ಪಾಕ್ ದೋಣಿಯಲ್ಲಿದ್ದ 600 ಕೋಟಿ ರು ಮಾಲು ವಶ!
ಪೋರಬಂದರ್, ಏ.21: ಭಾರತದ ಗಡಿಭಾಗದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ಪಾಕಿಸ್ತಾನಕ್ಕೆ ಸೇರಿದ ದೋಣಿಯನ್ನು ಭಾರತೀಯ ನೌಕಾಪಡೆ ಹಾಗೂ ಕರಾವಳಿ ತಟರಕ್ಷಣಾ ಪಡೆ ವಶಕ್ಕೆ ಪಡೆದುಕೊಂಡಿದೆ. ಈ ದೋಣಿಯ ತುಂಬಾ ರಾಶಿಗಟ್ಟಲೆ ಹೆರಾಯಿನ್ ಇರುವುದು ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 600 ಕೋಟಿ ರು ಎಂದು ಅಂದಾಜಿಸಲಾಗಿದೆ.
ಈ ದೋಣಿಯಲ್ಲಿದ್ದವರು ಡ್ರಗ್ ಸ್ಲಗಲಿಂಗ್ ಮಾಡಲು ಭಾರತದೆಡೆಗೆ ಬರುತ್ತಿದ್ದಾರೆ? ಅಥವಾ ಉಗ್ರಗಾಮಿ ಚಟುವಟಿಕೆಗಾಗಿ ಹೊಂಚು ಹಾಕುತ್ತಿದ್ದಾರೆ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ದೋಣಿಯಲ್ಲಿ ಸುಮಾರು 100 ರಿಂದ 140 ಕೆ.ಜಿ ಹೆರಾಯಿನ್ ಪತ್ತೆಯಾಗಿದೆ. 232ಕ್ಕೂ ಅಧಿಕ ಪ್ಯಾಕೇಟ್ ಗಳಿದ್ದ ಈ ಹೆರಾಯಿನ್ ಮೌಲ್ಯ 600 ಕೋಟಿ ರು ಮೀರುತ್ತದೆ. ದೋಣಿಯಲ್ಲಿದ್ದ 8 ಮಂದಿಯನ್ನು ಬಂಧಿಸಿ ಅವರ ಬಳಿ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಹೀಗಾಗಿ ಬಂಧಿತರನ್ನು ಸದ್ಯಕ್ಕೆ ಮಾದಕ ದ್ರವ್ಯ ಕಳ್ಳಸಾಗಾಣಿಕೆದಾರರು ಎಂದು ಕರೆಯಬಹುದು. ಅದರೆ, ಸ್ಯಾಟಲೈಟ್ ಫೋನ್ ಬಳಸಿ ಏನು ಕಾರ್ಯಾಚರಣೆ ಮಾಡಲು ಹೊಂಚು ಹಾಕಿದ್ದರು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ ಎಂದು ತನಿಖಾಧಿಕಾರಿಗಳು ಒನ್ ಇಂಡಿಯಾ ಪ್ರತಿನಿಧಿಗೆ ತಿಳಿಸಿದ್ದಾರೆ.

ಡ್ರಗ್ ಅಡ್ಡ ಆಗಿರುವ ಗಾಂಧಿ ನಾಡು
ಮಹಾತ್ಮಾ ಗಾಂಧೀಜಿ ಅವರ ಪೋರಬಂದರು ಈಗ ಡ್ರಗ್ ಮಾಫಿಯಾ ಸಾಗಾಣಿಕೆಯ ಪ್ರಮುಖ ಮಾರ್ಗವಾಗಿದೆ. ಹಲವಾರು ವರ್ಷಗಳಿಂದ ಇದು ಮಾದಕ ದ್ರವ್ಯ ಮಾಫಿಯಾಗಳಿಗೆ ಜಲಮಾರ್ಗ ಸುಲಭ ಸಂಚಾರ ಮಾರ್ಗವಾಗಿ ಪರಿಣಮಿಸಿದೆ.

ಈ ಬಗ್ಗೆ ಇನ್ನೂ ನಿಗೂಢತೆ ಮುಂದುವರೆದಿದೆ. ಹೀಗಾಗಿ ಭಾರತದ ಜಲ ಗಡಿಗಳ ಸುತ್ತಾ ಭದ್ರಕೋಟೆ ನಿರ್ಮಿಸಿ ಭಾರತೀಯ ನೌಕಾಪಡೆ ಹಾಗೂ ಕರಾವಳಿ ತಟರಕ್ಷಣಾ ಪಡೆ ಸದಾ ಕಾಯುತ್ತಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications