Breaking; ಪ್ರಶಾಂತ್ ಕಿಶೋರ್ ಸೇರ್ಪಡೆ, ಸೋನಿಯಾ ಕೈ ಸೇರಿದ ವರದಿ
ನವದೆಹಲಿ, ಏಪ್ರಿಲ್ 25; ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ವಿಚಾರದ ಕುರಿತು ಚರ್ಚೆ ನಡೆಯುತ್ತಿದೆ. ಪಕ್ಷ ರಚನೆ ಮಾಡಿದ್ದ ಸಮಿತಿ ಈ ಕುರಿತು ವರದಿ ಸಿದ್ಧಪಡಿಸಿದೆ.
ಸೋಮವಾರ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮಿತಿ ಈ ಕುರಿತು ವರದಿಯನ್ನು ನೀಡಿದೆ. 10 ಜನಪಥ್ ನಿವಾಸದಲ್ಲಿ ಸೋನಿಯಾ ಭೇಟಿ ಮಾಡಿದ ಪಕ್ಷದ ನಾಯಕರು ವರದಿ ಹಸ್ತಾಂತರ ಮಾಡಿದರು.
ಈ ವರದಿ ಬಗ್ಗೆ ಇಂದು ಸಂಜೆ ಸೋನಿಯಾ ಗಾಂಧಿ ಸಭೆ ನಡೆಸಲಿದ್ದಾರೆ. ಕೆ. ಸಿ. ವೇಣುಗೋಪಾಲ್, ದ್ವಿಗ್ವಿಜಯ್ ಸಿಂಗ್, ಅಂಬಿಕಾ ಸೋನಿ, ರಣದೀಪ್ ಸುರ್ಜೇವಾಲಾ, ಜೈರಾಮ್ ರಮೇಶ್ ಮತ್ತು ಪ್ರಿಯಾಂಕಾ ವಾದ್ರಾ ಸಮಿತಿಯಲ್ಲಿದ್ದಾರೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ವಿಚಾರದಲ್ಲಿ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. 2024ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದೆ. ಪಕ್ಷದ ಹಿರಿಯ ನಾಯಕರ ಜೊತೆ ಸಭೆ ನಡೆಸಿದ್ದ ಪ್ರತಾಂತ್ ಕಿಶೋರ್ ಆಗಬೇಕಾದ ಬದಲಾವಣೆ ಬಗ್ಗೆ ವಿವರಣೆ ನೀಡಿದ್ದರು.
ಪ್ರಶಾಂತ್ ಕಿಶೋರ್ ಪಕ್ಷ ಸೇರುವ ಕುರಿತು ಹಲವಾರು ನಾಯಕರು ಈಗಾಗಲೇ ಹೇಳಿಕೆಗಳನ್ನು ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಈ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟಿದ್ದಾರೆ.
ಪಕ್ಷ ಪ್ರಶಾಂತ್ ಕಿಶೋರ್ ಪಕ್ಷ ಸೇರ್ಪಡೆ ಸಾಧಕ-ಬಾಧಕಗಳ ಕುರಿತು ವರದಿ ನೀಡಲು ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಸೋಮವಾರ ಸೋನಿಯಾ ಗಾಂಧಿಗೆ ವರದಿ ನೀಡಿದೆ. ಸಂಜೆ ಸಮಿತಿಯ ಜೊತೆ ಸೋನಿಯಾ ಗಾಂಧಿ ಸಭೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications