ಹೃದಯಾಘಾತವಾಗಿ ಶಿವಲಿಂಗದ ಮೇಲೆ ಬಿದ್ದು ಸಾವನ್ನಪ್ಪಿದ ಅರ್ಚಕ
ಹೈದರಾಬಾದ್, ಜೂ 16: ನಾಲ್ಕು ದಶಕಗಳಿಂದ ಶಿವನನ್ನು ಪೂಜಿಸಿಕೊಂಡು ಬರುತ್ತಿದ್ದ ಹಿರಿಯ ಅರ್ಚಕರೊಬ್ಬರು, ಶಿವಲಿಂಗಕ್ಕೆ ಅಭಿಷೇಕ ನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ, ಶಿವಲಿಂಗದ ಮೇಲೆಯೇ ಬಿದ್ದು ಸಾವನ್ನಪ್ಪಿದ ತೀರಾ ಅಪರೂಪದ ಘಟನೆ, ಆಂಧ್ರದ ಪುರಾಣಪ್ರಸಿದ್ದ ಶಿವನ ದೇವಾಲಯವೊಂದರಲ್ಲಿ ನಡೆದಿದೆ.
ಜೂನ್ ಹನ್ನೊಂದು ಸೋಮವಾರದಂದು ಈ ಘಟನೆ ಸಂಭವಿಸಿದ್ದು, ಗರ್ಭಗುಡಿಯಲ್ಲಿನ ಸಿಸಿಟಿವಿ ಫುಟೇಜ್ ನಲ್ಲಿ ಈ ದೃಶ್ಯ ಸೆರೆಯಾಗಿದೆ. 75ವರ್ಷದ ಕಂಡುಕರಿ ರಾಮರಾವ್ ಕಳೆದ ನಾಲ್ಕು ದಶಕಗಳಿಂದ ಶಿವನನ್ನು ಪೂಜಿಸಿಕೊಂಡು ಬರುತ್ತಿದ್ದು, ಇವರ ತಾತ ಕೂಡಾ ಶಿವರಾತ್ರಿಯ ದಿನದಂದು ಇದೇ ರೀತಿ ಕೊನೆಯುಸಿರುಯೆಳೆದಿದ್ದರು.
ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿನ ಭೀಮಾವರಂನಲ್ಲಿನ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಆರುಗಂಟೆಗೆ ಗರ್ಭಗುಡಿಯಲ್ಲಿ ಶಿವಲಿಂಗಕ್ಕೆ ಒಂದು ಸುತ್ತು ಪ್ರದಕ್ಷಿಣೆ ಹಾಕಿ, ಹಾಲಿನ ಅಭಿಷೇಕ ನಡೆಸಿದಾಗ ಒಮ್ಮೆ ಅರ್ಚಕ ರಾಮರಾವ್ ಕುಸಿದುಬೀಳುತ್ತಾರೆ.

ಕೂಡಲೇ ಅವರನ್ನು ಇನ್ನೊಬ್ಬರು ಅರ್ಚಕರು ಮೇಲೆಕ್ಕೆತ್ತಿ ನಿಲ್ಲಿಸುತ್ತಾರೆ, ಆದರೆ ಕ್ಷಣಾರ್ಧದಲ್ಲಿ ಮತ್ತೆ ಅರ್ಚಕ ರಾಮರಾವ್ ಶಿವಲಿಂಗದ ಮೇಲೆ ಬಿದ್ದು ಪ್ರಾಣಬಿಟ್ಟಿದ್ದಾರೆ. ಈ ಎಲ್ಲಾ ದೃಶ್ಯಗಳು ದೇವಾಲಯದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆಂಧ್ರಪದೇಶ ಮತ್ತು ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ದೇವಾಲಯದ ಆಡಳಿತ ಮಂಡಳಿಯ ಪ್ರಕಾರ, ರಾಮರಾವ್ ಅವರು ಗರ್ಭಗುಡಿಯಲ್ಲಿ ಸಾವನ್ನಪ್ಪಿಲ್ಲ, ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಇವರು ಕೊನೆಯುಸಿರುಯೆಳೆದಿದ್ದಾರೆಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ, ಭಕ್ತರು ಅರ್ಚಕ ರಾಮರಾವ್ ಗರ್ಭಗುಡಿಯಲ್ಲಿ ಸಾವನ್ನಪ್ಪಿದ್ದು, ಇಂತಹ ಮರಣ ಎಲ್ಲರಿಗೂ ಬರದು ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಶಿವನಿಗೆ ಪ್ರಿಯವಾದ ದ್ವಾದಶಿ ಸೋಮವಾರದಂದು ಅರ್ಚಕರು ಸಾವನ್ನಪ್ಪಿದ್ದು ಮಂಗಳಕರವೆಂದು ಹೇಳಲಾಗುತ್ತಿದೆ.
ಭೀಮಾವರಂನಲ್ಲಿರುವ ಈ ಶಿವನ ದೇವಾಲಯ ಆಂಧ್ರದ ಐದು ಪ್ರಸಿದ್ದ ಈಶ್ವರನ ದೇವಾಲಯಗಳಲ್ಲೊಂದು. ಚಾಲುಕ್ಯ ಸಾಮ್ರಾಜ್ಯದ ರಾಜಾ ಭೀಮೇಶ್ವರ ಈ ದೇವಾಲಯವನ್ನು ನಿರ್ಮಿಸಿದ್ದು ಎನ್ನುತ್ತದೆ ಈ ದೇವಾಲಯದ ಇತಿಹಾಸ.
-
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications