ಕಾಶ್ಮೀರದಲ್ಲಿ ಸುಧಾರಿತ ಸ್ಫೋಟಕ ಸಾಧನ ವಶ: ತಪ್ಪಿದ ಬೃಹತ್ ಉಗ್ರ ದಾಳಿ
ಶ್ರೀನಗರ, ಡಿಸೆಂಬರ್ 26: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ಪ್ರಮುಖ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 15 ಕಿಲೋಗ್ರಾಂ ತೂಕದ ಸಿಲಿಂಡರಾಕಾರದ ವಸ್ತುವಿನಲ್ಲಿ ಐಇಡಿ ತರಹದ ವಸ್ತು ಸಂಗ್ರಹಿಸಲಾಗಿತ್ತು. 300-400 ಗ್ರಾಂ ಆರ್ಡಿಎಕ್ಸ್, ಏಳು 7.62 ಎಂಎಂ ಕಾರ್ಟ್ರಿಡ್ಜ್ಗಳು ಮತ್ತು ಐದು ಡಿಟೋನೇಟರ್ಗಳನ್ನು ಜಿಲ್ಲೆಯ ಬಸಂತಗಢ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಘಟನೆಯನ್ನು ಖಚಿತಪಡಿಸಿದ್ದಾರೆ.
ಇದಲ್ಲದೆ, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿಯ ಗುರುತುಗಳೊಂದಿಗೆ ಕೋಡ್ ಮಾಡಿದ ಚಿಹ್ನೆಗಳು ಮತ್ತು ಡೈರಿಯನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟಕ ವಸ್ತುಗಳ ಪತ್ತೆಗೆ ಸಂಬಂಧಿಸಿದಂತೆ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದರು.
ಬಸಂತಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ರಾಮನಗರದ ಎಸ್ಡಿಪಿಒ ಭೀಷ್ಮ್ ದುಬೆ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತರ ಪ್ರತಿಭಟನೆ
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಿರುದ್ಧ ಕಾಶ್ಮೀರಿ ಪಂಡಿತರು ಡಿಸೆಂಬರ್ 26 ರಂದು ಪ್ರತಿಭಟನೆ ನಡೆಸಿದರು. ಪುನರ್ವಸತಿ ವಿಚಾರವಾಗಿ ಜಮ್ಮುವಿನಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನಾಕಾರರು ಕಾಶ್ಮೀರಿ ಪಂಡಿತರ ಸ್ಥಳಾಂತರಕ್ಕೆ ಒತ್ತಾಯಿಸಿದರು.
'ನಾವು 229 ದಿನಗಳಿಂದ ಜೀವ ಉಳಿಸಲು ಒತ್ತಾಯಿಸುತ್ತಿದ್ದೇವೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಿಂದೂಗಳನ್ನು ಮಾತ್ರ ಕೊಲ್ಲುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರು ಇದನ್ನು ಯಾವುದೇ ಧರ್ಮಕ್ಕೆ ಸಂಬಂಧಿಸಬಾರದು. ನಮಗೆ ಪ್ರತಿದಿನ ಬೆದರಿಕೆ ಪತ್ರಗಳು ಬರುತ್ತವೆ. ನಾವು ದೇಶಪ್ರೇಮಿಗಳಾಗಿರುವ ಕಾರಣ ಅವರು ನಮ್ಮನ್ನು ಗುರಿಯಾಗಿಸುತ್ತಿದ್ದಾರೆ' ಎಂದು ಪ್ರತಿಭಟನಾಕಾರರು ಹೇಳಿದರು.












Click it and Unblock the Notifications