ಗುರುವಾರದಿಂದ ರಾಷ್ಟ್ರವ್ಯಾಪಿ ಲಾರಿ-ಟ್ರಕ್ ಮುಷ್ಕರಕ್ಕೆ ಕರೆ
ಬೆಂಗಳೂರು, ಜುಲೈ 19: ಇಂಧನ ಬೆಲೆ ಏರಿಕೆ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಟ್ರಕ್ ಹಾಗೂ ಲಾರಿ ಮಾಲೀಕರ ಸಂಘಟನೆಗಳು ಜುಲೈ20ರಿಂದ ಅನಿರ್ಧಿಷ್ಟಾವಧಿ ಕಾಲ ಮುಷ್ಕರ ಹೂಡಲು ಕರೆ ನೀಡಿವೆ.
ಪೆಟ್ರೋಲ್ ಗೆ ರಾಷ್ಟ್ರವ್ಯಾಪಿ ಏಕರೂಪ ದರ ನಿಗದಿ, ತ್ರೈಮಾಸಿಕ ಪರಿಶೀಲನಾ ಪದ್ದತಿ, ಟೋಲ್ ಮುಕ್ತ ಭಾರತಕ್ಕೆ ಆಗ್ರಹಿಸಿ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘದ ವತಿಯಿಂದ ಜುಲೈ 20ರಿಂದ ದೇಶದೆಲ್ಲೆಡೆ ವಾಣಿಜ್ಯ ವಾಹನಗಳನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟ ಅವಧಿ ಮುಷ್ಕರ ಆರಂಭಗೊಳ್ಳಲಿದೆ.

ಹಾಲು, ಔಷಧಿ, ತರಕಾರಿ, ಪೆಟ್ರೋಲ್, ಇಂಧನ ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ವಾಹನಗಳನ್ನು ದೇಶಾದ್ಯಂತ ಸ್ಥಗಿತಗೊಳಿಸಿ, ಮುಷ್ಕರ ಮಾಡಲಾಗುತ್ತದೆ ಎಂದು ಕರ್ನಾಟಕ ಭಾಗದ ಪದಾಧಿಕಾರಿ ಸೈಯದ್ ಸೈಫುಲ್ಲಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಥರ್ಡ್ ಪಾರ್ಟಿ ವಿಮಾ ಪಾಲಿಸಿ ದರ ಕಡಿತ ಗೊಳಿಸುವುದು, ಪಾರದರ್ಶಕತೆ ಕಾಯ್ದುಕೊಳ್ಳು ವುದು, ಟಿಡಿಎಸ್ ರದ್ದುಗೊಳಿಸುವುದು, ಪೂರ್ವಭಾವಿ ಆದಾಯ ಕಾಯ್ದೆ ಪರಿವರ್ತಿಸಲು ಆಗ್ರಹಿಸಲಾಗುತ್ತದೆ.
ಈ-ವೇ ಬಿಲ್ ಕುರಿತು ಎದುರಾಗಿರುವ ಸಮಸ್ಯೆ ಪರಿಹರಿಸಬೇಕಾಗಿದೆ. ಪ್ರವಾಸಿ ವಾಹನ ಹಾಗೂ ಬಸ್ ಗಳಿಗೆ ರಾಷ್ಟ್ರೀಯ ಪರವಾನಗಿ ನೀಡಬೇಕು, ಜವಾಹರ ಲಾಲ್ ನೆಹರು ಪೋರ್ಟ್ ಟ್ರಸ್ಟ್ ನೂತನವಾಗಿ ಪ್ರಕಟಿಸಿರುವ ನೇರ ಫೋರ್ಟ್ ಡೆಲಿವರಿ ಪದ್ದತಿ ಯನ್ನ ರದ್ದುಗೊಳಿಸುವುದು, ಬಂದರುಗಳಲ್ಲಿ ಆಗುತ್ತಿರುವ ದಟ್ಟಣೆ ಸುಗಮಗೊಳಿಸಬೇಕೆಂದು ಒತ್ತಾಯಿಸಲಾಗುತ್ತದೆ.
ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಷಣ್ಮುಖಪ್ಪ ಅಧ್ಯಕ್ಷತೆಯಲ್ಲಿ ಅನಿರ್ಧಿಷ್ಟ ಅವಧಿ ಮುಷ್ಕರದ ಕುರಿತು ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಲಾರಿ, ಟ್ಯಾಕ್ಸಿ, ಟ್ರಕ್, ಮಿನಿಗೂಡ್ಸ್, 3 ಮತ್ತು 4 ಚಕ್ರಗಳ ವಾಹನಗಳ ಮಾಲೀಕರು ಪಾಲ್ಗೊಂಡಿದ್ದರು.
ಕೇರಳದಲ್ಲಿ ಜುಲೈ 20ರಿಂದ ಮುಷ್ಕರ ನಡೆಸಲು All India Motor Transport Congress (AIMTC) ಕರೆ ನೀಡಿದೆ.
-
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Zomato: ಹಸಿದ ಹೊಟ್ಟೆಗೆ ಜೊಮ್ಯಾಟೋ ಬರೆ.. ಆನ್ಲೈನ್ ಊಟ ಬಲು ದುಬಾರಿ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications