Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ
Prakash Raj: ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ಕೇರಳಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ರಂಗೇರಿದೆ. ವಿವಿಧ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ತುಣುಕನ್ನು ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಾಯ್ ಮಾರುವುದರಿಂದ ಹಿಡಿದು ಸಿನಿಮಾ ಮಾರುವವರೆಗೆ.. ಸ್ನೇಹಿತರೇ ಹತಾಶೆಯನ್ನು ನೋಡ ಬಲ್ಲಿರಾ..#justasking ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವೊಂದನ್ನು ಹಂಚಿಕೊಂಡು ನಟ ಪ್ರಕಾಶ್ ರಾಜ್ ಅವರು ವ್ಯಂಗ್ಯವಾಡಿದ್ದಾರೆ. ವೀಣಾ ಜೈನ್ ಎನ್ನುವವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡಿದ್ದ ಪೋಸ್ಟ್ವೊಂದನ್ನು ಪ್ರಕಾಶ್ ರಾಜ್ ಅವರು ರೀಟ್ವೀಟ್ ಮಾಡಿದ್ದಾರೆ.

ವೀಣಾ ಜೈನ್ ಎನ್ನುವವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಧುರಂಧರ್ ಮತ್ತು ದಿ ಕೇರಳ ಸ್ಟೋರಿಯಂತಹ ಚಲನಚಿತ್ರಗಳ ನಿರ್ಮಾಪಕರು ಸಹ ತಮ್ಮ ಚಲನಚಿತ್ರಗಳು ಕಾಲ್ಪನಿಕವೆಂದು ಘೋಷಿಸಿದ್ದಾರೆ. ದಿ ಕೇರಳ ಸ್ಟೋರಿಯ ನಿರ್ಮಾಪಕರು ಸುಪ್ರೀಂ ಕೋರ್ಟ್ನಲ್ಲಿ ಉತ್ಪ್ರೇಕ್ಷಿತ ಹೇಳಿಕೆಗಳನ್ನು ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈಫಲ್ಯಗಳನ್ನು ಬಿಳಿಚಲು ಮತ್ತು ಹೊಸ FCRA ತಿದ್ದುಪಡಿಯಂತಹ ವಿಷಯಗಳಲ್ಲಿ ಜನರನ್ನು ದಾರಿ ತಪ್ಪಿಸಲು ಆ ಸಿನಿಮಾಗಳು ನಿಜವೆಂದು ಬಹಿರಂಗವಾಗಿ ತಪ್ಪಾಗಿ ನಿರೂಪಿಸುತ್ತಿದ್ದಾರೆ. ಭಾರತವು ತನ್ನ ಇತಿಹಾಸದಲ್ಲಿ ಇಂತಹ ಅಪ್ರಾಮಾಣಿಕ ಪ್ರಧಾನಿಯನ್ನು ಎಂದಿಗೂ ಕಂಡಿಲ್ಲ. ಎಂತಹ ಅವನತಿ ಎಂದು ಬರೆದುಕೊಂಡಿದ್ದರು. ಇದನ್ನು ನಟ ಪ್ರಕಾಶ್ ರಾಜ್ ಅವರು ರೀಪೋಸ್ಟ್ ಮಾಡಿದ್ದಾರೆ.
Prakash Raj: ನೆಟ್ಟಿಗರು ಹೇಳಿದ್ದೇನು
ಇನ್ನು ಈ ಪೋಸ್ಟ್ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಓಹ್, ಕ್ರಿಪ್ಟೋ ಹತಾಶೆಯಿಂದ ಮೇಲಕ್ಕೆ ಮತ್ತು ಕೆಳಕ್ಕೆ ಹಾರುತ್ತಿದೆ. ನಾನು ಗಂಭೀರವಾಗಿ ಕೇಳುವುದೇನೆಂದರೆ, ನೀವು ಹೀಗೆ ಮಾಡುವುದರಿಂದ ಬಿಜೆಪಿಗೆ ಲಾಭವಾಗಬಹುದು. ಆದರೆ ಇದು ಹಲವರ ಕಣ್ಣು ತೆರೆಸುತ್ತದೆ. ನಮ್ಮ ಸೋ ಕಾಲ್ಡ್ ಸ್ಟಾರ್ ಸಿನಿಮಾ ರೂಪದಲ್ಲಿ ಹೇಗೆ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಗೌರವ್ ಕುಮಾರ್ ಎನ್ನುವ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
ಚುನಾವಣೆಗಳನ್ನು ಗೆಲ್ಲಲು ಅವರು ಏನು ಬೇಕಾದರೂ ಮಾಡಬಹುದು ಆದರೆ ಭವಿಷ್ಯದ ಪೀಳಿಗೆ ಭೂತಕಾಲವನ್ನು ವಿಶ್ಲೇಷಿಸಿದಾಗ ಅವರು ಈ ದೇಶದ ಪ್ರಧಾನಿಯಾಗಿರುವುದಕ್ಕೆ ಮುಜುಗರ ಅನುಭವಿಸುತ್ತಾರೆ ಎಂಬುದನ್ನು ಅವರು ಮರೆತಿದ್ದಾರೆ ಎಂದು ಮತ್ತೊಬ್ಬ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಮೋದಿಜಿ ತಮ್ಮ ಭಾಷಣದಲ್ಲಿ ಒಂದು ಸಿನಿಮಾದ ಬಗ್ಗೆ ಮಾತನಾಡುತ್ತಿದ್ದರೆ, ಆ ಸಿನಿಮಾ ಖಂಡಿತವಾಗಿಯೂ ಪ್ರಚಾರ ಅಂತ ನಂಬಿ ಎಂದೂ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
-
Bengaluru: 1 ಲೀಟರ್ಗೆ 180 ರೂ.! ಸಿಲಿಕಾನ್ ಸಿಟಿಯಲ್ಲಿ ಲೀಟರ್ ಲೆಕ್ಕದಲ್ಲಿ ಎಳನೀರು ಮಾರಾಟ, ಫೋಟೋ Viral -
Vaibhav Suryavanshi: ವೈಭವ್ ಸೂರ್ಯವಂಶಿಗೆ ಯುವರಾಜ್ ಸಿಂಗ್ ಮಹತ್ವದ ಸಲಹೆ: ಟೀಮ್ ಇಂಡಿಯಾ ಪ್ರವೇಶದ ಬಗ್ಗೆ ಭವಿಷ್ಯವಾಣಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications