ಆಂಧ್ರದಲ್ಲಿ ಪತ್ನಿಗೆ ವಿದ್ಯುತ್ ಹರಿಸಿ ಕೊಲ್ಲಲೆತ್ನಿಸಿದ ಟೆಕ್ಕಿ!
ಪೆನಮಾಲುರು(ಆಂಧ್ರಪ್ರದೇಶ), ಫೆಬ್ರವರಿ 05: ದೇಹಕ್ಕೆ ವಿದ್ಯುತ್ ಹರಿಸುವ ಮೂಲಕ ಪತ್ನಿಯನ್ನು ಕೊಲ್ಲಲು ಪ್ರಯತ್ನಿಸಿದ ಆಂಧ್ರಪ್ರದೇಶದ ಸಾಫ್ಟ್ ವೇರ್ ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಕೃಷ್ಣ ಜಿಲ್ಲೆಯ ಪೆನಮಾಲುರು ಎಂಬಲ್ಲಿ ನಡೆದಿದೆ.
ಎಸ್ ರಾಜರತ್ನಂ ಎಂಬ ಟೆಕ್ಕಿ 28 ವರ್ಷದ ತನ್ನ ಪತ್ನಿ ಪ್ರಶಾಂತಿ ಅವರು ಮಲಗಿದ್ದ ಸಮಯದಲ್ಲಿ ಅವರಿಗೆ ವಿದ್ಯುತ್ ಶಾಕ್ ನೀಡಿ ಸಾಯಿಸಲು ಪ್ರಯತ್ನಿಸಿದ್ದಾರೆ. ಇತ್ತೀಚೆಗೆ ಈಕೆ ಹೆಣ್ಣು ಮಗುವನ್ನು ಹೆತ್ತಿದ್ದೇ ಈ ಕೃತ್ಯಕ್ಕೆ ಕಾರಣ ಎಂಬುದು ಆಕೆ ನಂತರ ನೀಡಿದ ದೂರಿನಲ್ಲಿ ದಾಖಲಾಗಿದೆ.
ಹೆಣ್ಣು ಮಗು ಜನಿಸಿದಾಗಿನಿಂದಲೂ ಈತ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಆಕೆ ಮಲಗಿದ್ದ ಸಮಯದಲ್ಲಿ ಆಕೆಯ ಕೈಗೆ ವೈರ್ ಕಟ್ಟಿ ಶಾಕ್ ನೀಡಲು ಯತ್ನಿಸಿದ್ದು. ತಕ್ಷಣವೇ ಪತ್ನಿಗೆ ಎಚ್ಚರವಾಗಿ, ಪತಿ ತನ್ನನ್ನು ಕೊಲ್ಲಲು ಯತ್ನಿಸುತ್ತಿರುವುದು ತಿಳಿದು ಆಕೆ ಮಕ್ಕಳೊಂದಿಗೆ ಮನೆಯಿಂದ ಆಚೆ ಬಂದಿದ್ದಾರೆ.

ಆಕೆಯ ಕತ್ತು ಮತ್ತು ಮುಖದ ಮೇಲೆ ಗಾಯದ ಕಲೆಗಳಿದ್ದು, ಪತಿ ಆಕೆಗೆ ದೈಹಿಕ, ಮಾನಸಿಕ ಕಿರುಕುಳ ನೀಡುತ್ತಿದ್ದ ಎಂಬುದು ಸಾಬೀತಾಗಿದೆ. ಸದ್ಯಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಹೆಣ್ಣು ಶಿಶುಗಳನ್ನು ರಕ್ಷಿಸುವುದಕ್ಕಾಗಿ ಭಾರತದ ಸರ್ಕಾರ ಬೇಟಿ ಬಚಾವೋ, ಬೇಟಿ ಪಢಾವೋದಂಥ ಯೋಜನೆಗಳನ್ನು ಜಾರಿಗೆ ತರುತ್ತಿದ್ದರೂ, ಸುಶಿಕ್ಷಿತ ಸಾಫ್ಟ್ ವೇರ್ ಉದ್ಯೋಗಿಯೊಬ್ಬ ಇಂಥ ನೀಚ ಕೃತ್ಯದಲ್ಲಿ ತೊಡಗಿರುವುದು ದುರಂತ ಎನ್ನಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications