ರಾಷ್ಟ್ರಪತಿ ಚುನಾವಣೆ: ಎಐಎಡಿಎಂಕೆ ಬೆಂಬಲ ಯಾರಿಗೆ?
ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಎಐಎಡಿಎಂಕೆ (All India Anna Dravida Munnetra Kazhagam) ತನ್ನ ನಿಲುವನ್ನು ಇನ್ನೆರಡು ದಿನಗಳೊಳಗಾಗಿ ಸ್ಪಷ್ಟಪಡಿಸುವುದಾಗಿ ಹೇಳಿದೆ.
ಇಂದು (ಜೂನ್ 16) ನವದೆಹಲಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ಎಐಎಡಿಎಂಕೆ ಮುಖ್ಯಸ್ಥ ಮತ್ತು ಲೋಕಸಭಾ ಉಪಸಭಾಪತಿ ಎಂ. ತಂಬಿದುರೈ, ರಾಷ್ಟ್ರಪತಿ ಚುನಾವಣೆಯ ಕುರಿತು ಚರ್ಚಿಸಿದ್ದಾರೆ.

ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ತಂಬಿದುರೈ, ಇದೊಂದು ಸೌಜನ್ಯದ ಭೇಟಿ ಅಷ್ಟೇ ಎಂದರು.
ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೆರಡು ದಿನದಲ್ಲಿ ಪಕ್ಷ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.












Click it and Unblock the Notifications