ರಾಜ್ಯಸಭೆಗೆ ಸಿಜೆಐ ರಂಜನ್ ಗೋಗೊಯ್ ನಾಮನಿರ್ದೇಶನ
ನವದೆಹಲಿ, ಮಾರ್ಚ್.16: ದೇಶದ ರಾಜ್ಯಸಭಾ ಚುನಾವಣೆ ಹೊಸ್ತಿಲಲ್ಲೇ ಖಾಲಿಯಾಗಿರುವ ನಾಮನಿರ್ದೇಶಿತ ಸದಸ್ಯರ ಸ್ಥಾನಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.
ಇತ್ತೀಚಿಗಷ್ಟೇ ನಿವೃತ್ತಿ ಹೊಂದಿದ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರ ಸ್ಥಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿವೃತ್ತ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರ ಹೆಸರನ್ನು ಸೂಚಿಸಿದ್ದಾರೆ.

ರಾಮ ಮಂದಿರ ತೀರ್ಪು ನೀಡಿದ್ದ ರಂಜನ್ ಗೋಗಯ್:
ದಶಕಗಳ ಕಾಲ ವಿವಾದಕ್ಕೆ ಕಾರಣವಾಗಿದ್ದ ರಾಮಜನ್ಮ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೋಗೊಯ್ ಮಹತ್ವದ ಆದೇಶ ಹೊರಡಿಸಿದ್ದರು.
ರಾಫೆಲ್ ಯುದ್ಧ ವಿಮಾನಗಳ ಖರೀದಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ಸಿಜೆಐ ರಂಜನ್ ಗೋಗೊಯ್, ಕಳೆದ ನವೆಂಬರ್.17, 2019ರಲ್ಲಿ ನಿವೃತ್ತಿ ಹೊಂದಿದ್ದರು.












Click it and Unblock the Notifications