ವೈಯಕ್ತಿಕ ಬದುಕಿನಂತೆಯೇ ರಾಜಕೀಯ ಜೀವನದಲ್ಲೂ ಸಂಕೀರ್ಣ ಸಂಬಂಧಕ್ಕೆ ಕೈಚಾಚಿದ ನಟ ಪವನ್ ಕಲ್ಯಾಣ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಪವರ್ಸ್ಟಾರ್ ಪವನ್ ಕಲ್ಯಾಣ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತೆಲಂಗಾಣದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಪವನ್ ಕಲ್ಯಾಣ್ ಆಂಧ್ರ ಪ್ರದೇಶದಲ್ಲಿ ಟಿಡಿಪಿ ಜೊತೆ ಸಂಬಂಧ ಬೆಳೆಸಿದ್ದಾರೆ. ಇದು ತೆಲುಗು ಭಾಷಿಗ ರಾಜ್ಯಗಳಲ್ಲಿ ಬಹುದೊಡ್ಡ ರಾಜಕೀಯ ಚರ್ಚೆಯನ್ನೇ ಹುಟ್ಟುಹಾಕಿದೆ.
ಜನಸೇನೆ ನಾಯಕ ಪವನ್ ಕಲ್ಯಾಣ್ ಅವರು ಹೈದರಾಬಾದ್ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಕಾಣಿಸಿಕೊಂಡರು. ಮಹತ್ವದ ಬೆಳವಣಿಗೆಯೊಂದರಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜನಸೇನೆ ಮೈತ್ರಿಕೂಟವು ಸ್ಪರ್ಧಿಸಲಿದೆ. ಬಿಜೆಪಿಯು ಜನಸೇನೆಗೆ ಎಂಟು ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.

ಇದೇ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರೊಂದಿಗೆ ಸಂಬಂಧ ಬೆಳೆಸಿದ್ದಾರೆ. ಕಳೆದ ತಿಂಗಳು ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ಬಳಿಕ ಪವನ್ ಕಲ್ಯಾಣ್ ಅವರು ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಗುಡುಗುತ್ತಲೇ ಬಂದಿದ್ದಾರೆ. ಆಂಧ್ರದಲ್ಲಿ ಜಗನ್ ಅವರನ್ನು ಎದುರಿಸಲು ಚಂದ್ರಬಾಬು ನಾಯ್ಡು ಜೊತೆ ನಿಲ್ಲುವುದಾಗಿ ತಿಳಿಸಿದ್ದಾರೆ.
ಆಂಧ್ರದ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಜಗನ್ ಅವರನ್ನು ಸೋಲಿಸಲಿವೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ರಾಜಮಂಡ್ರಿ ಜೈಲಿನಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಲು ಸಿನಿಮೀಯ ಶೈಲಿಯಲ್ಲಿ ಪವನ್ ಕಲ್ಯಾಣ್ ತೆರಳಿದ್ದರು.
2024 ರ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಮತ್ತು ತೆಲುಗು ದೇಶಂ ಪಕ್ಷ ಒಟ್ಟಾಗಿ ಹೋರಾಡಲಿದೆ ಎಂದು ಘೋಷಿಸಿದ್ದಾರೆ.

ನಾವು ಎನ್ಡಿಎ ( ಬಿಜೆಪಿ ನೇತೃತ್ವದ ಮೈತ್ರಿಕೂಟ ) ಭಾಗವಾಗಿ ಈಗಲೂ ಉಳಿದಿದ್ದೇವೆ. ಆಂಧ್ರದಲ್ಲಿ ಜಗನ್ ಅವರನ್ನು ಸೋಲಿಸಲು ನಾನು ಈ ಮೈತ್ರಿಕೂಟವನ್ನು ತ್ಯಜಿಸಲು ಸಿದ್ದನಾಗಿದ್ದೇನೆ. ಬಿಜೆಪಿ ಬಯಸಿದರೇ ಟಿಡಿಪಿ-ಜನಸೇನೆ ಎನ್ಡಿಎ ಮೈತ್ರಿಕೂಟಕ್ಕೆ ಸೇರಬಹುದು. ನಾವು ಮೂವರೂ ಒಟ್ಟಾಗಿ ಜಗನ್ ವಿರುದ್ಧ ಹೋರಾಡಬಹುದು ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಬಿಜೆಪಿಗೆ ಹತ್ತಿರವಾಗುತ್ತಿರುವ ಜಗನ್
ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಅವರು ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಪ್ರಧಾನಿ ಮೋದಿ ಅವರೂ ಸಹ ಜಗನ್ ಜೊತೆ ಸ್ನೇಹಕ್ಕೆ ಒಲವು ತೋರಿಸಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಒಂದು ವೇಳೆ, ಜಗನ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ, ಪವನ್ ಕಲ್ಯಾಣ್ ಅವರ ನಡೆ ಏನಾಗಿರಬಹುದು ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.
ಬಿಜೆಪಿಗೆ ಕೈಕೊಟ್ಟಿದ್ದ ಚಂದ್ರಬಾಬು ನಾಯ್ಡು
ಅಖಂಡ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು 2014 ರಲ್ಲಿ ಎನ್ಡಿಎ ಮೈತ್ರಿಕೂಟವನ್ನು ತೊರೆದರು. 2018 ರ ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಸಖ್ಯ ಬೆಳೆಸಿದರು. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಮತ್ತೊಮ್ಮೆ ನಂಬಲು ಬಿಜೆಪಿ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಚಂದ್ರಬಾಬು ನಾಯ್ಡು ಅವರು ಬಿಜೆಪಿ ನಾಯಕರ ಜೊತೆ ಮೈತ್ರಿ ಕುರಿತು ಹಲವು ಬಾರಿ ಮಾತುಕತೆ ನಡೆಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ.

ಪವನ್ ಕಲ್ಯಾಣ್- ಸಂಕೀರ್ಣ ವ್ಯಕ್ತಿತ್ವದ ಮಾಸ್ ನಟ
ಪವನ್ ಕಲ್ಯಾಣ್ ಅವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸುವುದಾದರೆ, ಅಲ್ಲೊಂದು ಸಂಕೀರ್ಣ ವ್ಯಕ್ತಿತ್ವ ಗೋಚರವಾಗುತ್ತದೆ. ಅವರು ವೈಯಕ್ತಿಕ ಹಾಗೂ ಸಾಮಾಜಿಕ ಬದುಕನ್ನು ಪ್ರತ್ಯೇಕವಾಗಿ ನೋಡುವುದಿಲ್ಲವೆಂಬುದು ಅರಿವಿಗೆ ಬರುತ್ತದೆ. ಅವರು ಎಲ್ಲವನ್ನೂ ಸಿನಿಮೀಯ ಶೈಲಿಯಲ್ಲಿಯೇ ಮಾಡಲು ಹೋಗುತ್ತಾರೆ. ತೆಲುಗು ಭಾಷಿಗ ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಅವರಿಗೆ ಜನಪ್ರಿಯತೆ ಇದ್ದರೂ, ಅವರು ರಾಜಕೀಯವಾಗಿ ಈ ವರೆಗೆ ಸಫಲರಾಗಿಲ್ಲ ಎಂಬುದೇ ದುರಂತ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications