ಪ್ರಣವ್ ನಿರ್ಗಮನ-ಕೋವಿಂದ್ ಆಗಮನದ ಒಂದು ಸಂಜೆಯ ಮಳೆ
ಐದು ವರ್ಷಗಳ ಅವಧಿ ಮುಗಿಸಿ ರಾಷ್ಟ್ರಪತಿ ಭವನದಿಂದ ಪ್ರಣವ್ ಮುಖರ್ಜಿ ಹೊರಟಿದ್ದಾರೆ. ಇನ್ನು ರಾಮ್ ನಾಥ್ ಕೋವಿಂದ್ ಜವಾಬ್ದಾರಿಯುತ ಸ್ಥಾನದ ನಿರ್ವಹಣೆ ವಹಿಸಿಕೊಳ್ಳುತ್ತಾರೆ. ಮಂಗಳವಾರ ನಡೆದ ರಾಷ್ಟ್ರಪತಿ ಪದ ಸ್ವೀಕಾರ ಸಮಾರಂಭ ಭಾವುಕ ಎನಿಸುವಂಥ ಕ್ಷಣಗಳನ್ನು ಕಟ್ಟಿಕೊಟ್ಟಿತು.
ತುಂಬ ಹಿಂದಿನಿಂದಲೂ ನಡೆದುಬಂದ ಪದ್ಧತಿಗಳನ್ನು ಅನುಸರಿಸುವುದನ್ನು ನೋಡುವುದು ಸಹ ಅದ್ಭುತವಾದ ಅನುಭವ. ನಿರ್ಗಮಿತ ರಾಷ್ಟ್ರಪತಿ ಹಾಗೂ ಹೊಸದಾಗಿ ಆಯ್ಕೆಯಾದ ರಾಷ್ಟ್ರಪತಿಗಳ ಮಧ್ಯೆ 'ಅಧಿಕಾರ ಹಸ್ತಾಂತರ' ಎಂಬಂತೆ ನಡೆಯುವ ವಿವಿಧ ಕಾರ್ಯಕ್ರಮಗಳು ಭಾವನಾತ್ಮಕ ಎನಿಸುವಂತೆ ಇರುತ್ತವೆ.
ಮಂಗಳವಾರದ ದಿನ ಕೂಡ ಆಗಿದ್ದು ಅದೇ. ತಮ್ಮ ಐದು ವರ್ಷದ ಅನುಭವವನ್ನು ಹೇಳಿಕೊಂಡಿದ್ದರು ಪ್ರಣವ್ ಮುಖರ್ಜಿ. ಭವಿಷ್ಯದ ತಮ್ಮ ಜವಾಬ್ದಾರಿಗಳ ಬಗ್ಗೆ, ಸಿಕ್ಕ ಅವಕಾಶಗಳ ಬಗ್ಗೆ ತುಂಬ ನಮ್ರವಾಗಿ ಮಾತನಾಡಿದರು ರಾಮ್ ನಾಥ್ ಕೋವಿಂದ್. ಪದಸ್ವೀಕಾರ ಸಮಾರಂಭದ ಕೆಲವು ಚೆಂದ ಎನಿಸುವ ಕ್ಷಣಗಳನ್ನು ಸೆರೆ ಹಿಡಿದ ಫೋಟೋಗಳು ಇಲ್ಲಿವೆ.
ಪಿಟಿಐ ಸುದ್ದಿ ಸಂಸ್ಥೆಯ ಈ ಫೋಟೋಗಳು ಹಲವು ಭಾವಗಳನ್ನು ಕಟ್ಟಿಕೊಟ್ಟಿದೆ. ನೀವೂ ಒಮ್ಮೆ ನೋಡಿಬಿಡಿ.

ಗೌರವ ಸ್ವೀಕಾರ
ರಾಷ್ಟ್ರಪತಿಯಾಗಿ ಹೊಸದಾಗಿ ಅಧಿಕಾರ ಸ್ವೀಕಾರ ಮಾಡಿದ ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಭವನದಲ್ಲಿ ಗೌರವ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಕೈ ಬೀಸಿದರು.

ನೆರೆದಿದ್ದವರಿಗೆ ನಮಸ್ಕಾರ
ನವದೆಹಲಿಯ ಸಂಸತ್ ನಲ್ಲಿರುವ ಸೆಂಟ್ರಲ್ ಹಾಲ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೆರೆದಿದ್ದವರಿಗೆ ನಮಸ್ಕರಿಸಿದರು.

ರಾಷ್ಟ್ರಪತಿ ಭವನದಿಂದ ಸಂಸತ್ ಭವನಕ್ಕೆ
ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಹೊಸದಾಗಿ ಆಯ್ಕೆಯಾದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ರಕ್ಷಣಾ ಸಿಬ್ಬಂದಿ ರಾಷ್ಟ್ರಪತಿ ಭವನದಿಂದ ಸಂಸತ್ ಭವನಕ್ಕೆ ಕರೆತಂದರು.

ಮನ್ ಮೋಹನ್ ಸಿಂಗ್ ಗೆ ಅಭಿನಂದನೆ
ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಪದ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರನ್ನು ಅಭಿನಂದಿಸಿದರು.

ಕುರ್ಚಿ ಬದಲಾವಣೆ
ರಾಮ್ ನಾಥ್ ಕೋವಿಂದ್ ಹಾಗೂ ಪ್ರಣವ್ ಮುಖರ್ಜಿ ಕುರ್ಚಿ ವಿನಿಮಯ ಮಾಡಿಕೊಂಡ ಕ್ಷಣದ ಚಿತ್ರವಿದು. ಅಧಿಕೃತವಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಇಂಥದ್ದೊಂದು ಸಂಪ್ರದಾಯವಿದೆ.

ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ
ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ರಕ್ಷಣಾ ಸಿಬ್ಬಂದಿ ವ್ಯವಸ್ಥೆ ಜತೆಗೆ ಕೋವಿಂದ್ ಹಾಗೂ ಪ್ರಣವ್ ಮುಖರ್ಜಿ ಬಂದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications