Chandrayaan 3: ಮತ್ತೆ ಟ್ವೀಟ್ ಮಾಡಿದ ಪ್ರಕಾಶ್ ರಾಜ್, ಈ ಬಾರಿ ಏನಿದೆ?
ಚಂದ್ರಯಾನ 3 ಬಗ್ಗೆ ಟ್ವೀಟ್ ಮಾಡುವ ವಿವಾದ ಮೈಮೇಲೆ ಎಳೆದುಕೊಂಡಿದ್ದ ನಟ ಪ್ರಕಾಶ್ ರಾಜ್ ಈಗ ಮತ್ತೊಮ್ಮೆ ಟ್ವೀಟ್ ಮಾಡಿದ್ದು ಸುದ್ದಿಯಾಗಿದ್ದಾರೆ. ಚಂದ್ರಯಾನ 3 ನೌಕೆ ಚಂದಿರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿದ ನಂತರ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ.
ಟ್ವೀಟ್ ಮಾಡುವ ಮೂಲಕ ಇಸ್ರೋಗೆ ಧನ್ಯವಾದ ಹೇಳಿದ್ದಾರೆ. "ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು. ಧನ್ಯವಾದಗಳು ಇಸ್ರೋ, ಚಂದ್ರಯಾನ 3, ವಿಕ್ರಮ್ ಲ್ಯಾಂಡರ್ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ" ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. 🙏🏿🙏🏿🙏🏿 ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು....ಸಂಭ್ರಮಿಸಲು .. ಇದು ದಾರಿಯಾಗಲಿ. #justasking
— Prakash Raj (@prakashraaj) August 23, 2023
ವೈರಲ್ ಆದ ಪ್ರಕಾಶ್ ರಾಜ್ ಟ್ವೀಟ್
ಚಂದ್ರಯಾನ 3 ಬಗ್ಗೆ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ವೈರಲ್ ಆಗಿದ್ದು, ಕೇವಲ ಒಂದು ಗಂಟೆಯ ಅವಧಿಯಲ್ಲಿ 21 ಸಾವಿರ ಲೈಕ್ಗಳನ್ನು ಪಡೆದುಕೊಂಡಿದ್ದು, 2700 ಬಾರಿ ರಿಟ್ವೀಟ್ ಆಗಿದೆ. 8 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆ ಪಡೆದುಕೊಂಡಿದೆ.

ಈ ಟ್ವೀಟ್ಗೂ ಹಲವರು ಪ್ರತಿಕ್ರಿಯೆ ನೀಡಿದ್ದು, ಪ್ರಕಾಶ್ ರಾಜ್ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಾಯ್ವಾಲಾ ಮತ್ತು ಇಸ್ರೋ ವಿಜ್ಞಾನಿಗಳು ಸೇರಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಪ್ರಕಾಶ್ ರಾಜ್ಗೆ ತಿರುಗೇಟು ನೀಡಿದ್ದಾರೆ.
ವಿವಾದ ಸೃಷ್ಟಿಸಿದ್ದ ಪ್ರಕಾಶ್ ರಾಜ್ ಟ್ವೀಟ್
ಇದಕ್ಕೂ ಮೊದಲು ಪ್ರಕಾಶ್ ರಾಜ್ ಮಾಡಿದ್ದ ಟ್ವೀಟ್ ಭಾರಿ ವಿವಾದ ಸೃಷ್ಟಿಸಿತ್ತು. ಚಾಯ್ ಮಾರುವ ವ್ಯಕ್ತಿಯ ಚಿತ್ರವನ್ನು ಹಂಚಿಕೊಂಡಿದ್ದ ಅವರು, ಚಂದ್ರನ ಅಂಗಳದಿಂದ ಬಂದ ಮೊದಲ ಚಿತ್ರ ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು, ನಂತರ ಸ್ಪಷ್ಟನೆ ನೀಡಿದ್ದ ಪ್ರಕಾಶ್ ರಾಜ್ ಇದು ಹಳೆಯ ಜೋಕ್ ಎಂದು ಹೇಳಿದ್ದರು. ಆದರೂ, ಕೂಡ ಪ್ರಕಾಶ್ ರಾಜ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರು. ಈ ಬಗ್ಗೆ ದೂರು ಕೂಡ ದಾಖಲಾಗಿದೆ.
ಯಶಸ್ವಿಯಾದ ಚಂದ್ರಯಾನ 3 ಲ್ಯಾಂಡಿಂಗ್
ಆಗಸ್ಟ್ 23ರಂದು ಮೊದಲೇ ನಿಗದಿಪಡಿಸಿದಂತೆ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಚಂದ್ರನ ಮೇಲೆ ನೌಕೆ ಇಳಿಸಿದ ನಾಲ್ಕನೇ ರಾಷ್ಟ್ರ ಎನಿಸಿಕೊಂಡಿದೆ. ಅದರಲ್ಲೂ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಿದ ಜಗತ್ತಿನ ಮೊದಲ ದೇಶ ಎನಿಸಿಕೊಂಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications