ಲೋಕಪಾಲ ಪಿ.ಕೆ. ಘೋಷ್ ನೇಮಕಕ್ಕೆ ರಾಷ್ಟ್ರಪತಿ ಅಂಕಿತ
ನವದೆಹಲಿ, ಮಾರ್ಚ್ 20: ದೇಶದ ಮೊದಲ ಲೋಕಪಾಲರನ್ನಾಗಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.
ಲೋಕಪಾಲ ನೇಮಕ: ಗಾಂಧಿವಾದಿ ಅಣ್ಣಾ ಹಜಾರೆ ಪ್ರತಿಕ್ರಿಯೆ
ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರನ್ನು ಲೋಕಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ದಿಲೀಪ್ ಬಿ ಭೋಸಲೆ, ಪ್ರದೀಪ್ ಕುಮಾರ್ ಮೊಹಾಂತಿ, ಅಭಿಲಾಷಾ ಕುಮಾರಿ ಮತ್ತು ಅಜಯ್ ಕುಮಾರ್ ತ್ರಿಪಾಠಿ ಲೋಕಪಾಲ್ನ ಇತರೆ ನಾಲ್ವರು ನ್ಯಾಯಾಂಗ ಸದಸ್ಯರಾಗಿದ್ದಾರೆ.
ನ್ಯಾಯಾಂಗ ಸದಸ್ಯರಲ್ಲದೆ ಇನ್ನೂ ನಾಲ್ವರು ಲೋಕಪಾಲ್ನ ಸದಸ್ಯರು ಇರಲಿದ್ದು, ದಿನೇಶ್ ಕುಮಾರ್ ಜೈನ್, ಅರ್ಚನಾ ರಾಮಸುಂದರಮ್, ಮಹೇಂದರ್ ಸಿಂಗ್ ಮತ್ತು ಡಾ. ಇಂದ್ರಜೀತ್ ಪ್ರಸಾದ್ ಗೌತಮ್ ಸದಸ್ಯರಾಗಿರಲಿದ್ದಾರೆ.
ಲೋಕಪಾಲರ ಆಯ್ಕೆ: ಸಮಿತಿ ಸಭೆಗೆ ಹಾಜರಾಗಲು ಖರ್ಗೆ ನಕಾರ
ಈ ನೇಮಕಾತಿಗಳು ಸದಸ್ಯರು ತಾವು ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ದಿನಗಳಿಂದ ಜಾರಿಗೆ ಬರಲಿವೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ.
ಅಣ್ಣಾ ಹಜಾರೆ ಮತ್ತು ಇತರೆ ಸಾಮಾಜಿಕ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ದಿನಗಳ ಹಿಂದೆ ಪಿ.ಕೆ. ಘೋಷ್ ಅವರ ಹೆಸರನ್ನು ಅಂತಿಮಗೊಳಿಸಿತ್ತು.