ಜನನಾಯಕರು ರಾಜಕೀಯ ಬಿಟ್ಟು ದೇಶದ ಬಗ್ಗೆ ಯೋಚಿಸಲಿ: ಯಾಕೆ ಗೊತ್ತೇ?
ಬೆಂಗಳೂರು, ಏಪ್ರಿಲ್ 30: ಕೆಲವು ರಾಜಕಾರಣಿಗಳು ದೇಶ ಮೊದಲು ಎಂಬುದನ್ನು ಮರೆತು ಎಲ್ಲ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವುದು ಇದೀಗ ಕಂಡು ಬರುತ್ತಿದೆ. ದೇಶಕ್ಕೆ ಸಂಕಷ್ಟ ಬಂದಾಗ ಎಲ್ಲರೂ ಒಟ್ಟಾಗಿ ನಿಂತು ಎದುರಿಸಬೇಕೆನ್ನುವ ಮನೋಭಾವ ದೂರವಾಗಿ ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸವನ್ನು ಕೆಲವು ನಾಯಕರು ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇಂತಹವರಿಂದ ನಾವು ಏನನ್ನು ನಿರೀಕ್ಷಿಸಬಹುದು? ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕಿದೆ.
ಬಹುಶಃ ಸ್ವಾತಂತ್ರ್ಯ ನಂತರ ಪಾಕಿಸ್ತಾನ ಭಾರತದ ಮೇಲೆ ಮಾಡಿದ ದಾಳಿ, ಉಗ್ರ ಚಟುವಟಿಕೆ ಒಂದೇ ಎರಡೇ? ಎಲ್ಲವನ್ನೂ ಸಹಿಸಿಕೊಂಡು ಉತ್ತರ ಕೊಡುವಲ್ಲಿ ಕೊಡುತ್ತಾ ಬಂದಿದೆ. ಆದರೆ ಯಾವತ್ತೂ ನಮ್ಮ ದೇಶ ಅವರಂತೆ ಹೇಡಿತನದ ಕೃತ್ಯಗಳನ್ನು ಮಾಡಲೇ ಇಲ್ಲ. ಹೀಗಾಗಿಯೇ ಅವರು ಮೇಲಿಂದ ಮೇಲೆ ದಾಳಿ ಮಾಡುತ್ತಲೇ ಬಂದರು. ಕಾಶ್ಮೀರದಲ್ಲಿ ಎಷ್ಟು ನರಮೇಧ ನಡೆಯಿತು? ಅಲ್ಲಿನ ಕಾಶ್ಮೀರಿ ಪಂಡಿತರ ಬದುಕು ಏನಾಯಿತು? ಎಲ್ಲವೂ ನಮ್ಮ ಮುಂದೆಯೇ ಇದೆ. ಆದರೆ ಇಷ್ಟೆಲ್ಲ ಆಗಿದ್ದರೂ ಇವತ್ತು ಕೆಲವು ರಾಜಕಾರಣಿಗಳ ನಡೆ ಮತ್ತು ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗುತ್ತಿರುವುದು ಅಚ್ಚರಿ ಮೂಡಿಸುತ್ತಿವೆ.

ಇಷ್ಟಕ್ಕೂ ಕೆಲವು ರಾಜಕೀಯ ಪಕ್ಷಗಳಿಗೆ ಅಧಿಕಾರವೇ ಮುಖ್ಯವಾಗಿರುವುದರಿಂದ ಮತಬ್ಯಾಂಕ್ ನ್ನು ಈ ಸಮಯದಲ್ಲಿಯೂ ಕಾಪಾಡಿಕೊಳ್ಳಲು ಹವಣಿಸುತ್ತಿರುವುದು ನಿಜಕ್ಕೂ ಬೇಸರ ಮೂಡಿಸುತ್ತಿದೆ. ಪಾಕಿಸ್ತಾನದ ವಿರುದ್ಧ ಮಾತನಾಡಿದರೆ ದೇಶದ ಪ್ರಜೆಯಾಗಿರುವ ಮುಸ್ಲಿಮರಿಗೆ ಬೇಸರವಾಗಬಹುದು. ಅವರು ನಮಗೆ ಮತ ಹಾಕದೆ ಹೋಗಬಹುದು ಎಂದು ಕೆಲವು ನಾಯಕರು ಅಂದುಕೊಳ್ಳುತ್ತಿರುವುದು ಮತ್ತು ಅವರನ್ನು ಓಲೈಸುವ ಸಲುವಾಗಿ ನಮ್ಮ ದೇಶದ ಬಗ್ಗೆಯೇ ಹಗುರವಾಗಿ ಮಾತನಾಡುತ್ತಿರುವುದು ಕ್ಷಮಿಸಲಾರದ್ದಾಗಿದೆ.
ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧದ ನಂತರ ಇಡೀ ದೇಶದ ಜನ ಪಾಕಿಸ್ತಾನದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಆ ದೇಶದ ಆಟಾಟೋಪಕ್ಕೆ ಇತಿಶ್ರೀ ಹಾಡಲು ಇದು ಪಕ್ವ ಸಮಯ ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಇಡೀ ದೇಶದ ಜನ ಆಕ್ರೋಶಗೊಂಡಿರುವಾಗ ಮತ್ತು ನಮಗಾದ ಅನ್ಯಾಯಕ್ಕೆ ತಕ್ಕ ಶಾಸ್ತಿ ನೀಡಬೇಕಾದ ಸಮಯದಲ್ಲಿ ಆಡಳಿತದಲ್ಲಿ ಯಾರೇ ಇರಲಿ ಅವರಿಗೆ ಸಾಥ್ ನೀಡುವುದು ಈ ದೇಶದ ರಾಜಕೀಯ ನಾಯಕರ ಮತ್ತು ಪ್ರಜೆಗಳ ಆದ್ಯ ಕರ್ತವ್ಯವಾಗುತ್ತದೆ.

ಇವತ್ತು ಪಹಲ್ಗಾಮ್ ನಲ್ಲಿ ನಡೆದ ದಾಳಿ ಹಿಂದೆ ಏನೇನು ವೈಫಲ್ಯಗಳಾಗಿವೆಯೋ ಅದೆಲ್ಲವೂ ಒತ್ತಟ್ಟಿಗಿರಲಿ. ಅಲ್ಲಿ ವೈಫಲ್ಯವಾಗಿದೆ ಎನ್ನುವುದು ಕಣ್ಣಮುಂದೆ ಇರುವ ಸತ್ಯ. ಅದರ ಕುರಿತಂತೆ ತನಿಖೆಗಳಾಗುತ್ತವೆ. ಆದರೆ ಕಾಲ ಮಿಂಚಿ ಹೋಗಿದೆ. ಇಪ್ಪತ್ತಾರು ಮಂದಿಯ ಪ್ರಾಣವೂ ಹೋಗಿದೆ. ಅವರನ್ನು ಕಳೆದುಕೊಂಡ ಕುಟುಂಬಕ್ಕಷ್ಟೆ ಆ ನೋವು ಗೊತ್ತಿದೆ. ಮತ್ತು ಅದು ಜೀವನದುದ್ದಕ್ಕೂ ಕಹಿ ನೆನಪಾಗಿ ಉಳಿಯಲಿದೆ. ಆದರೆ ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳುವುದು ಈಗಿನ ಅವಶ್ಯಕತೆಯಾಗಿದೆ. ಭಾರತವನ್ನು ಕೆಣಕಿದರೆ ಏನಾಗುತ್ತದೆ ಎಂಬ ಸಂದೇಶವನ್ನು ರವಾನಿಸುವುದು ದೇಶದ ಮುಂದಿದೆ.
ಪಹಲ್ಗಾಮ್ ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿಯನ್ನು ವಿರೋಧಿಸುವ ಭರದಲ್ಲಿ ಕೆಲವರು ದೇಶದ ಬಗ್ಗೆಯೇ ಹಗುರವಾಗಿ ಮಾತನಾಡುವುದು, ಹೇಳಿಕೆ ನೀಡುವುದು ಮಾಡುತ್ತಿದ್ದಾರೆ. ಆ ಮೂಲಕ ತಮ್ಮ ಮತಬ್ಯಾಂಕ್ ಅನ್ನು ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಎದ್ದು ಕಾಣಿಸುತ್ತಿದೆ. ಇದು ಯಾವುದೇ ನಾಯಕರಿಗೆ ಶೋಭೆ ತರುವಂತಹದಲ್ಲ. ಅದಕ್ಕೆ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ. ಮೋದಿಯನ್ನು ವಿರೋಧಿಸುವುದನ್ನು ನಿಮ್ಮ ರಾಜಕೀಯದ ತಂತ್ರ ಎಂದು ಭಾವಿಸಿ ದೇಶದ ಜನ ಸುಮ್ಮನಾಗಬಹುದು. ಆದರೆ ನಿಮ್ಮ ಹೇಳಿಕೆಗಳು ಶತ್ರು ರಾಷ್ಟ್ರಗಳಿಗೆ ಆಹಾರವಾಗುತ್ತದೆ ಮತ್ತು ದೇಶದ ಮಾನ ಹರಾಜಾಗುತ್ತದೆ ಎಂಬುದು ನೆನಪಿರಲಿ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಹೇಗೆ ಬಿಂಬಿತವಾಯಿತು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ. ಹೀಗಿರುವಾಗ ನಮ್ಮಲ್ಲಿನ ಕೆಲವು ನಾಯಕರು ಬಾಯಿ ಮುಚ್ಚಿ ಕುಳಿತು ಬಿಟ್ಟರೆ ಅಷ್ಟೇ ಸಾಕು. ಈ ಸಮಯದಲ್ಲಿ ನಿಮ್ಮ ರಾಜಕೀಯವನ್ನು ಬದಿಗೊತ್ತಿ ತೆಪ್ಪಗಿರಿ ಎಂದು ಮತ ನೀಡಿ ಗೆಲ್ಲಿಸಿದ ತಪ್ಪಿಗೆ ಜನ ವಿನಂತಿಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಅದು ಏನೇ ಇರಲಿ ನಮ್ಮ ಜನನಾಯಕರು ದೇಶದ ವಿಚಾರದಲ್ಲಿ ಹೇಗೆಲ್ಲ ನಡೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications