ಓಯೋ ರೂಮ್ನಲ್ಲಿ ಮಾಡಬಾರದ್ದನ್ನ ಮಾಡಿ ತಗ್ಲಾಕೊಂಡ ಪ್ರೇಮಿಗಳು
OYO Rooms: ಓಯೋ ರೂಮ್ಸ್ ಇದೀಗ ದೇಶಾದ್ಯಂತ ಟ್ರೆಂಡ್ನಲ್ಲದೆ. ತುಂಬಾ ಪ್ರೇಮಿಗಳು, ಯುವಕರು ಯುವತಿಯರ ತಾಣವಾಗಿಬಿಟ್ಟಿದೆ ಎನ್ನುವ ಮಾತಿದೆ. ಮತ್ತೊಂದೆಡೆ ನೋಡೋದಾದ್ರೆ, ದೂರದ ಊರುಗಳಿಂದ ಬಂದವರಿಗೆ ಅತೀ ಕಡಿಮೆ ವೆಚ್ಚದಲ್ಲಿ ತಂಗಲು ಇದು ಸೂಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದೇ ಓಯೋ ರೂಮ್ಸ್ನಲ್ಲಿ ಪ್ರೇಮಿಗಳಿಬ್ಬರು ಮಾಡಬಾರದ್ದನ್ನ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಘಟನೆ ನಡೆದಿದೆ.
ಓಯೋ ಅಂದಾಕ್ಷಣ ಬಹುತೇಕ ಮಂದಿ ತಲೆಗೆ ಮೊದಲು ಬರುವುದೇ ಇದನ್ನು ಅನೈತಿಕ ಚಟುವಟಿಕೆಗಾಗಿ ಬಳಸಿಕೊಳ್ಳುತ್ತಾರೆ ಎನ್ನುವುದು. ಆದರೆ, ಮತ್ತೊಂದು ಒಳ್ಳೆಯ ದೃಷ್ಟಿಯಲ್ಲಿ ನೋಡೋದಾದ್ರೆ, ದೂರದ ಊರುಗಳಿಂದ ಬಂದಂಥವರಿಗೆ ಕಡಿಮೆ ವೆಚ್ಚದಲ್ಲಿ ತಂಗಲು ಇದು ತುಂಬಾ ಸಹಾಯಕ ಆಗಿದೆ ಅಂತಲೂ ಹೇಳಬಹುದು. ಆದರೆ, ಕೆಲವರು ಪ್ರೇಮಿಗಳೆಂದು ಹೇಳಿಕೊಂಡು ತಂಗುವ ನೆಪದಲ್ಲಿ ಅನೈತಿಕ ಕೆಲಸಗಳಿಗೆ ಕೈಹಾಕುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಅಂತರರಾಜ್ಯ ಪ್ರೇಮಿಗಳಿಬ್ಬರು ತುಂಬಾ ದುಡ್ಡು ಮಾಡಿ ಐಶಾರಾಮಿ ಜೀವನ ಸಾಗಿಸೋಣ ಎನ್ನುವ ಯೋಜನೆ ಹಾಕಿಕೊಂಡು ಮಾಡಿ ಗಾಂಜಾ ವ್ಯಾಪಾರ ಶುರು ಮಾಡಿದ ಘಟನೆ ನಡೆದಿದೆ. ಈ ಕಳ್ಳ ಜೋಡಿ ಪೊಲೀಸರ ಕೈಗೆ ಸಿಗದೇ ಇರಲು ಓಯೋ ರೂಮ್ನಲ್ಲಿ ಉಳಿದುಕೊಂಡು ಅಲ್ಲಿಂದಲೇ ಗಾಂಜಾ ದಂಧೆ ಆರಂಭ ಮಾಡಿ ಇದೀಗ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾರೆ.
ಇದರ ಸುಳಿವು ಸಿಕ್ಕ ಕೂಡಲೇ ಪೊಲೀಸರು ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಹೈದರಾಬಾದ್ ನಗರದ ಕೊಂಡಾಪುರದ ಓಯೋ ರೂಮ್ಸ್ನಲ್ಲಿ ನಡೆದಿದೆ. ಇದೀಗ ಯುವಕ ಹಾಗೂ ಯುವತಿಯನ್ನ ಎಸ್ಟಿಎಫ್ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಸ್ಟಿಎಫ್ ಅಧಿಕಾರಿ ನಂದ್ಯಾಲ ಅಂಜಿರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ಕವಾಲಿಯ ದೇವೆಂದೂಲ ರಾಜು (25) ಮಧ್ಯಪ್ರದೇಶದ ಸಂಜನಾ ಮಂಜ (18) ಬಂಧಿತರಾಗಿದ್ದಾರೆ. ಇವರು ಭೇಟಿಯಾದ ಕೆಲವೇ ದಿನಗಳಲ್ಲಿ ಪ್ರೀತಿಯಲ್ಲಿ ಬಿದ್ದಿದ್ದಾರೆ. ಬಳಿಕ ಹಣ ಗಳಿಸುವ ಯೋಜನೆ ರೂಪಿಸಿದ್ದು, ಒಯೋ ರೂಮ್ಗಳನ್ನು ಬಾಡಿಗೆಗೆ ತೆಗೆದುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಇವರಿಬ್ಬರು ಕೊಂಡಾಪುರದ ಓಯೋ ರೂಮ್ನಲ್ಲಿ ತಂಗಿದ್ದು, ತುಂಬಾ ದಿನಗಳಿಂದ ಗಾಂಜಾ ದಂಧೆ ನಡೆಸುತ್ತಿದ್ದರು. ಶುಕ್ರವಾರ ರಾತ್ರಿ ಎಸ್ಟಿಎಫ್ ತಂಡ ತಪಾಸಣೆ ನಡೆಸಿ ದಾಳಿ ನಡೆಸಿದೆ. ಇಬ್ಬರೂ ಬೇರೆ ಬೇರೆ ಕಡೆಯಿಂದ ಗಾಂಜಾ ತಂದು ಓಯೋ ಕೊಠಡಿಯಿಂದ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಓಯೋ ರೂಮ್ಸ್ ತೆರೆದಿರುವುದು ಒಳ್ಳೆಯ ಉದ್ದೇಶಕ್ಕೆ ಆದರೂ, ಕೆಲವರು ಇದನ್ನೇ ಬಂಡವಾಳ ಪ್ರೇಮಿಗಳೆಂದು ಹೇಳಿಕೊಂಡು ಅಲ್ಲೇ ತಂಗಿ ಅನೈತಿಕ ಚಟುವಟಿಕೆಗೆ ಇಳಿಯುತ್ತಿರುವುದು ಬೆಳಕಿಗೆ ಬರುತ್ತಿದೆ. ಹೀಗೆ ಯಾರೋ ಕೆಲವು ಮಂದಿ ಮಾಡುವ ತಪ್ಪಿನಿಂದ ಕಡಿಮೆ ವೆಚ್ಚದಲ್ಲಿ ರೂಮ್ಸ್ ಸಗುತ್ತದೆವೆಂದು ಓಯೋ ಕೊಠಡಿಗೆ ತಂಗಲು ಬಂದಂತಹ ಹಾಗೂ ಬರುವಂತಹವರಿಗೆ ಸಂಕಷ್ಟ ಎದುರಾದಂತಾಗಿದೆ. ಈಗಾಗಲೇ ದೇಶದ ಹಲವೆಡೆ ಓಯೋ ರೂಮ್ಸ್ಗೆ ಅವಿವಾಹಿತರಿಗೆ ಪ್ರವೇಶ ನಿರ್ಬಂಧದ ನಿಯಮ ಹೊರಡಿಸಲಾಗಿದೆ. ಈ ನಿಯಮವನ್ನು ಎಲ್ಲಾ ಕಡೆ ಜಾರಿ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications