ಲೋಕಸಭಾ ಚುನಾವಣೆ: ಬಿಜೆಪಿ ಗೆಲ್ಲುವ ಸೀಟುಗಳ ಲೆಕ್ಕ ಕೊಟ್ಟ ಪ್ರಶಾಂತ್ ಕಿಶೋರ್
ಲೋಕಸಭಾ ಚುನಾವಣೆ ನಾಲ್ಕು ಹಂತಗಳ ಮತದಾನ ಮುಕ್ತಾಯವಾಗಿದ್ದು ಇನ್ನೂ ಮೂರು ಹಂತಗಳ ಮತದಾನ ಬಾಕಿ ಇದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.
ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿ ಆಡಳಿತಾರೂಢ ಬಿಜೆಪಿ ಇದ್ದರೆ, ಇಂಡಿಯಾ ಒಕ್ಕೂಟದ ಮೂಲಕ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಕೂಡ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದೆ.

ಬಿಜೆಪಿ ಈ ಬಾರಿ 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಪ್ರಮುಖ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್, ಲೋಕಸಭಾ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದ್ದಾರೆ.
ಪ್ರಶಾಂತ್ ಕಿಶೋರ್ ಲೆಕ್ಕಾಚಾರ ಏನು?
ಇತ್ತೀಚಿಗೆ ನೀಡಿರುವ ಸಂದರ್ಶನವೊಂದರಲ್ಲಿ ಭಾರತೀಯ ಜನತಾ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ 300 ರ ವ್ಯಾಪ್ತಿಯಲ್ಲಿ ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷದ ಸ್ಥಾನಗಳು ಕುಸಿಯಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಅವರು ಹೇಳಿದ್ದಾರೆ.
ಟೀಕೆಗಳು ಮತ್ತು ಚರ್ಚೆಗಳ ನಂತರ, ಉತ್ತರ ಮತ್ತು ಪಶ್ಚಿಮದಲ್ಲಿ ಬಿಜೆಪಿಯ ಸ್ಥಾನಗಳಲ್ಲಿ ಯಾವುದೇ ಕುಸಿತವನ್ನು ನಾನು ನೋಡುತ್ತಿಲ್ಲ. ದಕ್ಷಿಣ ಮತ್ತು ಪೂರ್ವದಲ್ಲಿ ಬಿಜೆಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಹೆಚ್ಚಾಗುತ್ತವೆ. ಇದನ್ನು ಸೇರಿಸಿದರೆ, ಇಂದು ಬಿಜೆಪಿಯ ಸುಮಾರು 300 ಸೀಟುಗಳನ್ನು ಗೆಲ್ಲಲಿದೆ ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಆರ್ ಟಿವಿಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಈ ರಾಜ್ಯಗಳಲ್ಲಿ ಬಿಜೆಪಿಗೆ ಲಾಭ
ಉತ್ತರ ಮತ್ತು ಪಶ್ಚಿಮದಲ್ಲಿ ಬಿಜೆಪಿಗೆ ಕನಿಷ್ಠ ನಷ್ಟವಾಗಲಿದ್ದು, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಲಾಭವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಭಾರಿ ಲಾಭವಿದೆ ಎಂದು ಹೇಳಿದ್ದಾರೆ. ಯಾರೂ ಕೂಡ 400 ಸೀಟುಗಳನ್ನು ಪಡೆಯುವ ಸಾಧ್ಯತೆ ಇಲ್ಲ ಎಂದು ಕಿಶೋರ್ ಹೇಳಿದ್ದಾರೆ.
ಭಾರತದಲ್ಲಿ ಪ್ರತಿಪಕ್ಷಗಳು ದುರ್ಬಲವಾಗಿಲ್ಲ ಆದರೆ ಬಿಜೆಪಿ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷಗಳು ಹಾಗೆ ತೋರುತ್ತಿವೆ ಎಂದು ಅವರು ಹೇಳಿದರು. ಬಿಜೆಪಿ 400 ಸೀಟು ಗೆಲ್ಲಲು ಸಾಧ್ಯವಿಲ್ಲ ಎಂದ ಅವರು, ಇದು ಕೇವಲ ಪಕ್ಷದ ಕಾರ್ಯಕರ್ತರಿಗೆ ನೀಡುವ ಘೋಷಣೆಯಾಗಿದೆ ಎಂದಿದ್ದಾರೆ.
ಬಿಜೆಪಿಗೆ 400 ಸ್ಥಾನಗಳು ಬರುವುದಿಲ್ಲ, ಹಾಗೆಂದು 200 ಸ್ಥಾನಗಳಿಗೆ ಕುಸಿಯುತ್ತದೆ ಎಂದು ಅರ್ಥವಲ್ಲ. ಇದು ಆಗಬೇಕಾದರೆ ಉತ್ತರ ಮತ್ತು ಪಶ್ಚಿಮದಲ್ಲಿ ಬಿಜೆಪಿ 100 ಸ್ಥಾನಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಿಶೋರ್ ವಿವರಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications