ಕರ್ನಾಟಕ ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್ಗೆ ಎಚ್ಚರಿಕೆ ನೀಡಿದ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿದ ಬಿಜೆಪಿ 66 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀರಾ ಕಳಪೆ ಸಾಧನೆ ಮಾಡಿದರೆ, 135 ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಭಾರೀ ಬಹುಮತ ಗಳಿಸಿರುವ ಕಾಂಗ್ರೆಸ್ ಶೀಘ್ರದಲ್ಲೇ ಸರ್ಕಾರ ರಚನೆ ಮಾಡಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ಗೆ ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ.

ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮಾತನಾಡಿ, ಕರ್ನಾಟಕದ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎನ್ನುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ಕರ್ನಾಟಕ ವಿಧಾನಸಭೆ ಗೆದ್ದ ಖುಷಿಯಲ್ಲಿ ಬೀಗಬೇಡಿ ಎಂದಿದ್ದಾರೆ.
ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, "ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದಿಸುತ್ತೇನೆ. ಆದರೆ, ಇದನ್ನು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಬಾರದು. ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೈಮರೆಯಬಾರದು," ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

"2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಡಿಮೆ ಸ್ಥಾನ ಗಳಿಸಿತು. ಅಲ್ಲದೇ, 2019ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆದ್ದರೂ, ಕೆಲವೇ ತಿಂಗಳುಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ನೆಲಕಚ್ಚಿತು ಎಂಬುದನ್ನು ಮರೆಯಬಾರದು," ಎಂದು ಪ್ರಶಾಂತ್ ಕಿಶೋರ್ ನೆನಪಿಸಿದ್ದಾರೆ.
"2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. ಬಳಿಕ ಎರಡು ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಉತ್ತರಪ್ರದೇಶದ 80 ಸ್ಥಾನಗಳಲ್ಲಿ 73 ಸ್ಥಾನ ಬಾಚಿಕೊಂಡಿತು," ಎಂದು ತಿಳಿಸಿದರು.
ಪ್ರಶಾಂತ್ ಕಿಶೋರ್ ಅವರು 2012ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ನಂತರ ಪ್ರಸಿದ್ಧಿಯಾಗಿದ್ದರು. ಆ ಬಳಿಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿದ್ದರು.
ಈ ವೇಳೆ ಬಿಜೆಪಿ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಬೇಡಿಕೆ ಹೆಚ್ಚಾಯಿತು. ಬಿಜೆಪಿ ವಾರ್ ರೂಂನಿಂದ ಹೊರಬಂದ ಅವರು, ನಂತರ ಬಿಹಾರದಲ್ಲಿ ನಿತೀಶ್ ಕುಮಾರ್, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್, ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್, ಆಂಧ್ರಪ್ರದೇಶದಲ್ಲಿ ಜಗನ್ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿದ್ದರು.
2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಗಾರಿಕೆಗೆ ವಿಧಾಯ ಹೇಳಿದ್ದರು. ಆ ಬಳಿಕ ದೇಶಾದ್ಯಂತ ನೆಲಕಚ್ಚಿದ್ದ ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಲು ಪ್ರಯತ್ನಪಟ್ಟರು. ಆದರೆ, ಪಕ್ಷದಲ್ಲಿ ಅವರ ಮಾತಿಗೆ ಮನ್ನಣೆ ಸಿಗದ ಕಾರಣ, ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ಆರಂಭಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications