿಗೆಯಲ್ಲಿ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚಾಗುವುದನ್ನು ನಿರೀಕ್ಷಿಸುತ್ತೇವೆ' ಎಂದು ಸೇನೆಯ ಉನ್ನತ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಬಿ.ಎಸ್ ರಾಜು ಹೇಳಿದ್ದಾರೆ.
ಬೇಸಿಗೆಯಲ್ಲಿ ಹಿಮ ಕಡಿಮೆ ಆಗುವುದರಿಂದ ಭಾರತದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ಯಲ್ಲಿ ಇರುವ ಉಗ್ರರ ಶಿಬಿರಗಳು ಮತ್ತು ಲಾಂಚ್ ಪ್ಯಾಡ್ಗಳು ಭರ್ತಿಯಾಗಿವೆ. ಯಾವುದೇ ಕ್ಷಣದಲ್ಲಿ ಉಗ್ರರು ದಾಳಿಗೆ ಮುಂದಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಣಿವೆ ರಾಜ್ಯ ಹಾಗೂ ಕಣಿವೆ ಕೇಂದ್ರಾಡಳಿತ ಪ್ರದೇಶದ ಜನರು ಶಾಂತಿ ಹಾಗೂ ನೆಮ್ಮದಿಯಿಂದ ಬದುಕುತ್ತಿರುವುದನ್ನು ಅರಗಿಸಿಕೊಳ್ಳಲಾಗದ ಪಾಕಿಸ್ತಾನ, ಅಲ್ಲಿ ಕಡಿಮೆಯಾಗುತ್ತಿರುವ ಉಗ್ರರ ಸಂಖ್ಯೆಯನ್ನು ಹೆಚ್ಚಿಸಲು ಹುನ್ನಾರ ನಡೆಸುತ್ತಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿದರು.
ಇನ್ನು, ಉಗ್ರರ ಗಡಿ ನುಸುಳುವಿಕೆಗೆ ಅನುವು ಮಾಡಿಕೊಡಲು ಪಾಕ್ ಯೋಧರು ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದ ಲೆಫ್ಟಿನೆಂಟ್ ಜನರಲ್ ರಾಜು, ಪಾಕಿಸ್ತಾನ ಸೇನೆಯ ದಾಳಿಗೆ ತಕ್ಕದುದಾದ ಪ್ರತಿ ದಾಳಿ ಮಾಡುವ ಮೂಲಕ ಸೇನೆ, ಉಗ್ರರ ಒಳನುಸುಳುವಿಕೆಯನ್ನು ವಿಫಲಗೊಳಿಸಲಾಗುತ್ತಿದೆ ಎಂದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications