ದುಬೈನಿಂದ ಭಾರತಕ್ಕೆ ಬರಲು ಸುಪ್ರೀಂ ಮೊರೆ ಹೋದ ಮಹಿಳೆ
ನವದೆಹಲಿ, ಏಪ್ರಿಲ್ 22 : ದುಬೈನಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಭಾರತಕ್ಕೆ ಬರಲು ಅವಕಾಶ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಲಾಕ್ ಡೌನ್ ಪರಿಣಾಮ ವಿಮಾನ ಸಂಚಾರ ರದ್ದಾಗಿದ್ದು, ಅಲ್ಲಿ ಸಿಲುಕಿದ್ದಾರೆ.
Recommended Video
ಕೇರಳ ಮೂಲದ ಗೀತಾ ಶ್ರೀಧರನ್ ಎಂಬ ಮಹಿಳೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಗೀತಾ ಅವರು ಗರ್ಭಿಣಿಯಾಗಿದ್ದು ಪತಿಯನ್ನು ಹೊರತುಪಡಿಸಿ ಯಾರೂ ನೋಡಿಕೊಳ್ಳುವವರಿಲ್ಲ. ಅವರು ಸಹ ಕೆಲಸಕ್ಕೆ ಹೋಗುತ್ತಿದ್ದು, ತೊಂದರೆ ಉಂಟಾಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.
ಪತಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಅದರ ಚಟುವಟಿಕೆಗಳು ಲಾಕ್ ಡೌನ್ನಿಂದ ಬಂದ್ ಆಗಿಲ್ಲ. ಆದ್ದರಿಂದ ಅವರು ರಜೆ ಹಾಕುವಂತಿಲ್ಲ ಎಂದು ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಗೀತಾ ಅರ್ಜಿಯಲ್ಲಿ ವಿವರಿಸಿದ್ದಾರೆ.

ಜುಲೈನಲ್ಲಿ ಗೀತಾ ಅವರ ಹೆರಿಗೆ ದಿನಾಂಕ ನಿಗದಿಯಾಗಿದೆ. ನಾನು ಭಾರತಕ್ಕೆ ಬರಬೇಕು. ಆದರೆ, ಲಾಕ್ ಡೌನ್ ಪರಿಣಾಮ ವಿಮಾನಗಳ ಹಾರಾಟವಿಲ್ಲ. ಆದ್ದರಿಂದ, ಸಹಾಯ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಭಾರತ ಸರ್ಕಾರ ದುಬೈನಿಂದ ವಾಪಸ್ ಆಗುವುದಕ್ಕೆ ಯಾವುದೇ ವ್ಯವಸ್ಥೆ ಮಾಡಿಲ್ಲ. ಹಲವಾರು ಜನರು ಭಾರತಕ್ಕೆ ಮರಳಲು ಕಾಯುತ್ತಿದ್ದಾರೆ. ಇದಕ್ಕಾಗಿ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕೇರಳ ಮೂಲದ ಅನೇಕರು ದುಬೈನಲ್ಲಿದ್ದಾರೆ. ಹಲವಾರು ಜನರು ಲಾಕ್ ಡೌನ್ ಘೋಷಣೆಯಾಗುವ ಮೊದಲೇ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಭಾರತದಲ್ಲಿ ಮೇ 3ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ವಿಮಾನ ಹಾರಾಟ ಇರುವುದಿಲ್ಲ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications