Breaking: ದೆಹಲಿಯಲ್ಲಿ ಪ್ರಬಲ ಭೂಕಂಪ: ನಿವಾಸಿಗಳಲ್ಲಿ ಆತಂಕ!
ದೆಹಲಿ ನವೆಂಬರ್ 6: ವಾಯುಮಾಲಿನ್ಯದಿಂದ ತತ್ತರಿಸಿದ ರಾಷ್ಟ್ರರಾಜಧಾನಿ ದೆಹಲಿ ಜನರಿಗೆ ಬಿಗ್ ಶಾಕ್ ಎದುರಾಗಿದೆ. ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.
ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಸೋಮವಾರ (ನವೆಂಬರ್ 6) ಪ್ರಬಲ ಭೂಕಂಪನ ಸಂಭವಿಸಿದೆ. ಆಶ್ಚರ್ಯಕರವಾಗಿ ಈ ಘಟನೆಯು ಕೇವಲ ಮೂರು ದಿನಗಳ ಅಂತರದಲ್ಲಿ ನಡೆದಿದೆ. ಇದು ಕೆಲ ದಿನಗಳ ನಡುವೆ ನಡೆದ ಎರಡನೇ ಭೂಕಂಪವಾಗಿದೆ.

ಇಂದು ಸಂಜೆ 4.18ಕ್ಕೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೇಪಾಳದಲ್ಲಿ ಭೂಕಂಪ ಈಗಾಗಲೇ ಸಂಚಲನ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಅಲ್ಲಿ ಭೂಕಂಪವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಭೂಮಿ ಕಂಪಿಸಿದೆ. ಕಳೆದ ಮೂರು ದಿನಗಳಲ್ಲಿ ಎರಡನೇ ಬಾರಿ ಭೂಕಂಪ ಸಂಭವಿಸಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಬಲವಾದ ಕಂಪನಗಳು ಸಂಭವಿಸಿವೆ. ಉತ್ತರಪ್ರದೇಶ ಆಯೋಧ್ಯೆಯಿಂದ ಉತ್ತರಕ್ಕೆ ಭೂಕಂಪನದ ಕೇಂದ್ರಬಿಂದುವಿತ್ತು.
ನೇಪಾಳದಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದೆ. ಇತ್ತೀಚೆಗೆ ಸಂಭವಿಸಿದ ಭೂಕಂಪದಲ್ಲಿ 157 ಮಂದಿ ಪ್ರಾಣ ಕಳೆದುಕೊಂಡಿದ್ದರು. ನೂರಾರು ಮನೆಗಳು ನಾಶವಾಗಿವೆ. 2015ರಲ್ಲೂ ನೇಪಾಳದಲ್ಲಿ ಭೀಕರ ಭೂಕಂಪ ಸಂಭವಿಸಿತ್ತು. ಆಗ ರಿಕ್ಷರ್ ಮಾಪಕದಲ್ಲಿ 7.8 ತೀವ್ರತೆ ದಾಖಲಾಗಿತ್ತು. ಈ ವೇಳೆ ಒಂಬತ್ತು ಸಾವಿರ ಜನ ಪ್ರಾಣ ಕಳೆದುಕೊಂಡಿದ್ದರು. ಇಪ್ಪತ್ತೆರಡು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications