ಅಧಿಕಾರದ ದಾಹ: ರಾಜಕೀಯದ ಬಗ್ಗೆ ನಿತಿನ್ ಗಡ್ಕರಿ ಆತ್ಮಸಾಕ್ಷಿಯ ಮಾತು
ನಾಗಪುರ, ಜುಲೈ 26: ಸಂಘ ಪರಿವಾರ ಮತ್ತು ಬಿಜೆಪಿ ಎರಡರಲ್ಲೂ ಪ್ರಭಲರಾಗಿರುವ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಸಕ್ತ ರಾಜಕೀಯದ ಬಗ್ಗೆ ಬೇಸರದ ಮಾತನ್ನಾಡಿದ್ದಾರೆ. ಕೆಲವೊಮ್ಮೆ ಈ ರಾಜಕೀಯದದಿಂದ ಹಿಂದಕ್ಕೆ ಸರಿಯೋಣ ಎಂದೆನಿಸುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿ ಸೋಮವಾರ (ಜುಲೈ 25) ಸಾಮಾಜಿಕ ಕಾರ್ಯಕರ್ತ ಗಿರೀಶ್ ಗಾಂಧಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಗಡ್ಕರಿ, "ಇತ್ತೀಚಿನ ದಿನಗಳಲ್ಲಿ ಹಲವು ಬಾರಿ ರಾಜಕೀಯ ತ್ಯಜಿಸುವ ಬಗ್ಗೆ ಆಲೋಚಿಸಿದ್ದೆ" ಎನ್ನುವ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
"ರಾಜಕೀಯ ಕ್ಷೇತ್ರಕ್ಕಿಂತ ಜೀವನದಲ್ಲಿ ಇನ್ನಷ್ಟು ಮಾಡುವುದಿದೆ, ರಾಜಕೀಯ ಈಗ ಸಾಮಾಜಿಕ ಬದಲಾವಣೆ ತರುವ ಅಸ್ತವಾಗಿ ಉಳಿದಿಲ್ಲ. ಅಧಿಕಾರವನ್ನೇ ಹೆಚ್ಚು ಹುಡುಕಿಕೊಂಡು ಹೋಗುವಂತಾಗಿದೆ"ಎಂದು ನಿತಿನ್ ಗಡ್ಕರಿ ಅಭಿಪ್ರಾಯ ಪಟ್ಟಿದ್ದಾರೆ.

"ರಾಜಕಾರಣಿಗಳು ಆತ್ಮಸಾಕ್ಷಿಯಾಗಿ ರಾಜಕೀಯ ಎನ್ನುವ ಪದವನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಯಾಕೆಂದರೆ, ಈ ಕ್ಷೇತ್ರದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕ ಸುಧಾರಣೆಯನ್ನು ಮಾಡಬಹುದಾಗಿದೆ. ಆ ಬಗ್ಗೆ ಎಲ್ಲರೂ ಚಿಂತಿಸಬೇಕಾಗಿದೆ" ಎಂದು ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ.
"ಈಗ ಎಲ್ಲಾ ರಾಜಕಾರಣಿಗಳಿಗೆ ಅಧಿಕಾರ ಬೇಕಾಗಿದೆ, ಇದು ದೇಶದ, ಸಮಾಜದ ಹಿತಕ್ಕಾಗಿ ಶ್ರಮಿಸುವುದಕ್ಕಾ ಎನ್ನುವುದನ್ನು ಎಲ್ಲರೂ ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕಾಗಿದೆ. ಇಂತಹ ಆತ್ಮಾವಲೋಕನ ಎಲ್ಲರಿಗೂ ಅನ್ವಯಿಸುತ್ತದೆ"ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

"ನಾನು ಪದೇಪದೇ ರಾಜಕೀಯ ತ್ಯಜಿಸಿಬಿಡಲೇ ಎಂದು ಯೋಚಿಸುತ್ತಿದ್ದೇನೆ. ಯಾವುದೇ ಮುಖಂಡರು ಒಂದು ಪಕ್ಷವನ್ನು ಬಿಟ್ಟು, ಇನ್ನೊಂದು ಪಕ್ಷಕ್ಕೆ ಬಂದರೆ ಅದು ಅಧಿಕಾರಕ್ಕಾಗಿ ಎಂದು ಸಾರ್ವಜನಿಕರು ಮಾತನಾಡುವಂತಾಗಿದೆ"ಎಂದು ನಿತಿನ್ ಗಡ್ಕರಿ ಅಭಿಪ್ರಾಯ ಪಟ್ಟಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications