ನೂತನ ಸಿಜೆಐ ಆಗಿ ಇಂದು ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ
ನವದೆಹಲಿ, ಸೆಪ್ಟೆಂಬರ್ 13: ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 02ರ ಗಾಂಧಿ ಜಯಂತಿ ದಿನದಂದು ಸಿಜೆಐ ದೀಪಕ್ ಮಿಶ್ರಾ ಅವರ ಅಧಿಕಾರ ಅವಧಿ ಮುಕ್ತಾಯವಾಗಿದೆ. ರಂಜನ್ ಅವರು ನೂತನ ಸಿಜೆಐ ಆಗಿ ಇಂದು(ಅಕ್ಟೋಬರ್ 03) ಅಧಿಕಾರ ಸ್ವೀಕರಿಸಲಿದ್ದು, ಅವರು 2019 ರ ನವೆಂಬರ್ ವರೆಗೂ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

ನ್ಯಾ.ರಂಜನ್ ಗೊಗೊಯ್ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವಂತೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆಈ ಮೊದಲು ಪತ್ರ ಬರೆದಿದ್ದರು..
ಅಕ್ಟೋಬರ್ 2 ರಂದು ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಗೊಂಡಿದ್ದು, ರಂಜನ್ ಗೋಗಯ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಆರಿಸುವಂತೆ ಮಿಶ್ರಾ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಈ ವರೆಗೆ ನಡೆದುಕೊಂಡು ಬಂದಿರುವ ಸಂಪ್ರದಾಯದ ಪ್ರಕಾರ, ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ತಮ್ಮ ಉತ್ತರಾಧಿಕಾರಿ ಹೆಸರನ್ನು ಸೂಚಿಸುತ್ತಾರೆ. ನ್ಯಾಯಾಂಗದ ಇತಿಹಾಸದಲ್ಲಿ ಎರಡು ಬಾರಿ ಮಾತ್ರ ಈ ಕಟ್ಟಳೆ ಮುರಿಯಲಾಗಿದೆ. ಆ ಎರಡು ಬಾರಿಯೂ ಪ್ರಧಾನಿಯಾಗಿದ್ದವರು ಇಂದಿರಾ ಗಾಂಧಿ.
ಜ.12 ರಂದು ನವದೆಹಲಿಯಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಕುರಿಯನ್ ಜೋಸೆಫ್, ನ್ಯಾ. ಜೆ ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್ ಮತ್ತು ನ್ಯಾ. ಮದನ್ ಲೋಕೂರ್ ಸುದ್ದಿಗೋಷ್ಠಿ ಕರೆದಿದ್ದರು. ಈ ಸುದ್ದಿ ಗೋಷ್ಟಿಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಹುಳುಕುಗಳಿವೆ ಎಂದು ಜರೆದಿದ್ದರು. ಮಾತ್ರವಲ್ಲ, ಇತ್ತೀಚೆಗೆ ದೀಪಕ್ ಮಿಶ್ರಾ ಅವರಿಗೆ ಈ ಕುರಿತು ಬರೆದ ಪತ್ರಕ್ಕೆ ಅವರು ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎಂದೂ ದೂರಿದ್ದರು. ಯಾವ ಸೂಚನೆಯನ್ನೂ ನೀಡದೆ, ಶಿಷ್ಟಾಚಾರವನ್ನೆಲ್ಲ ಉಲ್ಲಂಘಿಸಿದ ನ್ಯಾಯಮೂರ್ತಿಗಳ ನಡೆಗೆ ನ್ಯಾಯಾಂಗ ವಲಯದಲ್ಲಿ ತೀವ್ರ ಅಸಮಾಧಾನ ಸೃಷ್ಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications