ಮೀರಾ ಕುಮಾರ್ ಬಗ್ಗೆ ನೀವು ತಿಳಿಯಲೇಬೇಕಾದ 5 ವಿಚಾರ
ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ವತಿಯಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಮೀರಾ ಕುಮಾರ್ ಅವರು ರಾಜಕೀಯ ಜೀವನದಲ್ಲಿ ಉತ್ತಮ ಅನುಭವ ಹೊಂದಿರುವವರು. ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಪುತ್ರಿ.
ಬೆಂಗಳೂರು, ಜೂನ್ 22: ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಪಕ್ಷವು, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಗುರುವಾರ ಮಧ್ಯಾಹ್ನ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ತನ್ನ ಮಿತ್ರ ಪಕ್ಷಗಳೊಂದಿಗೆ ಭಾನುವಾರ ಚರ್ಚೆ ನಡೆಸಿದ ನಂತರ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಸ್ವತಂತ್ರ ಹೋರಾಟಗಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಮಗಳಾಗಿರುವ ಮೀರಾ, ರಾಜಕೀಯ ಜೀವನದಲ್ಲಿ ಸಾಕಷ್ಟು ಸಾಧನೆ ಮಾಡಿರುವವರು.
72 ವರ್ಷದ ಈ ಹಿರಿಯ ನಾಯಕಿ, ಈವರೆಗೆ ಕೇಂದ್ರ ಸರ್ಕಾರದ ಸಚಿವೆಯಾಗಿ, ಲೋಕಸಭೆಯ ಮಾಜಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ಈವರೆಗಿನ ರಾಜಕೀಯ ಸಾಧನೆಯ ಬಗ್ಗೆ ನೀವು ತಿಳಿಯಬೇಕಾದ ಐದು ವಿಚಾರಗಳು ಇಲ್ಲಿವೆ.

ಎಂಎ, ಎಲ್ಎಲ್ ಬಿ ಪದವೀಧರೆ
1945ರ ಮಾರ್ಚ್ 31ರಂದು ಜನನ. ಬಿಹಾರದ ಅರಾ ಜಿಲ್ಲೆಯಲ್ಲಿ ಜನನ. ಡೆಹ್ರಾಡೂನ್ ನ ವೆಲ್ಹಾಮ್ ಬಾಲಕಿಯರ ಶಾಲೆ ಹಾಗೂ ಮಹಾರಾಣಿ ಗಾಯತ್ರಿದೇವಿ ಬಾಲಕಿಯರ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಎಂ.ಎಂ., ಎಲ್.ಎಲ್. ಬಿ. ಪದವೀಧರೆ. ಬನಶ್ತಾಲಿ ವಿದ್ಯಾಪೀಠದಿಂದ 2010ರಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ.

ನಾನಾ ದೇಶಗಳಲ್ಲಿ ಭಾರತದ ರಾಯಭಾರಿಯಾಗಿದ್ದರು
1970ರಲ್ಲಿ ಇವರು ಭಾರತೀಯ ವಿದೇಶ ಸೇವೆಗೆ ಸೇರ್ಪಡೆಗೊಂಡಿದ್ದರು. ಹಲವಾರು ದೇಶಗಳಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪಾಸ್ವಾನ್, ಮಾಯಾವತಿಯಂಥವರಿಗೇ ಬಿಸಿ ಮುಟ್ಟಿಸಿದ್ದವರು!
1985ರಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಅವರು, ಆ ವರ್ಷ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಬಿಜ್ನೋರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಘಟಾನುಘಟಿಗಳಾದ ಇತರ ದಲಿತ ನಾಯಕರಾದ ರಾಮ್ ವಿಲಾಸ್ ಪಾಸ್ವಾನ್ ಹಾಗೂ ಮಾಯಾವತಿಯಂಥವರನ್ನೇ ಸೋಲಿಸಿ ಆಯ್ಕೆಯಾಗಿದ್ದರು.

ಬಿಹಾರದ ಸಸಾರಾಮ್ ಕ್ಷೇತ್ರದಿಂದಲೂ ಆಯ್ಕೆ
8, 11 ಹಾಗೂ 12ನೇ ಲೋಕಸಭೆಗಳಿಗೆ ದೆಹಲಿಯ ಕರ್ನೊಲ್ ಭಾಗ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1999ರ ಮಹಾ ಚುನಾವಣೆಯಲ್ಲಿ ಸೋತರೂ, ಪುನಃ 2004ರಲ್ಲಿ ಬಿಹಾರದ ಸಸಾರಾಮ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು. 2009ರ ಚುನಾವಣೆಯಲ್ಲಿ ಪುನಃ ಅದೇ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

2014ರಲ್ಲಿ ಸೋತರೂ ಹೊಸ ಅವಕಾಶ
2004ರಿಂದ 2009ರವರೆಗೆ ಕೇಂದ್ರದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಚಿವೆಯಾಗಿದ್ದರು. 2009ರಲ್ಲಿ ಲೋಕಸಭೆಯ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಹೀಗೆ, ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ದೇಶದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಅವರದ್ದು. 2014ರಲ್ಲಿ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಸಸಾರಾಮ್ ಕ್ಷೇತ್ರದಲ್ಲಿ ಬಿಜೆಪಿಯ ಛೆಡ್ಡಿ ಪಾಸ್ವಾನ್ ವಿರುದ್ಧ 63,327 ಮತಗಳ ಅಂತರದಲ್ಲಿ ಸೋತಿದ್ದರು. ಆದರೀಗ, ಅವರಿಗೆ ದೇಶದ ಮಹೋನ್ನತ ಹುದ್ದೆಗೆ ಹೋಗುವ ಅವಕಾಶ ಒದಗಿಬಂದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications