ವಲಸೆ ಕಾರ್ಮಿಕರ ಸಂಚಾರದ ಸಮಸ್ಯೆಗೆ ಬಗೆಹರಿಸಲು ಬಂತು ಪೋರ್ಟಲ್
ನವದೆಹಲಿ, ಮೇ 17 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ವಲಸೆ ಕಾರ್ಮಿಕರು ಸಂಚಾರವೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಮಸ್ಯೆಯಾಗಿದೆ. ವಲಸೆ ಕಾರ್ಮಿಕರ ನೋಂದಣಿ, ಸಂಚಾರದ ಮಾಹಿತಿ ಸಂಗ್ರಹ ಮಾಡಲು ಪೋರ್ಟಲ್ ಆರಂಭಿಸಲಾಗಿದೆ.
ಕೇಂದ್ರ ಗೃಹ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಂಟಿಯಾಗಿ "ರಾಷ್ಟ್ರೀಯ ವಲಸೆ ಮಾಹಿತಿ ವ್ಯವಸ್ಥೆ" ಎಂಬ ಪೋರ್ಟಲ್ ಆರಂಭಿಸಿವೆ. ಈ ಪೋರ್ಟಲ್ ಉಪಯೋಗಿಸಿಕೊಂಡು ವಲಸೆ ಕಾರ್ಮಿಕರಿಗೆ ಸೌಲಭ್ಯ ನೀಡಬೇಕು ಎಂದು ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ ನೀಡಿದೆ.
ವಲಸೆ ಕಾರ್ಮಿಕರು ಸಂಚಾರ ನಡೆಸಲು ಬಯಸಿದರೆ ಪೋರ್ಟಲ್ಗೆ ಮೊಬೈನ್ ನಂಬರ್ ಮತ್ತು ಆಧಾರ್ ವಿವರ ನೀಡಿ ನೋಂದಣಿಯಾಗಬಹುದು. ಇದರಿಂದಾಗಿ ರಾಜ್ಯಗಳು ವಸಲೆ ಕಾರ್ಮಿಕರನ್ನು ಹುಡುಕಲು ಅನುಕೂಲವಾಗಲಿದೆ.

4ನೇ ಹಂತದ ಲಾಕ್ ಡೌನ್ನಲ್ಲಿಯೂ ವಲಸೆ ಕಾರ್ಮಿಕರ ಸಂಚಾರ ಮುಂದುವರೆಯುವ ಸೂಚನೆಗಳು ಸಿಕ್ಕಿವೆ. ಇನ್ನೂ ಹೆಚ್ಚಿನ ಶ್ರಮಿಕ್ ರೈಲುಗಳನ್ನು ವಲಸೆ ಕಾರ್ಮಿಕರು ತವರು ರಾಜ್ಯಕ್ಕೆ ಮರಳಲು ಓಡಿಸಲಾಗುತ್ತದೆ ಎಂದು ಕೇಂದ್ರ ರೈಲ್ವೆ ಇಲಾಖೆ ಹೇಳಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದ್ದು, ಅವರು ವಲಸೆ ಕಾರ್ಮಿಕರನ್ನು ಗುರುತಿಸಿ ಅವರು ಸಂಚಾರ ನಡೆಸಲು ಬಸ್ ವ್ಯವಸ್ಥೆ ಮಾಡಬಹುದಾಗಿದೆ. ರಾಜ್ಯಗಳು ಸಹ ಜಿಲ್ಲಾ ಮಟ್ಟದಲ್ಲಿ ಇದನ್ನು ಮಾಡಿದರೆ ಸರ್ಕಾರಕ್ಕೆ ಹೊರೆ ಕಡಿಮೆಯಾಗಲಿದೆ.
ಸೋಮವಾರದಿಂದ 4ನೇ ಹಂತದ ಲಾಕ್ ಡೌನ್ ಜಾರಿಗೆ ಬರಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕಂಟೈನ್ಮೆಂಟ್ ಝೋನ್ಗಳಲ್ಲದ ಪ್ರದೇಶಗಳಲ್ಲಿ ಬಸ್, ಆಟೋಗಳ ಸಂಚಾರಕ್ಕೂ ಷರತ್ತು ಬದ್ಧ ಅನುಮತಿ ನೀಡಲಾಗುತ್ತದೆ. ರಾಜ್ಯಗಳು ಸಲ್ಲಿಸಿದ ಮಾರ್ಗಸೂಚಿ ಅನ್ವಯ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿ ರಚನೆ ಮಾಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications