ರಾಷ್ಟ್ರಪತಿ ಚುನಾವಣೆ: ಸರ್ವಪಕ್ಷಗಳೊಂದಿಗೆ ಸಮಾಲೋಚಿಸಲಿರುವ ನಡ್ಡಾ, ರಾಜನಾಥ್
ನವದೆಹಲಿ, ಜೂನ್ 12: ರಾಷ್ಟ್ರಪತಿ ಚುನಾವಣೆಗೆ ಈಗಾಗಲೇ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಹೆಚ್ಚಿನ ಸಂಖ್ಯಾಬಲ ಇದ್ದರೂ ಗೆಲುವು ನಿಶ್ಚಿತ ಎನ್ನುವಂತಿಲ್ಲ. ಗೆಲುವು ಕಷ್ಟಕರವೂ ಅಲ್ಲ. ಆದರೂ ರಾಷ್ಟ್ರಪತಿ ಅಯ್ಕೆ ಒಮ್ಮತದಿಂದ ಕೂಡಿರಬೇಕು ಎಂಬ ಉದ್ದೇಶ ಹೊಂದಿರುವ ಬಿಜೆಪಿ ಇದೀಗ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಮಾಲೋಚನೆ ಕಾರ್ಯ ನಡೆಸಲು ಮುಂದಾಗಿದೆ. ಅದಕ್ಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರಿಗೆ ಪಕ್ಷ ಜವಾಬ್ದಾರಿ ನೀಡಿದೆ.
ಎನ್ಡಿಎ ಮತ್ತು ಯುಪಿಎ ಮೈತ್ರಿಕೂಟಗಳ ಪಕ್ಷಗಳು ಹಾಗು ಪಕ್ಷೇತರ ಸಂಸದರ ಜೊತೆ ಸಮಾಲೋಚನೆ ನಡೆಸಲು ಜೆ ಪಿ ನಡ್ಡ ಮತ್ತು ರಾಜನಾಥ್ ಸಿಂಗ್ ಅವರಿಗೆ ಅಧಿಕಾರ ಕೊಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ತಿಳಿಸಿದ್ಧಾರೆ.
ಅತ್ತ, ಮಮತಾ ಬ್ಯಾನರ್ಜಿ 19 ವಿಪಕ್ಷ ನಾಯಕರ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕಾರ್ಯತಂತ್ರ ಹಾಗು ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ಜೂನ್ 15ರಂದು ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ಸಭೆ ನಡೆಸಲಿದ್ಧಾರೆ. ಈ 19 ನಾಯಕರಲ್ಲಿ ಬಿಜೆಡಿ ಪಕ್ಷದ ನವೀನ್ ಪಟ್ನಾಯಕ್, ಜೆಡಿಎಸ್ ನಾಯಕ ಎಚ್ ಡಿ ದೇವೇಗೌಡ ಅವರೂ ಇದ್ದಾರೆ.

ಕಳೆದ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಪರವಾಗಿ ಬಿಜೆಡಿ ಬೆಂಬಲ ನೀಡಿತ್ತು. ಈ ಬಾರಿ ಅದೇ ಪುನರಾವರ್ತನೆ ಆಗುತ್ತದೆ ಎಂದು ನಿರೀಕ್ಷಿಸುವುದು ಕಷ್ಟ. ಹೀಗಾಗಿ, ಎನ್ಡಿಎ ಮೈತ್ರಿಕೂಟದ ಪಕ್ಷಗಳು ಮತ್ತು ಸಂದರ್ಭಾನುಸಾರ ಬೆಂಬಲ ನೀಡುವ ಪಕ್ಷಗಳನ್ನು ಗಟ್ಟಿ ಮಾಡಿಕೊಳ್ಳುವುದು ಬಿಜೆಪಿಗೆ ಮೊದಲ ಆದ್ಯತೆಯಾಗಿದೆ. ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಜೆಡಿಯುನ ನಾಯಕ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಜೊತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕಳೆದ ತಿಂಗಳೇ ಮಾತುಕತೆ ನಡೆಸಿರುವುದು ತಿಳಿದುಬಂದಿದೆ.
ಹಾಗೆಯೇ, ಎಲ್ಲಾ ಪಕ್ಷಗಳೂ ಸೇರಿ ಒಮ್ಮತದ ಅಭ್ಯರ್ಥಿ ಹಾಕಲು ಸಾಧ್ಯವೇ ಎಂಬ ಸಾಧ್ಯಾಸಾಧ್ಯತೆಯನ್ನು ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ನೋಡಲಿದ್ಧಾರೆ. ಹೀಗಾಗಿ, ಯುಪಿಎ ಪಕ್ಷಗಳೊಂದಿಗೆ ಇವರಿಬ್ಬರು ಸಮಾಲೋಚನೆ ನಡೆಸಲಿದ್ಧಾರೆ.

ಕಳೆದ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ಎಲ್ಲಾ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲು ಒಂದು ಸಮಿತಿ ರಚಿಸಿತ್ತು. ಆಗ ಸಚಿವರಾಗಿದ್ದ ಎಂ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್ ಮತ್ತು ಅರುಣ್ ಜೇಟ್ಲಿ ಅವರು ಈ ಸಮಿತಿಯಲ್ಲಿದ್ದರು. ಆಗ ನವೀನ್ ಪಟ್ನಾಯಕ್ ಅವರ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ರಾಷ್ಟ್ರಪತಿ ಸ್ಥಾನಕ್ಕೆ ರಾಮನಾಥ್ ಕೋವಿಂದ್ ಅವರನ್ನ ಬೆಂಬಲಿಸಿದ್ದ ಬಿಜೆಡಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ವೆಂಕಯ್ಯ ನಾಯ್ಡುಗೆ ಬೆಂಬಲ ನೀಡಲಿಲ್ಲ. ಈ ಬಾರಿ ಬಿಜೆಡಿ ಬೆಂಬಲ ಹೇಗೆ ಬೇಕಾದರೂ ವಾಲಬಹುದು ಎನ್ನಲಾಗುತ್ತಿದೆ.
ಚುನಾವಣಾ ಆಯೋಗ ಪ್ರಕಟಿಸಿರುವಂತೆ ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಜೂನ್ 29ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎನ್ಡಿಎಯಿಂದ ಯಾರು ರಾಷ್ಟ್ರಪತಿ ಸ್ಥಾನಕ್ಕೆ ಸಂಭಾವ್ಯ ಅಭ್ಯರ್ಥಿಗಳು ಎಂಬುದು ಗೊತ್ತಾಗಿಲ್ಲ.
Recommended Video
(ಒನ್ಇಂಡಿಯಾ ಸುದ್ದಿ)
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications