ಗುಜರಾತ್ ಚುನಾವಣೆ: ರಾಹುಲ್ ಗಾಂಧಿಯನ್ನು ಸಂಪರ್ಕಿಸಿದ ಚುನಾವಣಾ ಚಾಣಕ್ಯ
ನವದೆಹಲಿ, ಮಾರ್ಚ್ 24: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರನ್ನು ಪ್ರಶಾಂತ್ ಕಿಶೋರ್ ಸಂಪರ್ಕ ಮಾಡಿದ್ದಾರೆ ಎಂದು ಕಾಂಗ್ರೆಸ್ನ ಮೂಲಗಳು ತಿಳಿಸಿದೆ.
ಕಳೆದ ವರ್ಷ ಗುಜರಾತ್ ಚುನಾವಣೆಯ ನಿಟ್ಟಿನಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಶಾಂತ್ ಕಿಶೋರ್ ನಡುವೆ ಹಲವಾರು ಹಂತಗಳ ಮಾತುಕತೆ ನಡೆದಿದ್ದು, ಎಲ್ಲವೂ ಮುರಿದು ಬಿದ್ದಿತ್ತು. ಆದರೆ ಇದೀಗ ನಾಟಕೀಯ ತಿರುವು ಪಡೆದುಕೊಂಡಿದ್ದು, ರಾಹುಲ್ ಗಾಂಧಿಯ ಜೊತೆ ಪ್ರಶಾಂತ್ ಕಿಶೋರ್ ಮಾತನಾಡಿದ್ದಾರೆ ಎಂದು ವರದಿ ಉಲ್ಲೇಖ ಮಾಡಿದೆ.
ಕಾಂಗ್ರೆಸ್ ನಾಯಕತ್ವ ಮತ್ತು ಪ್ರಶಾಂತ್ ಕಿಶೋರ್ ನಡುವಿನ ಮಾತುಕತೆಗಳು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಮುರಿದು ಬಿದ್ದಿತ್ತು. ಕಾಂಗ್ರೆಸ್ ಪಕ್ಷವನ್ನು ಹುರಿದುಂಬಿಸುವಲ್ಲಿ ಚುನಾವಣಾ ತಂತ್ರಜ್ಞರು ಪ್ರಮುಖ ಪಾತ್ರವನ್ನು ವಹಿಸಿದ್ದರು. ಹಾಗೆಯೇ ಕಾಂಗ್ರೆಸ್ ಬಗ್ಗೆ ನೇರವಾಗಿ, ಕಟುವಾದ ಹೇಳಿಕೆಗಳನ್ನು ನೀಡಿದ್ದರು.

ಕಾಂಗ್ರೆಸ್ ಆ ಬಳಿಕ ತನ್ನ ಚುನಾವಣಾ ಪ್ರಚಾರಗಳನ್ನು ನಿರ್ವಹಿಸಲು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರ ಮಾಜಿ ಸಹವರ್ತಿಯೊಂದಿಗೆ ಸಹಿ ಹಾಕಿತು. ಆದರೆ ಕಿಶೋರ್, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ಗೆ ಪ್ರಮುಖ ವ್ಯಕ್ತಿಯಾದರು. ಟಿಎಂಸಿ ಮತ್ತೆ ಗದ್ದುಗೆ ಏರಲು ಮುಖ್ಯ ಪಾತ್ರವನ್ನು ಕೂಡಾ ವಹಿಸಿದರು.
ಮಂಗಳವಾರ ಗುಜರಾತ್ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯಲ್ಲಿ ಕಿಶೋರ್ ಅವರ ಪ್ರಸ್ತಾಪದ ಬಗ್ಗೆ ಕಾಂಗ್ರೆಸ್ ಇನ್ನೂ ಕೂಡಾ ಮಾಹಿತಿ ನೀಡಿಲ್ಲ. ಕೆಲವು ಗುಜರಾತ್ ಕಾಂಗ್ರೆಸ್ ನಾಯಕರು ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ಚುನಾವಣಾ ತಂತ್ರಜ್ಞರಾಗಿ ಜೊತೆಯಾಗಿಸಲು ಉತ್ಸುಕರಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ ಎಂದು ವರದಿ ಹೇಳಿದೆ. ಆದರೆ ಈ ವಿಚಾರವನ್ನು ಪ್ರಶಾಂತ್ ಕಿಶೋರ್ ನಿಕಟ ವ್ಯಕ್ತಿಗಳು ಮಾತ್ರ ನಿರಾಕರಿಸಿದ್ದಾರೆ.
ಗಾಂಧಿಗಳೊಂದಿಗೆ ಹಲವು ಹಂತದ ಚರ್ಚೆ ನಡೆಸಿದ್ದ ಪ್ರಶಾಂತ್ ಕಿಶೋರ್
ಕಳೆದ ವರ್ಷ ಪ್ರಶಾಂತ್ ಕಿರೋರ್ ಕಾಂಗ್ರೆಸ್ಗೆ ಸೇರುವ ನಿಜವಾದ ಸಾಧ್ಯತೆ ಇತ್ತು. ಆದರೆ ಹಲವಾರು ಕಾರಣಗಳಿಂದ ಈ ಮಾತುಕತೆಯು ಮುರಿದು ಬಿದ್ದಿತು ಎಂದು , ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ ಈ ವರ್ಷದ ಆರಂಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು. ಪ್ರಶಾಂತ್ ಕಿಶೋರ್ ಕಳೆದ ವರ್ಷ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಈ ಮೂರು ನಾಯಕರೊಂದಿಗೆ ಹಲವಾರು ಸುತ್ತಿನ ಚರ್ಚೆಗಳನ್ನು ನಡೆಸಿದರು. ರಾಹುಲ್ ಗಾಂಧಿಯವರ ಮನೆಗೆ ಹೋಗುತ್ತಿರುವ ಪ್ರಶಾಂತ್ ಕಿಶೋರ್ ಚಿತ್ರಗಳು ಭಾರೀ ಊಹಾಪೋಹಗಳಿಗೆ ಕಾರಣವಾಯಿತು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications