ರಾಷ್ಟ್ರಪತಿ ಚುನಾವಣೆ; ಮತ ಎಣಿಕೆ ಕೇಂದ್ರಕ್ಕೆ ಯಾರಿಗೆ ಪ್ರವೇಶ?
ನವದೆಹಲಿ, ಜುಲೈ, 21: ಸಂಸತ್ ಭವನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಭಾರತದ 15ನೇ ರಾಷ್ಟ್ರಪತಿ ಯಾರು? ಎಂಬುದು ಸಂಜೆಯ ವೇಳೆಗೆ ತಿಳಿಯಲಿದೆ.
ಜುಲೈ 18 ರಂದು ಸಂಸತ್ ಭವನದಲ್ಲಿ ಮತ್ತು ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಷ್ಟ್ರಪತಿ ಚುನಾವಣೆ ಮತದಾನ ನಡೆದಿತ್ತು. ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಮತ ಎಣಿಕೆ ಗುರುವಾರ ನಡೆಯಲಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಕಣದಲ್ಲಿದ್ದಾರೆ. ಅಂಕಿಸಂಖ್ಯೆಗಳ ಲೆಕ್ಕಾಚಾರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

736ರಲ್ಲಿ 728 ಮತದಾರರು ಮತ ಚಲಾಯಿಸಿದ್ದಾರೆ. ಸಂಸತ್ ಭವನದಲ್ಲಿ ಶೇಕಡಾ 98.91ರಷ್ಟು ಮತದಾನವಾಗಿತ್ತು. ಮತದಾನ ನಡೆದ ರಾಜ್ಯಗಳಿಂದ ಮತ ಪೆಟ್ಟಿಗೆಗಳನ್ನು ಸಂಸತ್ ಭವನಕ್ಕೆ ತರಲಾಗಿದೆ.
ಮತ ಎಣಿಕೆ ಹಿನ್ನೆಲೆ ಸಂಸತ್ ಭವನದ ಕೊಠಡಿ ಸಂಖ್ಯೆ 63ರಲ್ಲಿ ಹಾಗೂ ಅಲ್ಲಿನ ಆವರಣವನ್ನು ಸ್ಯಾನಿಟೈಸ್ ಮಾಡಿದ್ದು, ಸೂಕ್ತ ಭದ್ರತೆಯನ್ನು ಕಲ್ಪಿಸಲಾಗಿದೆ. ಮತ ಎಣಿಕೆ ಅಧಿಕಾರಿಗಳು, ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿಗಳು ಮತ್ತು ಪ್ರತಿ ಅಭ್ಯರ್ಥಿಯ ಒಬ್ಬ ಅಧಿಕೃತ ಪ್ರತಿನಿಧಿ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಬಹುದು.
ಚುನಾವಣಾ ಆಯೋಗದಿಂದ ನೇಮಕಗೊಂಡ ವೀಕ್ಷಕರಿಗೆ ಸಹಾಯ ಮಾಡಲು ನಿಯೋಜಿಸಲಾದ ಅಧಿಕಾರಿಗಳು ಮಾತ್ರ ಆವರಣ ಪ್ರವೇಶಿಸಲು ಅವಕಾಶವಿದೆ. ಪಾಸ್ಗಳನ್ನು ಹೊಂದಿರುವ ಆಯೋಗ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಮತ ಎಣಿಕೆ ಹಾಲ್ಗೆ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.
ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ. ಸಿ. ಮೋದಿ ಚುನಾವಣಾಧಿಕಾರಿ. ಚುನಾವಣಾ ಫಲಿತಾಂಶದ ಲೀಡ್ ಮುಂತಾದ ಮಾಹಿತಿಗಳನ್ನು ಅವರೇ ವಿವರಿಸಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications