ರಾಷ್ಟ್ರಪತಿ ಚುನಾವಣೆ ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ: ರಾಹುಲ್
ನವದೆಹಲಿ, ಜೂ. 27: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯು ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ, ಬದಲಾಗಿ ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಯಶವಂತ್ ಸಿನ್ಹಾ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಹಲವು ವಿರೋಧ ಪಕ್ಷಗಳ ನಾಯಕರು ಇದೇ ಉದ್ಘಾರವನ್ನು ಸೋಮವಾರ ತೆಗೆದಿದ್ದಾರೆ ಎಂದು ರಾಹುಲ್ ಹೇಳಿದರು.
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಒಂದು ಕಡೆ ಆರ್ಎಸ್ಎಸ್ ದ್ವೇಷ ಮತ್ತು ಇನ್ನೊಂದು ಕಡೆ ಎಲ್ಲ ವಿರೋಧ ಪಕ್ಷಗಳ ಅನುಕಂಪ ಎಂಬ ಎರಡು ಸಿದ್ಧಾಂತಗಳ ನಡುವಿನ ನಿಜವಾದ ಹೋರಾಟ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
"ನಾವೆಲ್ಲರೂ ಒಗ್ಗಟ್ಟಿನಿಂದ ಯಶವಂತ್ ಸಿನ್ಹಾ ಬೆಂಬಲಿಸುತ್ತೇವೆ. ನಾವು ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಆದರೆ ನಿಜವಾದ ಹೋರಾಟ ಇರುವುದು ಎರಡು ಸಿದ್ಧಾಂತಗಳ ನಡುವೆ ಆಗಿದೆ. ಒಂದು ಆರ್ಎಸ್ಎಸ್ನ ಸಿದ್ಧಾಂತ, ಅದು ಕೋಪ, ದ್ವೇಷ ಮತ್ತು ಇನ್ನೊಂದು ಸಿದ್ಧಾಂತ ಎಲ್ಲಾ ವಿರೋಧ ಪಕ್ಷಗಳ ಸಹಾನುಭೂತಿಯಾಗಿದೆ. ಇಡೀ ವಿಪಕ್ಷ ಸಿನ್ಹಾ ಜೊತೆ ನಿಂತಿದೆ" ಎಂದು ಹೇಳಿದರು.

ಕೋಮುವಾದ ಮತ್ತು ಜಾತ್ಯತೀತತೆ ವಿರುದ್ಧದ ಹೋರಾಟ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ ಸಿನ್ಹಾ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ಟಿಎಂಸಿ ನಾಯಕ ಸೌಗತಾ ರಾಯ್ ಹೇಳಿದ್ದಾರೆ. ಇದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಹೋರಾಟವಲ್ಲ. ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟ. ಅದುವೇ ಕೋಮುವಾದ ಮತ್ತು ಜಾತ್ಯತೀತತೆ, ನಿರಂಕುಶವಾದ ಮತ್ತು ಪ್ರಜಾಪ್ರಭುತ್ವದ ನಡುವಿನ ಹೋರಾಟ. ಈ ಪರಿಸ್ಥಿತಿಯಲ್ಲಿ ಮಾಜಿ ಐಎಎಸ್ ಅಧಿಕಾರಿ, ಮಾಜಿ ಕೇಂದ್ರ ಹಣಕಾಸು ಮತ್ತು ವಿದೇಶಾಂಗ ಸಚಿವರಾದ ಯಶವಂತ್ ಸಿನ್ಹಾ ಅತ್ಯುತ್ತಮ ಅಭ್ಯರ್ಥಿ ಎಂದು ನಾನು ಭಾವಿಸುತ್ತೇನೆ ಎಂದು ರಾಯ್ ಹೇಳಿದರು.

ವಿರೋಧ ಪಕ್ಷಗಳ ಸಂಪೂರ್ಣ ಬೆಂಬಲ ಅವರಿಗಿದೆ
ವ್ಯಕ್ತಿಯಿಂದ ವ್ಯಕ್ತಿಗೆ ಆಧಾರದ ಮೇಲೆ ಸಿನ್ಹಾ ಉತ್ತಮ ಅಭ್ಯರ್ಥಿಯಾಗಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿವೆ. ಕಾಂಗ್ರೆಸ್, ಡಿಎಂಕೆ, ಸಮಾಜವಾದಿ ಪಕ್ಷಗಳು ಮತ್ತು ಎಡ ಪಕ್ಷಗಳು ಅವರನ್ನು ಬೆಂಬಲಿಸುತ್ತಿವೆ. ಇದು ಅತ್ಯುತ್ತಮ ಮೌಲ್ಯಗಳ ಕಾಮನಬಿಲ್ಲಿನ ಬಣ್ಣದ ಒಕ್ಕೂಟ ಎಂದು ನಾನು ಭಾವಿಸುತ್ತೇನೆ ಟಿಎಂಸಿ ನಾಯಕ ರಾಯ್ ಹೇಳಿದರು.

ನಾವು ದ್ರೌಪದಿ ಅವರನ್ನು ಗೌರವಿಸುತ್ತೇವೆ
ಇದು ಐಡೆಂಟಿಟಿ ರಾಜಕಾರಣದ ಪ್ರಶ್ನೆಯಲ್ಲ, ನಾವು ದ್ರೌಪದಿ ಮುರ್ಮು ಗೌರವಿಸುತ್ತೇವೆ, ಆದರೆ ಇದು ಸಿದ್ಧಾಂತಗಳ ಸ್ಪರ್ಧೆಯಾಗಿದೆ ಎಂದು ಸಿಪಿಐ ಎಂನ ಸೀತಾರಾಂ ಯೆಚೂರಿ ಹೇಳಿದ್ದಾರೆ. ಜುಲೈ 18ರ ರಾಷ್ಟ್ರಪತಿ ಚುನಾವಣೆಗೆ ಸಿನ್ಹಾ ಅವರು ನಾಮಪತ್ರ ಸಲ್ಲಿಸುವಾಗ ಹಲವಾರು ವಿರೋಧ ಪಕ್ಷದ ನಾಯಕರು ಜೊತೆಗಿದ್ದರು.

ಈಗಾಗಲೇ ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಕೆ
ಎನ್ಡಿಎಯ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್, ಬಿ.ಎಸ್. ಬೊಮ್ಮಾಯಿ, ಭೂಪೇಂದ್ರ ಪಟೇಲ್, ಹಿಮಂತ ಬಿಸ್ವ ಶರ್ಮಾ, ಪುಷ್ಕರ್ ಸಿಂಗ್ ಧಾಮಿ, ಪ್ರಮೋದ್ ಸಿಂಗ್ ಧಾಮಿ ಸಾವಂತ್ ಮತ್ತು ಎನ್. ಬಿರೇನ್ ಸಿಂಗ್ ಮುಂತಾದವರೊಂದಿಗೆ ಆಗಮಿಸಿ ಅವರು ಶುಕ್ರವಾರ ನಾಪತ್ರ ಸಲ್ಲಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications