ರಾಷ್ಟ್ರಪತಿ ಚುನಾವಣೆ: ಗೋಪಾಲ ಗಾಂಧಿ ವಿಪಕ್ಷಗಳ ಅಂತಿಮ ಆಯ್ಕೆ?
ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿಯ ಅಭ್ಯರ್ಥಿಯನ್ನಾಗಿ ಘೋಷಿಸಲು ಸಿದ್ಧತೆ ನಡೆಸಿದ್ದರೆ, ವಿರೋಧ ಪಕ್ಷಗಳು ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸಲು ನಿರ
ನವದೆಹಲಿ, ಮೇ 19: ರಾಷ್ಟ್ರಪತಿ ಚುನಾವಣೆಗಾಗಿ ವಿವಿಧ ತಂತ್ರಗಾರಿಕೆಯಲ್ಲಿ ತೊಡಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಲೆಕ್ಕಾಚಾರ ಹಾಕತೊಡಗಿವೆ. ಬಿಜೆಪಿ ಪಾಳಯದಿಂದ ಒರಿಸ್ಸಾದ ರಾಜಕಾರಣಿ ದ್ರೌಪದಿ ಮರ್ಮು ಹೆಸರು ಅಂತಿಮಗೊಂಡಿದ್ದರೆ, ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳಿಂದ ಮಹಾತ್ಮಾ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಅಭ್ಯರ್ಥಿಯನ್ನಾಗಿಸುವುದು ಬಹುತೇಕ ನಿಶ್ಚಿತವಾಗಿದೆ ಎನ್ನಲಾಗಿದೆ.
ಇತ್ತ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಹಾತ್ಮಾ ಗಾಂಧೀಜಿಯವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸಲು ನಿರ್ಧರಿಸಿವೆ.[ಇವರನ್ನು ರಾಷ್ಟ್ರಪತಿ ಹುದ್ದೆಗೆ ಮೋದಿ ಏಕೆ ಆರಿಸಲಿಕ್ಕಿಲ್ಲ?]

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಐ (ಎಂ) ಪಕ್ಷದ ಸೀತಾರಾಂ ಯೆಚೂರಿ, ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವತಿಯಿಂದ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸುವುದು ಬಹುತೇಕ ನಿಶ್ಚಿತವಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಘೋಷಿಸುವವರೆಗೂ ತಾವು ತಮ್ಮ ಅಭ್ಯರ್ಥಿಯನ್ನು ಘೋಷಿಸದೇ ಇರಲು ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಿರ್ಧರಿಸಿವೆ ಎಂದು ಅವರು ತಿಳಿಸಿದ್ದಾರೆ.[ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?]
ಆದರೆ, ಎಡಪಕ್ಷಗಳಲ್ಲಿ ತಮ್ಮ ಒಕ್ಕೊರಲಿನ ಅಭ್ಯರ್ಥಿಯ ಬಗ್ಗೆ ಗೊಂದಲವಿದೆ. ಈ ಗುಂಪಿನ ಕೆಲವು ನಾಯಕರು ಮಹಾರಾಷ್ಟ್ರದ ಎನ್ ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಆಲೋಚಿಸಿದ್ದರೆ, ಮತ್ತೂ ಕೆಲವರು ಜೆಡಿಯು ನ ರಾಷ್ಟ್ರೀಯ ನಾಯಕ ಶರದ್ ಯಾದವ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ.
ಆದರೂ, ಗೋಪಾಲ ಕೃಷ್ಣ ಗಾಂಧಿಯವರ ಬಗ್ಗೆ ಬಹುತೇಕರ ಒಲವಿದ್ದು, ಅವರೇ ಎಡಪಕ್ಷಗಳು ಹಾಗೂ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆಯಷ್ಟೇ ಹೊರಬೀಳಬೇಕಿದೆ.
{promotion-urls}
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications