ಉತ್ತರ ಪ್ರದೇಶದಲ್ಲಿ ಪುರುಷ ಪೊಲೀಸರಿಂದ ಮಹಿಳೆಯರ ಮೇಲೆ ಹಲ್ಲೆ
ಉತ್ತರ ಪ್ರದೇಶ, ನವೆಂಬರ್ 7: ಉತ್ತರ ಪ್ರದೇಶದ ಪೋಲಿಸರು ಸಾಮಾನ್ಯ ಮಹಿಳೆಯರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ. ಮಹಿಳೆಯರನ್ನು ಥಳಿಸಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ಪೋಲಿಸರ ಹಾಗೂ ಪ್ರತಿಭಟನಾನಿರತ ಮಹಿಳೆಯರ ಮಧ್ಯದಲ್ಲಿ ತೀವ್ರ ಘರ್ಷಣೆಯಾಗಿದ್ದು ಪುರುಷ ಪೊಲೀಸ್ ಪೇದೆಯೊಬ್ಬರು ಮಹಿಳೆಯನ್ನು ಹಲ್ಲೆ ಮಾಡಿ, ಥಳಿಸಿಸುತ್ತಿರುವ ಘಟನೆ ವಿಡಿಯೋದಲ್ಲಿ ಕಾಣುತ್ತಿದೆ. ಈ ವೇಳೆ ಪೋಲಿಸರ ವಾಹನಗಳ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ ನಂತರ ಪೋಲಿಸರು ಲಾಠಿಯಿಂದ ಮಹಿಳೆಯರಿಗೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ವೈರಲ್ ಆಗಿರುವ ವಿಡಿಯೋ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್ಪುರದ್ದಾಗಿದ್ದು, ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದರು. ಪ್ರತಿಮೆ ಇರುವ ಭೂಮಿಯ ವಿವಾದ ಈ ಪ್ರತಿಭಟನೆಗೆ ಕಾರಣವಾಯಿತು. ಮತ್ತೊಂದು ವಿಡಿಯೋದಲ್ಲಿ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕೂದಲನ್ನು ಎಳೆದಾಡುತ್ತಿರುವುದು ಕಂಡುಬಂದಿದೆ.
ಯುಪಿ ಪೊಲೀಸರು ಮಹಿಳೆಯರನ್ನು ಲಾಠಿಯಿಂದ ಥಳಿಸುವುದು ಮತ್ತು ಅವರ ಮೇಲೆ ನಿಂದನೆಗಳನ್ನು ಮಾಡಿರುವುದು ಕಂಡುಬಂದಿದೆ. ಪೊಲೀಸರ ಅತಿರೇಕದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ಆದರೆ, ಪೊಲೀಸರು ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಮಹಿಳೆಯರು ತಮ್ಮ ಮತ್ತು ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಅವರು ಸಣ್ಣ ಬಲ ಪ್ರಯೋಗ ಮಾಡಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

'ಈ ಪರಿಸ್ಥಿಯನ್ನು ನಿಭಾಯಿಸಲು ನಾವು ಹಗುರವಾಗಿ ಲಾಠಿ ಪ್ರಹಾರ ಮಾಡಿದ್ದೇವೆ ಆದರೆ, ಕೆಲವು ಪ್ರತಿಭಟನಾಕಾರರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು' ಎಂದು ಹಿರಿಯ ಅಂಬೇಡ್ಕರ್ ನಗರ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಅಂಬೇಡ್ಕರ್ ನಗರ ರೈಸಿಂಗ್ನಲ್ಲಿ ಯುಪಿ ಪೊಲೀಸರು ಮಹಿಳೆಯರ ಮೇಲೆ ಥಳಿಸಿದ್ದಾರೆ. ಭಾರತೀಯ ಕಾನೂನು ತನ್ನ ಹಿಂದಿನ ವಸಾಹತುಶಾಹಿ ಪರಂಪರೆಯನ್ನೇ ಮುಂದುವರಿಸಿದೆ ಎಂದು ಉತ್ತರ ಪ್ರದೇಶದ ಅನೇಕ ಮಹಿಳೆಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
उत्तर प्रदेश: @Uppolice द्वारा अम्बेडकर नगर मे महिलाओं पर बर्बरतापूर्ण लाठी चलाना उन्हें भद्दी गालियाँ देना क्या उचित तरीका है?
— Bahujan4India (@Bahujan4India) November 6, 2022
Modi ji talks about women's honor and on the other hand, the BJP govt of UP respects women by beating them with sticks. #DalitLivesMatter pic.twitter.com/VDexWrqxN0
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications