ನೂತನ ಸಿಜೆಐ ಆಗಿ ಇಂದು ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ
ನವದೆಹಲಿ, ಸೆಪ್ಟೆಂಬರ್ 13: ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 02ರ ಗಾಂಧಿ ಜಯಂತಿ ದಿನದಂದು ಸಿಜೆಐ ದೀಪಕ್ ಮಿಶ್ರಾ ಅವರ ಅಧಿಕಾರ ಅವಧಿ ಮುಕ್ತಾಯವಾಗಿದೆ. ರಂಜನ್ ಅವರು ನೂತನ ಸಿಜೆಐ ಆಗಿ ಇಂದು(ಅಕ್ಟೋಬರ್ 03) ಅಧಿಕಾರ ಸ್ವೀಕರಿಸಲಿದ್ದು, ಅವರು 2019 ರ ನವೆಂಬರ್ ವರೆಗೂ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

ನ್ಯಾ.ರಂಜನ್ ಗೊಗೊಯ್ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವಂತೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆಈ ಮೊದಲು ಪತ್ರ ಬರೆದಿದ್ದರು..
ಅಕ್ಟೋಬರ್ 2 ರಂದು ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಗೊಂಡಿದ್ದು, ರಂಜನ್ ಗೋಗಯ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಆರಿಸುವಂತೆ ಮಿಶ್ರಾ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
ಈ ವರೆಗೆ ನಡೆದುಕೊಂಡು ಬಂದಿರುವ ಸಂಪ್ರದಾಯದ ಪ್ರಕಾರ, ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ತಮ್ಮ ಉತ್ತರಾಧಿಕಾರಿ ಹೆಸರನ್ನು ಸೂಚಿಸುತ್ತಾರೆ. ನ್ಯಾಯಾಂಗದ ಇತಿಹಾಸದಲ್ಲಿ ಎರಡು ಬಾರಿ ಮಾತ್ರ ಈ ಕಟ್ಟಳೆ ಮುರಿಯಲಾಗಿದೆ. ಆ ಎರಡು ಬಾರಿಯೂ ಪ್ರಧಾನಿಯಾಗಿದ್ದವರು ಇಂದಿರಾ ಗಾಂಧಿ.
ಜ.12 ರಂದು ನವದೆಹಲಿಯಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಕುರಿಯನ್ ಜೋಸೆಫ್, ನ್ಯಾ. ಜೆ ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್ ಮತ್ತು ನ್ಯಾ. ಮದನ್ ಲೋಕೂರ್ ಸುದ್ದಿಗೋಷ್ಠಿ ಕರೆದಿದ್ದರು. ಈ ಸುದ್ದಿ ಗೋಷ್ಟಿಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಹುಳುಕುಗಳಿವೆ ಎಂದು ಜರೆದಿದ್ದರು. ಮಾತ್ರವಲ್ಲ, ಇತ್ತೀಚೆಗೆ ದೀಪಕ್ ಮಿಶ್ರಾ ಅವರಿಗೆ ಈ ಕುರಿತು ಬರೆದ ಪತ್ರಕ್ಕೆ ಅವರು ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎಂದೂ ದೂರಿದ್ದರು. ಯಾವ ಸೂಚನೆಯನ್ನೂ ನೀಡದೆ, ಶಿಷ್ಟಾಚಾರವನ್ನೆಲ್ಲ ಉಲ್ಲಂಘಿಸಿದ ನ್ಯಾಯಮೂರ್ತಿಗಳ ನಡೆಗೆ ನ್ಯಾಯಾಂಗ ವಲಯದಲ್ಲಿ ತೀವ್ರ ಅಸಮಾಧಾನ ಸೃಷ್ಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications