ಮಧ್ಯ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿಗೆ ಶರದ್ ಸಿದ್ಧತೆ
ಭೋಪಾಲ್, ಜೂನ್ 3: ಮಧ್ಯಪ್ರದೇಶದಲ್ಲಿ 2019ರ ಅಂತ್ಯದಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದೆ. ಸತತ ಮೂರು ಅವಧಿಗೆ ಮಧ್ಯ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದು, 15 ವರ್ಷಗಳಿಂದ ರಾಜ್ಯದಲ್ಲಿ ಝಂಡಾ ಊರಿರುವ ಬಿಜೆಪಿಯನ್ನು ಈ ಬಾರಿಯಾದರೂ ಸೋಲಿಸಬೇಕು ಎಂದು ವಿರೋಧಿಗಳು ಹಠ ಹಿಡಿದು ಕೂತಿದ್ದಾರೆ. ಇದಕ್ಕೆ ನೇತೃತ್ವ ವಹಿಸಲು ಜೆಡಿ(ಯು) ಪಕ್ಷದ ಬಂಡಾಯ ನಾಯಕ ಶರದ್ ಯಾದವ್ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಮಹಾ ಮೈತ್ರಿಕೂಟವನ್ನು ರಚಿಸುವುದು ಯಾದವ್ ಬೆಂಬಲಿಗರ ಯತ್ನವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿ(ಯು) ರಾಜ್ಯ ಘಟಕದ ಮಾಜಿ ಅಧ್ಯಕ್ಷ ಮತ್ತು ಶರದ್ ಯಾದವ್ ಆಪ್ತ ಗೋವಿಂದ ಯಾದವ್, 'ನಾವು ಕಾಂಗ್ರೆಸ್ ಬೆಂಬಲದೊಂದಿಗೆ ಮಹಾ ಮೈತ್ರಿಕೂಟ ರಚಿಸಲು ಪ್ರಯತ್ನಿಸುತ್ತಿದ್ದೇವೆ' ಎಂದಿದ್ದಾರೆ.

ಕಳೆದ 15 ವರ್ಷಗಳಿಂದ ಮಧ್ಯಪ್ರದೇಶದಲ್ಲಿ ವಿರೋಧಿ ಪಕ್ಷ ಸ್ಥಾನದಲ್ಲಿ ಕೂತಿರುವ ಕಾಂಗ್ರೆಸ್ ಕೂಡ ತನಗೆ ಸಹಮತವಾಗುವ ಪಕ್ಷಗಳೊಡನೆ ಸೇರಿ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದೆ. ಇದೀಗ ಯಾದವ್ ಬಣದ ಯತ್ನಕ್ಕೆ ಕೈ ಜೋಡಿಸುವ ಸಾಧ್ಯತೆ ಇದೆ.
ಇನ್ನು ಈ ಹಿಂದೆ ಏಪ್ರಿಲ್ ನಲ್ಲಿ ಶರದ್ ಯಾದವ್ ಬೆಂಬಲಿಗರು ಹೊಸ ಪಕ್ಷ ಲೋಕ ತಾಂತ್ರಿಕ್ ಜನತಾ ದಳ (ಎಲ್ಜೆಡಿ) ಕಟ್ಟುವುದಾಗಿ ಘೋಷಿಸಿದ್ದರು. ಈ ಪಕ್ಷ ಕಟ್ಟಿ ಕಾಂಗ್ರೆಸ್ ಜೊತೆ ಮೈತ್ರಿಕೂಟ ರಚಿಸುತ್ತಾರೋ ಅಥವಾ ಹಾಗೆಯೇ ಮೈತ್ರಿಕೂಟ ರಚಿಸುತ್ತಾರೋ ಕಾದು ನೋಡಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications