ಸಮೀಕ್ಷೆಗಳ ಸಮೀಕ್ಷೆ: ಕಾಂಗ್ರೆಸ್ ಪಾಲಾಗಲಿವೆ ಬಿಜೆಪಿ ಆಡಳಿತದ ಎರಡು ರಾಜ್ಯಗಳು
ನವದೆಹಲಿ, ಅಕ್ಟೋಬರ್ 10: ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಪಂಚರಾಜ್ಯಗಳ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ವಿವಿಧ ಸಂಸ್ಥೆಗಳು, ವಾಹಿನಿಗಳು ಸಮೀಕ್ಷೆ ನಡೆಸುತ್ತಿವೆ.
ಈ ಚುನಾವಣೆಗಳು ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಎಲ್ಲ ರಾಜಕೀಯ ಪಕ್ಷಗಳೂ ಬಹು ಗಂಭೀರವಾಗಿ ಪರಿಗಣಿಸಿವೆ.
ಈಗಾಗಲೇ ಎಬಿಪಿ, ಟೈಮ್ಸ್ ನೌ, ಡೇಲಿಹಂಟ್ ಚುನಾವಣಾ ಸಮೀಕ್ಷೆಗಳು ವಿಭಿನ್ನ ಫಲಿತಾಂಶಗಳನ್ನು ನೀಡಿವೆ. ಹೀಗೆ ಬಂದ ಸಮೀಕ್ಷೆಗಳನ್ನು ಮತ್ತೆ ಸಮೀಕ್ಷೆಗೆ ಒಳಪಡಿಸಿ ಅದರ ಫಲಿತಾಂಶದ ಆಧಾರದಲ್ಲಿ ಯಾವ ಪಕ್ಷಗಳು ಅಧಿಕಾರಕ್ಕೆ ಬರಬಹುದು ಎಂಬ ಲೆಕ್ಕಾಚಾರ ಮಾಡಲಾಗುತ್ತಿದೆ.
ಮುಖ್ಯವಾಗಿ ಮೂರು ರಾಜ್ಯಗಳಾದ ಛತ್ತೀಸಗಡ, ಮಧ್ಯ ಪ್ರದೇಶ ಮತ್ತು ರಾಜಸ್ಥಾನಗಳ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಳ್ಳಲಾಗಿದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಸಮೀಕ್ಷೆಗಳ ಮೇಲಿನ ಸಮೀಕ್ಷೆ ಪ್ರಕಾರ ಇವುಗಳಲ್ಲಿ ಎರಡು ರಾಜ್ಯಗಳು ಕಾಂಗ್ರೆಸ್ ಪಾಲಾಗಲಿವೆ.
ಮಧ್ಯಪ್ರದೇಶದಲ್ಲಿ ಸತತ ಮೂರು ಅವಧಿಗಳಿಂದ ಅಧಿಕಾರದಲ್ಲಿರುವ ಬಿಜೆಪಿ, ಈ ಬಾರಿಯೂ ತನ್ನ ಹಿಡಿತ ಉಳಿಸಿಕೊಳ್ಳಲಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದರೆ, ಛತ್ತೀಸಗಡದಲ್ಲಿ ಸಮೀಪದ ಜಯ ಕಾಣಲಿದೆ ಎಂದು ಸಮೀಕ್ಷೆಗೆ ಸಂಬಂಧಿಸಿದಂತೆ ಎನ್ಡಿಟಿವಿ ನೀಡಿರುವ ವರದಿ ತಿಳಿಸಿದೆ.

ಬಿಜೆಪಿಯದೇ ಪಾರುಪತ್ಯ
ಮೂರು ಅವಧಿಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಮಧ್ಯಪ್ರದೇಶದಲ್ಲಿ ನಾಲ್ಕನೆಯ ಅವಧಿಗೂ ಆಡಳಿತದ ಚುಕ್ಕಾಣಿ ಹಿಡಿಯಲಿದೆ. 230 ಕ್ಷೇತ್ರಗಳ ಪೈಕಿ ಬಿಜೆಪಿ 126 ಸ್ಥಾನಗಳಲ್ಲಿ ಗೆಲ್ಲಲಿದೆ. ಬಹುಮತಕ್ಕೆ ಬೇಕಿರುವುದು 116 ಸೀಟುಗಳು. ಹೀಗಾಗಿ ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬರಲಿದೆ ಎನ್ನುತ್ತವೆ ಸಮೀಕ್ಷೆಗಳು. ಆದರೆ, 2013ರಲ್ಲಿ ಬಿಜೆಪಿ 165 ಸೀಟುಗಳನ್ನು ಗೆದ್ದಿತ್ತು. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೀಟುಗಳನ್ನು ಕಳೆದುಕೊಳ್ಳಲಿದ್ದು, ಕಾಂಗ್ರೆಸ್ ತನ್ನ ಶಕ್ತಿಯನ್ನು 58ರಿಂದ 97 ಸೀಟುಗಳಿಗೆ ಹೆಚ್ಚಿಸಿಕೊಳ್ಳಲಿದೆ.

ಕಾಂಗ್ರೆಸ್ ಆರೋಹಣ
ಅಧಿಕಾರಾರೂಢ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನುತ್ತವೆ ಸಮೀಕ್ಷೆಗಳು. ರಾಜ್ಯದಲ್ಲಿ ವಸುಂಧರಾರಾಜೇ ನೇತೃತ್ವದ ಸರ್ಕಾರದ ವಿರುದ್ಧ ಜನಮತಾಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಭಾರಿ ಪ್ರಮಾಣದಲ್ಲಿ ತನ್ನ ಸೀಟುಗಳನ್ನು ಅದು ಕಳೆದುಕೊಳ್ಳಲಿದೆ. ಸಮೀಕ್ಷೆ ಪ್ರಕಾರ ಅದು ಬರೋಬ್ಬರಿ ನೂರು ಸೀಟುಗಳ ನಷ್ಟ ಅನುಭವಿಸಲಿದೆ. 2013ರ ಚುನಾವಣೆಯಲ್ಲಿ 163 ಸೀಟುಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಕೇವಲ 63 ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇದೆ.
200 ಸೀಟುಗಳ ಪೈಕಿ ಕೇವಲ 21ರಲ್ಲಿ ಗೆದ್ದಿದ್ದ ಕಾಂಗ್ರೆಸ್, ಈ ಚುನಾವಣೆಯಲ್ಲಿ 129 ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿಯಲಿದೆ. ಇಲ್ಲಿ ಸರ್ಕಾರ ರಚನೆಗೆ 101 ಸ್ಥಾನಗಳ ಅವಶ್ಯಕತೆಯಿದೆ.

ರಾರಾಜಿಸಲಿದೆ ಕೈ ಬಾವುಟ
ಛತ್ತೀಸಗಡದಲ್ಲಿ ನಾಲ್ಕನೆಯ ಬಾರಿಗೆ ಅಧಿಕಾರಕ್ಕೇರಲು ಹವಣಿಸುತ್ತಿರಯವ ಬಿಜೆಪಿಗೆ, ಕಾಂಗ್ರೆಸ್ ಆಘಾತ ನೀಡುವ ಸಾಧ್ಯತೆ ಇದೆ. ಅತ್ಯಂತ ಸಮೀಪದ ಅಂತರದಿಂದ ಕಾಂಗ್ರೆಸ್ ಗದ್ದುಗೆಗೇರಲಿದೆ. 90 ಸೀಟುಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕು. ಕಳೆದ ವರ್ಷ ಬಿಜೆಪಿ 49 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅದು ಹತ್ತು ಸ್ಥಾನಗಳನ್ನು ಕಳೆದುಕೊಳ್ಳಲಿದೆ. 2013ರಲ್ಲಿ 39 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಬಹುಮತಕ್ಕಿಂತ ಒಂದು ಹೆಚ್ಚಿನ ಕ್ಷೇತ್ರವನ್ನು ಗೆದ್ದುಕೊಳ್ಳಲಿದೆ ಎಂದು ಸಮೀಕ್ಷೆಗಳ ಸಮೀಕ್ಷೆ ತಿಳಿಸಿದೆ.

ಈ ಬಾರಿಯೂ ಕೆಸಿಆರ್ ಹವಾ
ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಅವಧಿಗೆ ಮುನ್ನವೇ ಚುನಾವಣೆಗೆ ಮುಂದಾಗಿದ್ದಾರೆ. ಅವರ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷ ಭಾರಿ ಅಂತರದ ಗೆಲುವು ಸಾಧಿಸುವ ಮೂಲಕ ಎರಡನೆಯ ಅವಧಿಗೆ ಅಧಿಕಾರಕ್ಕೇರಲಿದೆ. 119 ಸೀಟುಗಳ ಪೈಕಿ 85 ಸೀಟುಗಳು ಟಿಆರ್ಎಸ್ ಪಾಲಾಗಲಿವೆ. ಇಲ್ಲಿ ಬಹುಮತಕ್ಕೆ ಬೇಕಿರುವುದು 60 ಸೀಟುಗಳು. ಕಾಂಗ್ರೆಸ್ ಕೇವಲ 18 ಸೀಟುಗಳನ್ನು ಪಡೆದುಕೊಂಡರೆ, ಬಿಜೆಪಿ ಪಾಲಿಗೆ 5 ಸ್ಥಾನಗಳು ಮಾತ್ರ ದಕ್ಕಲಿವೆ. ಮತ್ತೊಂದು ಸ್ಥಳೀಯ ಪಕ್ಷ ಎಐಎಂಐಎಂ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications