Prakash Raj: ವಿಭಿನ್ನ ಆಹಾರ - ವಿಭಿನ್ನ ರುಚಿಯೊಂದಿಗೆ ಸೌಹಾರ್ದತೆಯಿಂದ ಬದುಕೋಣ: ನಟ ಪ್ರಕಾಶ್ ರಾಜ್ ಟ್ವೀಟ್ ವೈರಲ್
Prakash Raj: ನಟ ಪ್ರಕಾಶ್ ರಾಜ್ ಅವರು ಆಹಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ. ಕೇರಳ ಸ್ಟೋರಿ 2 ಸಿನಿಮಾವೂ ಕೇರಳದಲ್ಲಿ ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ದೇಶದಾದ್ಯಂತ ಪರ - ವಿರೋಧ ಚರ್ಚೆಗಳು ನಡೆದಿವೆ. ಈ ಸಿನಿಮಾದಲ್ಲಿ ಒತ್ತಾಯ ಪೂರ್ವಕವಾಗಿ ಬೀಫ್ ತಿನ್ನಿಸುವ ದೃಶ್ಯವಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ. ಭಾನುವಾರ ಆಹಾರ ಹಾಗೂ ಅಭಿರುಚಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿದ್ದ ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಸೋಮವಾರ, ಅವರವರ ಆಹಾರ ಅವರ ಆಯ್ಕೆ ನಾವು ಎಲ್ಲರೂ ಒಟ್ಟಾಗಿ ಒಂದು ಸಮಾಜವಾಗಿ ಸೌಹಾರ್ದತೆಯಿಂದ ಬದುಕುತ್ತಾ ಮುಂದುವರಿಯೋಣ ಎಂದು ಹೇಳಿದ್ದಾರೆ.
ನಟ ಪ್ರಕಾಶ್ ರಾಜ್ ಅವರು ಕಳೆದ ಎರಡು ದಿನಗಳಿಂದ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡುತ್ತಿರುವ ಟ್ವೀಟ್ಗಳು ಭಾರೀ ವೈರಲ್ ಆಗುತ್ತಿವೆ. ಇದೇ ಸಂದರ್ಭದಲ್ಲಿ ಈ ಟ್ವೀಟ್ಗಳಿಗೆ ಸಂಬಂಧಿಸಿದಂತೆ ಪರ - ವಿರೋಧ ಚರ್ಚೆಗಳು ಸಹ ನಡೆದಿವೆ.

ನಟ ಪ್ರಕಾಶ್ ರಾಜ್ ಟ್ವೀಟ್ನಲ್ಲಿ ಏನಿದೆ
ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಜನರ ಆಹಾರ ಅಭಿರುಚಿಗಳಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ನ ಸಾರಾಂಶ ಈ ರೀತಿ ಇದೆ. Why Complicate when it is so Simple #justasking / ತುಂಬಾ ಸಿಂಪಲ್ ಆಗಿದ್ದಾಗ ಕಾಂಪ್ಲಿಕೇಶನ್ ಯಾಕೆ ಮಾಡಬೇಕು #justasking ಎನ್ನುವ ಶೀರ್ಷಿಕೆಯೊಂದಿಗೆ ಅವರು ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
ವೀಗನ್ಗಳು, ಶಾಕಾಹಾರಿಗಳು,
ಎಗ್ಟೇರಿಯನ್ನರು,
ಹಂದಿ ಮಾಂಸ ತಿನ್ನದ ಮಾಂಸಾಹಾರಿಗಳು,
ಹಸು ಮಾಂಸ ತಿನ್ನದ ಮಾಂಸಾಹಾರಿಗಳು,
ಎಲ್ಲಾ ವಿಧದ ಮಾಂಸ ತಿನ್ನುವವರು,
ಮೀನು ಮಾತ್ರ ತಿನ್ನುವವರು -
ನಾವು ಎಲ್ಲರೂ ಒಟ್ಟಾಗಿ ಸಮಾಜವಾಗಿ
ಸೌಹಾರ್ದತೆಯಿಂದ ಬದುಕುತ್ತಾ ಮುಂದುವರಿಯೋಣ. 🤝 ಎಂದು ನಟ ಪ್ರಕಾಶ್ ರಾಜ್ ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಟ್ವೀಟ್ಗೂ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Why Complicate when it is so Simple❤️❤️❤️❤️ #justasking pic.twitter.com/XNpjMRSFvF
— Prakash Raj (@prakashraaj) February 23, 2026
ನೆಟ್ಟಿಗರು ಹೇಳಿದ್ದೇನು ?
ಇನ್ನು ಸೋಷಿಯಲ್ ಮೀಡಿಯಾದಲ್ಲಿ ನಟ ಪ್ರಕಾಶ್ ರಾಜ್ ಅವರ ಟ್ವೀಟ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ನಟ ಪ್ರಕಾಶ್ ರಾಜ್ ಅವರಿಗೆ ಬೆಂಬಲ ಸೂಚಿಸಿದರೆ ಇನ್ನೂ ಕೆಲವರು ಇದರಲ್ಲಿ ಭಾಷಾ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ನೀವು ಮೊದಲು ಬೀಫ್ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಿರಿ. ಅದಕ್ಕೆ ವಿರೋಧ ವ್ಯಕ್ತವಾದ ಮೇಲೆ ಈ ರೀತಿಯ ಪೋಸ್ಟ್ ಮಾಡಿದ್ದೀರಿ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ನೆಟ್ಟಿಗರೊಬ್ಬರು ಅದರಂತೆಯೇ ಭಾಷೆಗಳಲ್ಲಿಯೂ ಸಾಮರಸ್ಯವನ್ನು ಮೂಡಿಸಿ. ಇದು ತುಂಬಾ ಸರಳವಾಗಿದೆ. ಹಿಂದಿ, ಇಂಗ್ಲಿಷ್, ತಮಿಳು, ಮಲಯಾಳಂ, ಕನ್ನಡ, ತೆಲುಗು ಎಲ್ಲವೂ ಸುಂದರ ಭಾಷೆಯೇ, ಹಿಂದಿಯ ಮೇಲೆ ದ್ವೇಷ ಏಕೆ. ಸಾಮರಸ್ಯದಿಂದ ಒಟ್ಟಾಗಿ ಸಮಾಜವಾಗಿ ಬದುಕುವುದನ್ನು ಮುಂದುವರಿಸಿ ಸರಿಯೇ ಎಂದಿದ್ದಾರೆ.
-
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
Viral Post: ವಿಮಾನದ ಸೀಟುಗಳ ತುಂಬಾ ಕಸದ ರಾಶಿ: ಪ್ರಯಾಣಿಕರ 'ಸಿವಿಕ್ ಸೆನ್ಸ್' ಪ್ರಶ್ನಿಸಿದ ಮಹಿಳೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ












Click it and Unblock the Notifications