Breaking; ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟ
ನವದೆಹಲಿ, ಜೂನ್ 09; ಭಾರತದ ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಜುಲೈ 18ರಂದು ಚುನಾವಣೆ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.
ಗುರುವಾರ ಮಧ್ಯಾಹ್ನ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದರು. ಹಾಲಿ ರಾಷ್ಟ್ರಪತಿಯಾಗಿರುವ ರಾಮನಾಥ ಕೋವಿಂದ್ ಅವಧಿ ಜುಲೈ 25ಕ್ಕೆ ಅಂತ್ಯಗೊಳ್ಳಲಿದೆ.
ಆಡಳಿತಾರೂಢ ಬಿಜೆಪಿ ಈಗಾಗಲೇ ರಾಷ್ಟ್ರಪತಿ ಚುನಾವಣೆಗೆ ತಯಾರಿ ನಡೆಸಿದೆ. ಯಾರನ್ನುಅಭ್ಯರ್ಥಿ ಮಾಡಬೇಕು? ಎಂದು ಚರ್ಚೆಗಳು ಜೋರಾಗಿವೆ. ಲೋಕಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಯಾರನ್ನು ಅಭ್ಯರ್ಥಿಯಾಗಿ ಮಾಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮತದಾರರ ವಿವಿರ; ರಾಷ್ಟ್ರಪತಿ ಚುನಾವಣೆಯಲ್ಲಿ ಶಾಸಕರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮತದಾರರು. ಸಂಸದರು ಹಸಿರು, ಶಾಸಕರು ಗುಲಾಬಿ ಬಣ್ಣದ ಪತ್ರದಲ್ಲಿ ಮತ ಚಲಾವಣೆ ಮಾಡುತ್ತಾರೆ. ನಾಮ ನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕಿಲ್ಲ.
1997ರಿಂದಲೂ ಸಂಸದರ ಮತಮೌಲ್ಯ 708 ಎಂದು ನಿಗದಿ ಮಾಡಲಾಗಿದೆ. ಈ ಬಾರಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಇಲ್ಲದೇ ಇರುವುದರಿಂದ ಮತ ಮೌಲ್ಯ 708 ರಿಂದ 700ಕ್ಕೆ ಇಳಿಕೆಯಾಗಿದೆ. ಇನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಶಾಸಕರು ಮತದಾನ ಮಾಡುವಂತೆ ಯಾವುದೇ ರಾಜಕೀಯ ಪಕ್ಷಗಳು ವಿಪ್ ಜಾರಿ ಮಾಡುವಂತಿಲ್ಲ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತರು ಸಹ ಸ್ಪಷ್ಟಪಡಿಸಿದ್ದಾರೆ.
Voting for Presidential elections to be held on 18th July, counting of votes on 21st July: Chief Election Commissioner Rajiv Kumar pic.twitter.com/bTvawdiE9I
— ANI (@ANI) June 9, 2022
ರಾಮನಾಥ್ ಕೋವಿಂದ್ ದೇಶದ 15ನೇ ರಾಷ್ಟ್ರಪತಿಯಾಗಿದ್ದಾರೆ. 16ನೇ ರಾಷ್ಟ್ರಪತಿ ಆಯ್ಕೆಗೆ ಈಗ ಚುನಾವಣೆ ದಿನಾಂಕ ಘೋಷಣೆಯಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ನಡೆಯುವುದರಿಂದ ರಾಷ್ಟ್ರಪತಿ ಚುನಾವಣೆ ಮಹತ್ವ ಪಡೆದುಕೊಂಡಿದೆ. ರಾಷ್ಟ್ರಪತಿಗಳು ದೇಶದ ಮೊದಲ ಪ್ರಜೆಯಾಗಿದ್ದು, ಮೂರು ಸೇನೆಗಳ ಮುಖ್ಯಸ್ಥರಾಗಿರುತ್ತಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications