ಉ.ಪ್ರ: ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ
ಕಾರ್ಯಾಚರಣೆಯ ಪ್ರಥಮ ಹೆಜ್ಜೆಯಾಗಿ ಗೋರಖ್ ಪುರ ಸುತ್ತಲಿನ ಕಾರ್ಯಾಚರಣೆಗಳಲ್ಲಿ ಗೋಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ.
ಲಕ್ನೋ, ಮಾರ್ಚ್ 21: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೇ ಯೋಗಿ ಆದಿತ್ಯನಾಥ ಅವರು, ಬಿಜೆಪಿ ಪಕ್ಷವು ಚುನಾವಣೆಗೂ ಮುನ್ನ ನೀಡಿದ್ದ ಅಶ್ವಾಸನೆಗಳ ಈಡೇರಿಕೆಗೆ ಟೊಂಕ ಕಟ್ಟಿ ನಿಂತಿದ್ದಾರೆ.
ಮಂಗಳವಾರ, ಬೆಳ್ಳಂಬೆಳಗ್ಗೆಯೇ ಅನಧಿಕೃತ ಕಸಾಯಿ ಖಾನೆಗಳಿಗೆ ಬೀಗ ಬಿದ್ದಿದೆ. ಮಧ್ಯಾಹ್ನದ ಹೊತ್ತಿಗೆ ಬೀದಿ ಕಾಮಣ್ಣರನ್ನು ಬಗ್ಗು ಬಡಿಯುವ ಕಾರ್ಯಾಚರಣೆ ಆರಂಭವಾಗಿದೆ.

ಈ ಎರಡೂ ಕಾರ್ಯಾಚರಣೆಗಳು ಎಲ್ಲರ ಹುಬ್ಬೇರಿಸುವಷ್ಟರಲ್ಲಿ, ಸಂಜೆ ವೇಳೆ, ಪೊಲೀಸರು ಗೋರಖ್ ಪುರ ಪ್ರಾಂತ್ಯಗಳಲ್ಲಿರುವ ಗೋ ಮಾಂಸ ಮಾರಾಟ ಅಂಗಡಿಗಳನ್ನು ಮುಚ್ಚಿಸಿದ್ದಾರೆ.
ಈ ಹಿಂದೆ, ಗೋರಖ್ ಪುರದಲ್ಲಿ ಆದಿತ್ಯನಾಥ ಅವರ ಪ್ರಭಾವ ಇದ್ದಿದ್ದರಿಂದ ಅಲ್ಲಿದ್ದ ಗೋ ಮಾಂಸದ ಅಂಗಡಿಗಳು ಬೇರೆಡೆಗೆ ಸ್ಥಳಾಂತರಗೊಂಡಿದ್ದವು. ಆದರೀಗ, ಅವು ಎಲ್ಲೇ ಇರಲಿ ಗೋಮಾಂಸ ಮಾರಾಟಗಾರರಿಗೆ ನಡುಕ ಶುರುವಾಗಿದೆ. ಕಾರ್ಯಾಚರಣೆಯ ಪ್ರಥಮ ಹೆಜ್ಜೆಯಾಗಿ ಗೋರಖ್ ಪುರ ಸುತ್ತಲಿನ ಕಾರ್ಯಾಚರಣೆಗಳಲ್ಲಿ ಗೋಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ.
ಕಾರ್ಯಾಚರಣೆ ವೇಳೆ, ಪೊಲೀಸರ ವಿರುದ್ಧ ಗೋ ಮಾಂಸ ಮಾರಾಟಗಾರರು ತಿರುಗಿಬಿದ್ದಿದ್ದಾರೆ. ನಮಗೆ ಗೋ ಮಾಂಸ ಮಾರಾಟವೇ ಪ್ರಮುಖ ಜೀವನಾಧಾರವಾಗಿದ್ದು, ನಮಗೆ ಯೋಗಿಯವರು ಮತ್ತೊಂದು ಉದ್ಯೋಗ ನೀಡಿದರೆ ಅನುಕೂಲವಾಗುತ್ತದೆ ಎಂದು ಅಲವತ್ತುಕೊಂಡಿದ್ದಾರೆ ಎನ್ನಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications