'ಬಿಹಾರದಿಂದ ಆರಂಭ': ಕುತೂಹಲ ಕೆರಳಿಸಿದ ಚುನಾವಣಾ ಚಾಣಕ್ಯನ ಟ್ವೀಟ್
ನವದೆಹಲಿ, ಮೇ 2: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಆಹ್ವಾನವನ್ನು ತಿರಸ್ಕಾರ ಮಾಡಿದ ಬೆನ್ನಲ್ಲೇ ಹೊಸ ಪಕ್ಷವನ್ನು ರಚನೆ ಮಾಡಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬಂದಿದೆ. ಈ ನಡುವೆ ಕುತೂಹಲಕೆರಳಿಸುವ ಟ್ವೀಟ್ ಅನ್ನು ಪ್ರಶಾಂತ್ ಕಿಶೋರ್ ಮಾಡಿದ್ದಾರೆ.
My quest to be a meaningful participant in democracy & help shape pro-people policy led to a 10yr rollercoaster ride!
— Prashant Kishor (@PrashantKishor) May 2, 2022
As I turn the page, time to go to the Real Masters, THE PEOPLE,to better understand the issues & the path to “जन सुराज”-Peoples Good Governance
शुरुआत #बिहार से
ನೇರವಾಗಿ ಜನರ ಕಡೆಗೆ ತೆರಳಲು ನಿರ್ಧಾರ ಮಾಡಿರುವುದಾಗಿ ತಮ್ಮ ಟ್ವೀಟ್ ಮೂಲಕ ತಿಳಿಸಿರುವ ಪ್ರಶಾಂತ್ ಕಿಶೋರ್, ಹೊಸ ಪಕ್ಷ ಸ್ಥಾಪನೆ ಮಾಡುವ ಸುಳಿವು ನೀಡಿದ್ದಾರೆ. ಇದರ ಆರಂಭ ಬಿಹಾರದಿಂದ ಎಂದು ಕೂಡಾ ಟ್ವೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿಂದೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನಾಯಕರುಗಳಾದ ಸೋನಿಯಾ, ರಾಹುಲ್, ಪ್ರಿಯಾಂಕ ಗಾಂಧಿಯನ್ನು ಹಲವಾರು ಭಾರೀ ಭೇಟಿಯಾಗಿದ್ದರು. ಈ ನಡುವೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ ಎಂದು ಸುದ್ದಿಯಾಗಿದ್ದವು. ಆದರೆ ಕಾಂಗ್ರೆಸ್ನ ಆಹ್ವಾನ ತಿರಸ್ಕಾರ ಮಾಡಿದ್ದ ಪ್ರಶಾಂತ್ ಕಿಶೋರ್ ಈಗ ತನ್ನದೇ ಆದ ಹೊಸ ಪಕ್ಷದ ರಚನೆಗೆ ಮುಂದಾಗಿರುವಂತೆ ಕಂಡು ಬಂದಿದೆ.

ಪ್ರಶಾಂತ್ ಕಿಶೋರ್ ಟ್ವೀಟ್ ಏನು ಹೇಳುತ್ತದೆ?
ಈ ಬಗ್ಗೆ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ. "ನಾನು ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಪಾಲ್ಗೊಳ್ಳಲು ಮಾಡಿದ ಕಾರ್ಯ ಹಾಗೂ ಜನಪರ ನೀತಿಯನ್ನು ರೂಪಿಸಲು ಸಹಾಯ ಮಾಡುವ ನನ್ನ ಕಾರ್ಯವು ಹತ್ತು ವರ್ಷಗಳ ರೋಲರ್ಕೋಸ್ಟರ್ ರೈಡ್ನಂತಿತ್ತು. ನಾನು ನನ್ನ ಪಯಣದ ಪುಟವನ್ನು ತಿರುವುತ್ತಿದ್ದಂತೆ, ನಿಜವಾದ ಒಡೆಯರಾದ ಜನರ ಬಳಿಕ ತೆರಳಲು, ಜನರ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ತಿಳಿಯಲು ಹಾಗೂ ಜನ ಸ್ವರಾಜ್-ಉತ್ತಮ ಜನಾಡಳಿತದ ದಾರಿಯಲ್ಲಿ ನಡೆಯಲು ಇದು ಉತ್ತಮ ಕಾಲ ಎಂದು ತೋರುತ್ತದೆ. ಅದರ ಆರಂಭ ಬಿಹಾರದಿಂದ," ಎಂದು ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.
ಪ್ರಶಾಂತ್ ಕಿಶೋರ್ರ ಈ ಟ್ವೀಟ್ನಲ್ಲಿ ಸಾಕಷ್ಟು ಅಸ್ಪಷ್ಟತೆಯು ಕೂಡಾ ಇದೆ. ಪ್ರಶಾಂತ್ ಹೊಸದಾದ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಾರೋ ಅಥವಾ ವಿರೋಧ ಪಕ್ಷವನ್ನು ಸೇರ್ಪಡೆ ಆಗಲಿದ್ದಾರೋ ಎಂಬುವುದು ಸ್ಪಷ್ಟವಾಗಿಲ್ಲ. 2021 ರ ಚುನಾವಣೆಯ ನಂತರ ಪ್ರಶಾಂತ್ ಕಿಶೋರ್ ರಾಜಕೀಯವನ್ನು ತೊರೆಯಲು ಬಯಸಿರುವುದಾಗಿ ಹೇಳಿದ್ದರು. ಆದರೆ ಮುಂದಿನ ರಾಜಕೀಯ ನಡೆಯನ್ನು ತೆಗೆದುಕೊಳ್ಳುತ್ತಿರುವಂತೆ ಕಂಡು ಬಂದಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಪ್ರಶಾಂತ್ ಕಿಶೋರ್ ಸೇರ್ಪಡೆ ಆಗುವುದಿಲ್ಲ ಎಂಬುವುದು ಸ್ಪಷ್ಟವಾಗಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications