3,500 ಕಿ. ಮೀ. ಪಾದಯಾತ್ರೆ ಆರಂಭಿಸಿದ ಪ್ರಶಾಂತ್ ಕಿಶೋರ್
ಪಾಟ್ನಾ, ಅ.03: ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಿಂದ 'ಜನ್ ಸೂರಜ್' ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
'ಜನ್ ಸೂರಜ್' ಅಭಿಯಾನದ ಭಾಗವಾಗಿ ಬಿಹಾರದಲ್ಲಿ 3,500 ಕಿಮೀ ಉದ್ದದ 'ಪಾದಯಾತ್ರೆ' ನಡೆಸಲಿದ್ದಾರೆ.
ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಘೋಷಣೆಗಳೊಂದಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಈ ಅಭಿಯಾನದ ಅಡಿಯಲ್ಲಿ ಪ್ರಶಾಂತ್ ಕಿಶೋರ್ ಅವರು 3,500 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ. ಪಾದಯಾತ್ರೆಯ ಸಮಯದಲ್ಲಿ, ಬಿಹಾರದ ಪ್ರತಿ ಪಂಚಾಯತ್ ಮತ್ತು ಬ್ಲಾಕ್ ಅನ್ನು ತಲುಪಲು ಪ್ರಶಾಂತ್ ಕಿಶೋರ್ ಪ್ರಯತ್ನಿಸುತ್ತಾರೆ ಎಂದು ತಿಳಿಸಲಾಗಿದೆ.

1917ರಲ್ಲಿ ರಾಷ್ಟ್ರಪಿತ ತನ್ನ ಮೊದಲ ಸತ್ಯಾಗ್ರಹ ಚಳವಳಿಯನ್ನು ಪ್ರಾರಂಭಿಸಿದ ಪಶ್ಚಿಮ ಚಂಪಾರಣ್ನ ಭಿತಿಹರ್ವಾದಲ್ಲಿರುವ ಗಾಂಧಿ ಆಶ್ರಮದಿಂದ ಪ್ರಯಾಣವು ಪ್ರಾರಂಭವಾಗಿದೆ.
ಈ ಪಾದಯಾತ್ರೆ ಪೂರ್ಣಗೊಳ್ಳಲು ಸುಮಾರು ಒಂದರಿಂದ ಒಂದೂವರೆ ವರ್ಷ ಬೇಕಾಗಬಹುದೆಂದು ಅಂದಾಜಿಸಲಾಗಿದೆ. ಈ ನಡುವೆ ಪ್ರಶಾಂತ್ ಕಿಶೋರ್ ಪಾಟ್ನಾ ಅಥವಾ ದೆಹಲಿಗೆ ಹಿಂತಿರುಗುವುದಿಲ್ಲ ಎಂದು ತಿಳಿಸಿದ್ದು, ಈ ಕುರಿತು ಅವರು ಟ್ವೀಟ್ ಕೂಡ ಮಾಡಿದ್ದಾರೆ.
ಈ ಯಾತ್ರೆಯು ಅವರ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ನೋಡಲಾಗುತ್ತಿದೆ. ಆದರೂ, ಅಂತಹ ಯಾವುದೇ ನಿರ್ಧಾರವನ್ನು ತಮ್ಮ ಅಭಿಯಾನದೊಂದಿಗೆ ತೊಡಗಿಕೊಳ್ಳುವ ಜನರು ಮಾತ್ರ ತೆಗೆದುಕೊಳ್ಳಬಹುದು ಎಂದು ಅವರು ಆಗಾಗ್ಗೆ ಒತ್ತಿಹೇಳಿದ್ದಾರೆ.

ದೇಶದ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾದ ಬಿಹಾರದಲ್ಲಿ ವ್ಯವಸ್ಥೆಯನ್ನು ಬದಲಾಯಿಸುವ ಸಂಕಲ್ಪ ಇದು ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ. ಸಮಾಜದ ಸಹಾಯದಿಂದ ಹೊಸ ಮತ್ತು ಉತ್ತಮ ರಾಜಕೀಯ ವ್ಯವಸ್ಥೆಯನ್ನು ರಚಿಸಲು ಮುಂದಿನ 12-15 ತಿಂಗಳುಗಳಲ್ಲಿ ಬಿಹಾರದ ನಗರಗಳು, ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ ಪಾದಯಾತ್ರೆ ಕೈಗೊಳ್ಳುತ್ತಿರುವುದಾಗಿಯು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications