ರಾಷ್ಟ್ರಪತಿ ಚುನಾವಣೆ : ಮಮತಾ ಬ್ಯಾನರ್ಜಿ ಸಭೆಯತ್ತ ಎಲ್ಲರ ಚಿತ್ತ
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಸುಮಾರು 16ಪಕ್ಷಗಳ ನಾಯಕರು, ಮುಖಂಡರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್ ಜತೆಗೆ ಬುಧವಾರ ಮಮತಾ ಸುಮಾರು ಅರ್ಧ ಗಂಟೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರ ಅಧಿಕಾರಾವಧಿ ಜು. 24ರಂದು ಕೊನೆಗೊಳ್ಳಲಿದೆ. ಈ ಸಂಬಂಧ ಜು. 18ರಂದು ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ಹಿನ್ನೆಲೆ ದೆಹಲಿಯಲ್ಲಿಬುಧವಾರ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯಲಿರುವ ಸಭೆಯತ್ತ ಎಲ್ಲರ ಗಮನ ಹರಿದಿದೆ. ವಿರೋಧ ಪಕ್ಷಗಳ ಕೆಲವು ರಾಷ್ಟ್ರ ಮತ್ತು ರಾಜ್ಯದ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.
ಆಡಳಿತ ಮತ್ತು ಬಲಾಡ್ಯ ಪ್ರತಿಪಕ್ಷಗಳಿಂದ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾರೆ. ಸ್ಥಳಿಯ ಪಕ್ಷಗಳು ಸೇರಿಕೊಂಡು ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೆ ರಾಜಕೀಯವಾಗಿ ಆಡಳಿತ ಪಕ್ಷವನ್ನು ಮಣಿಸಬಹುದು ಎಂದೆಲ್ಲ ಚರ್ಚೆಯಾಗುತ್ತಿವೆ. ಸ್ಥಳೀಯ ಪಕ್ಷಗಳು ಒಟ್ಟಾಗಿ ಆಡಳಿತ ಪಕ್ಷವನ್ನು ಕಟ್ಟಿಹಾಕಲು ಆ ಮೂಲಕ ರಾಷ್ಟ್ರಪತಿ ಸ್ಥಾನ ಚುನಾವಣೆಗೆ ತಂತ್ರಗಾರಿಕೆ ರೂಪಿಸುವತ್ತ ಮಮತಾ ಬ್ಯಾನರ್ಜಿ ಚಿತ್ತ ನೆಟ್ಟಿದ್ದಾರೆ.

ವಿರೋಧ ಪಕ್ಷದ ನಾಯಕರೊಬ್ಬರನ್ನು ಕಣ್ಣಕ್ಕಿಳಿಸುವ ಕುರಿತು ಮಂಗಳವಾರವೇ ಎನ್ ಸಿಪಿ ಪಕ್ಷದ ನೇತೃತ್ವ ವಹಿಸಿರುವ ಶರದ್ ಪವಾರ್ ಜತೆಗೆ ಮಮತಾ ಕೆಲ ಹೊತ್ತು ಚರ್ಚಿಸಿ ಮನವಿ ಮಾಡಿದ್ದಾರೆ. ಆದರೆ ಶರದ್ ಪವಾರ್ ಅವರು ಮಮತಾ ಮನವಿ ತಿರಸ್ಕರಿಸಿದ್ದಾರೆ. ಸಭೆಯಲ್ಲಿ ನಿರ್ಣಯ ಬಗ್ಗೆ ಸಂಜೆ ನಂತರ ಸಷ್ಟ ಮಾಹಿತಿ ಸಿಗಲಿದೆ.
ಸಭೆಗೆ ರಾಜ್ಯ ನಾಯಕರು:?
ಕರ್ನಾಟಕದ ಜೆಡಿಎಸ್ ನಿಂದ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ. ಇತ್ತ ಕಾಂಗ್ರೆಸ್ ಸೇರಿದಂತೆ ಸಿಪಿಐನ ಹಲವು ನಾಯಕರು ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ. ಡಿಎಂಕೆ, ಶಿವಸೇನೆ ಮತ್ತಿತರ ಪಕ್ಷಗಳ ನಾಯಕರು ಪಾಲ್ಗೊಳ್ಳುವುದು ಖಚಿತವಾಗಿದೆ.
ಉತ್ಸುಕರಾಗಿರುವ ಮಮತಾ
ಕಳೆದ ಬಾರಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಬೃಹತ್ ವಿಜಯ ಸಾಧಿಸಿ ಹೊರ ಹೊಮ್ಮಿದ ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ರಾಜಕೀಯದಲ್ಲಿ ಹೆಚ್ಚು ಉತ್ಸುಕರಾಗಿದ್ದಾರೆ. ಇತ್ತೀಚೆಗೆ ಪ್ರವಾದಿ ಮಹಮ್ಮದ್ ಹೇಳಿಕೆ ವಿರುದ್ಧ ನಡೆದ ಕೆಲ ಬೆಳವಣಿ ಹಿನ್ನೆಲೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications