ಪ್ರಾಥಮಿಕ ಶಿಕ್ಷಣದ ಕುರಿತು ಆರ್ಎಸ್ಎಸ್ ಮಹತ್ವದ ಹೇಳಿಕೆ
ನವದೆಹಲಿ, ಜುಲೈ, 7: ದೇಶದಲ್ಲಿ ಭಾಷ ವಿವಾದದ ಬೆನ್ನಲ್ಲೇ ಇದೀಗ ಆರ್ಎಸ್ಎಸ್ ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ಪ್ರಾಥಮಿಕ ಶಿಕ್ಷಣವನ್ನು ಜನರು ತಮ್ಮ ಪ್ರದೇಶಗಳಲ್ಲಿ ಮಾತನಾಡುವ ಭಾಷೆಯಲ್ಲೇ ನೀಡಬೇಕು ಎಂದು ಹೇಳಿ ಗಮನ ಸೆಳೆದಿದೆ.
ಕೇಶವ ಕುಂಜ್ನಲ್ಲಿ ಇಂದು (ಜುಲೈ 7) ನಡೆದ ಪತ್ರಿಕಾಗೋಷ್ಠಿಯಲ್ಲಿ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಮಾತನಾಡಿ, ಸಂಘವು ಯಾವಾಗಲೂ ಭಾರತದ ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳೆಂದು ನಿಲುವು ಹೊಂದಿದೆ. ಜನರು ತಮ್ಮ ಸ್ವಂತ ಪ್ರದೇಶಗಳಲ್ಲಿ ತಮ್ಮ ಭಾಷೆಗಳನ್ನು ಮಾತನಾಡುತ್ತಾರೆ. ಆದ್ದರಿಂದ ಪ್ರಾಥಮಿಕ ಶಿಕ್ಷಣವನ್ನು ಅದೇ ಭಾಷೆಯಲ್ಲೇ ನೀಡಬೇಕು. ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡು ತ್ರಿಭಾಷಾ ನೀತಿಯನ್ನು ಹಿಂತೆಗೆದುಕೊಂಡ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಪ್ರಕಾರ, ತ್ರಿಭಾಷಾ ನೀತಿಯನ್ನು ಜಾರಿ ಮಾಡಲಾಗಿದ್ದು. ಈ ನೀತಿಯು ವಿದ್ಯಾರ್ಥಿಗಳು ಶಾಲಾ ಶಿಕ್ಷಣದಲ್ಲಿ ಮೂರು ಭಾಷೆಗಳನ್ನು ಕಲಿಯುವುದನ್ನು ಕಡ್ಡಾಯಗೊಳಿಸುತ್ತದೆ. ಬಹುಭಾಷಾ ಪ್ರಜ್ಞೆಯನ್ನ ಉತ್ತೇಜಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಪ್ರಾದೇಶಿಕ ವೈವಿಧ್ಯತೆಯೊಂದಿಗೆ ಮತೋಲನ ಕಾಯ್ದುಕೊಳ್ಳುವುದು ಇದರ ಉದ್ದೇಶ ಆಗಿದೆ. ರಾಜ್ಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಭಾಷೆಗಳನ್ನು ಆಯ್ಕೆ ಮಾಡಲು ಅವಕಾಶ ಇದೆ ಎಂದು ಆರ್ಎಸ್ಎಸ್ ಹೇಳಿದೆ.
ಆದರೂ, ತಮಿಳುನಾಡು ಮತ್ತು ಕರ್ನಾಟಕದಂತಹ ದಕ್ಷಿಣ ರಾಜ್ಯಗಳು, ಈ ನೀತಿಯಿಂದ ಹಿಂದಿ ಮಾತನಾಡದ ವಿದ್ಯಾರ್ಥಿಗಳು ಹಿಂದಿ ಕಲಿಯಲೇಬೇಕು ಎಂದು ಒತ್ತಾಯಿಸುವಂತಿದೆ. ಇದರಿಂದ ಪ್ರಾದೇಶಿಕ ಭಾಷೆಗಳು ಮತ್ತು ಸಂಸ್ಕೃತಿಗಳಿಗೆ ಅಡ್ಡಿಪಡಿಸಿದಂತಾಗುತ್ತದೆ ಎಂದು ವಾದಿಸಿದ್ದವು. ಅಲ್ಲದೆ, ಈ ರಾಜ್ಯಗಳು ಪ್ರಾದೇಶಿಕ ಭಾಷೆ ಪ್ರಥಮ ಹಾಗೂ ಇಂಗ್ಲಿಷ್ ಅನ್ನು ದ್ವಿಭಾಷೆಯನ್ನಾಗಿ ಅಳವಡಿಕೆ ಮಾಡಿಕೊಂಡಿವೆ.
ಅಲ್ಲದೆ, ಸದ್ಯ ಸಂಘ ರಚನಾ ಹಿನ್ನೆಲೆ ದೇಶದಲ್ಲಿ 58,964 ಮಂಡಲಗಳು, 44,055 ವಸಾಹತುಗಳು ಇವೆ. ಹಿಂದೂ ಸಮ್ಮೇಳನಗಳಲ್ಲಿ ಸಾಮಾಜಿಕ ಹಬ್ಬಗಳು, ಸಾಮಾಜಿಕ ಏಕತೆ ಮತ್ತು ಸಾಮರಸ್ಯದ ವಿಷಯಗಳು, ಪಂಚ ಪರಿವರ್ತನವನ್ನು ಚರ್ಚೆ ಮಾಡಲಾಗುವುದು ಎಂದರು
ಅಲ್ಲದೆ, ಸಮಾಜದಲ್ಲಿ ಸಾಮರಸ್ಯವನ್ನು ಉತ್ತೇಜಿಸಲು 11,360 ಬ್ಲಾಕ್ಗಳಲ್ಲಿ ಸಾಮಾಜಿಕ ಸಾಮರಸ್ಯ ಸಭೆಗಳನ್ನು ಆಯೋಜನೆ ಮಾಡಲಾಗುವುದು. ಸಂಘದ ರಚನೆ ಪ್ರಕಾರ, ದೇಶದ 924 ಜಿಲ್ಲೆಗಳಲ್ಲಿ ಪ್ರಮುಖ ನಾಗರಿಕ ವಿಚಾರ ಸಂಕಿರಣಗಳನ್ನು ಆಯೋಜನೆ ಮಾಡಲಾಗುವುದು ಎಂದು ಹೇಳಿದರು.
ಪ್ರತಿ ಮನೆಗಳಿಗೆ ಭೇಟಿ ನೀಡಿ ಜನಸಂಪರ್ಕ ಕಾರ್ಯಕ್ರಮ ನಡೆಸಲಾಗುವುದು. ಶತಮಾನೋತ್ಸವ ವರ್ಷದ ಪ್ರಮುಖ ಗುರಿ ವೃತ್ತಿಗಳು, ಭೌಗೋಳಿಕ ಪ್ರದೇಶಗಳು ಮತ್ತು ಸಮುದಾಯಗಳಾದ್ಯಂತ ಸಮಗ್ರ ಸಾಮಾಜಿಕ ಏಕೀಕರಣವನ್ನು ಬೆಳೆಸುವುದು ಆಗಿದೆ. ಸಂಘದ ಶತಮಾನೋತ್ಸವ ವರ್ಷವು ವಿಜಯದಶಮಿ ಉತ್ಸವದಿಂದ ಪ್ರಾರಂಭ ಆಗಲಿದೆ. ವಿಜಯದಶಮಿ ದಿನದಂದು ಎಲ್ಲಾ ಸ್ವಯಂ ಸೇವಕರು ಉತ್ಸವದಲ್ಲಿ ಪಾಲ್ಗೊಳಲಿದ್ದಾರೆ ಎಂದು ಹೇಳಿದರು.
ಬೈಠಕ್ನಲ್ಲಿ ಮಣಿಪುರದ ಪ್ರಸ್ತುತ ಪರಿಸ್ಥಿತಿ, ಸ್ವಯಂಸೇವಕರು ಮಾಡುತ್ತಿರುವ ಕೆಲಸ ಮತ್ತು ಸಾಮಾಜಿಕ ಸಾಮರಸ್ಯಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಈ ವರ್ಷದ ಏಪ್ರಿಲ್ನಿಂದ ಜೂನ್ವರೆಗೆ ದೇಶಾದ್ಯಂತ ಒಟ್ಟು 100 ಪ್ರಶಿಕ್ಷಣ ವರ್ಗಗಳನ್ನು ನಡೆಸಲಾಗಿದೆ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications