ಶೀಘ್ರದಲ್ಲೇ ರೈಲ್ವೇ ಇಲಾಖೆಗೆ ಹೊಸ ಕಾಯಕಲ್ಪ: ಸಚಿವ ಸುರೇಶ್ ಪ್ರಭು
ಈಗಾಗಲೇ ಐಟಿ ವಲಯದ ದೈತ್ಯ ಕಂಪನಿಗಳ ಪ್ರತಿನಿಧಿಗಳ ಜತೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ಸ್ಪಷ್ಟವಾದ ರೂಪುರೇಷೆಗಳು ಸಿದ್ಧಗೊಳ್ಳಲಿವೆ ಎಂದು ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ನವದೆಹಲಿ, ಮಾರ್ಚ್ 27: ಶೀಘ್ರದಲ್ಲೇ ಇಡೀ ರೈಲ್ವೇ ಇಲಾಖೆಯನ್ನು ಡಿಜಿಟಲೀಕರಣಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೇ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ.
ಈಗಾಗಲೇ ಐಟಿ ವಲಯದ ದೈತ್ಯ ಕಂಪನಿಗಳ ಪ್ರತಿನಿಧಿಗಳ ಜತೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ಸ್ಪಷ್ಟವಾದ ರೂಪುರೇಷೆಗಳು ಸಿದ್ಧಗೊಳ್ಳಲಿವೆ ಎಂದು ಅವರು ತಿಳಿಸಿದರು.

ಡಿಜಿಟಲೀಕರಣದ ಜತೆ ಜತೆಗೇ ರೈಲ್ವೇ ಇಲಾಖೆಯ ಯಾವುದೇ ಮಾಹಿತಿಯು ಸೋರಿಕೆಯಾಗದಂತೆ ತಡೆಯಲು ಸೈಬರ್ ಸುರಕ್ಷೆಯನ್ನು ಅಳವಡಿಸುವ ಬಗ್ಗೆಯೂ ರೂಪುರೇಷೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ರೈಲ್ವೇ ಇಲಾಖೆಯ ಸಂಪೂರ್ಣ ಡಿಜಿಟಲೀಕರಣದಿಂದಾಗಿ, ಭಾರತದ ಸಂಪರ್ಕ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿಯೇ ಉಂಟಾಗಲಿದೆ. ಸಂಪೂರ್ಣ ಡಿಜಿಟಲೀಕರಣದಿಂದ ರೈಲ್ವೇ ಇಲಾಖೆಗೆ ಮುಂದಿನ ವರ್ಷಗಳಲ್ಲಿ ಬಿಲಿಯನ್ ಗಟ್ಟಲೇ ಹಣ ಉಳಿತಾಯವಾಗುತ್ತದೆ ಎಂದು ಅವರು ಆಶಿಸಿದರು.












Click it and Unblock the Notifications