ಪ್ರಧಾನಿ ಮೋದಿಯಿಂದ ಭೂತಾನ್ ರುಪೇ ಕಾರ್ಡ್ ಹಂತ-2 ಬಿಡುಗಡೆ
ನವದೆಹಲಿ, ನವೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಭೂತಾನ್ ರುಪೇ ಹಂತ-2ವನ್ನು ಇಂದು ಬಿಡುಗಡೆ ಮಾಡಿದ್ದಾರೆ.
ಭೂತಾನ್ ಕಾರ್ಡ್ಗಳನ್ನು ಹೊಂದಿರುವವರು ಭಾರತದಲ್ಲಿ ರುಪೇ ನೆಟ್ವರ್ಕ್ ಪ್ರವೇಶಿಸಲು ಅನುವು ಮಾಡಿಕೊಡುವ ರುಪೇ ಕಾರ್ಡ್ ಇದಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭೂತಾನ್ ಪ್ರಧಾನಿ ಲೋತಾಯ್ ತ್ಸೆರಿಂಗ್ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟನೆ ಮಾಡಿದ್ದಾರೆ.
ರುಪೇ ಕಾರ್ಡ್ ಭಾರತೀಯ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಪಾವತಿ ಜಾಲವಾಗಿದ್ದು, ಎಟಿಎಂಗಳು, ಪಿಒಎಸ್ ಸಾಧನಗಳು ಮತ್ತು ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿ ಬಳಕೆ ಮಾಡಲು ಅವಕಾಶ ನೀಡಲಾಗಿದೆ.

ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಭೂತಾನ್'ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಯವರು ರುಪೇ ಕಾರ್ಡ್ ಹಂತ-1ನ್ನು ಉದ್ಘಾಟನೆ ಮಾಡಿದ್ದರು. ಎರಡನೇ ಹಂತವು ಇದೀಗ ಭೂತಾನ್ ಕಾರ್ಡ್ ಹೊಂದಿರುವವರಿಗೆ ಭಾರತದಲ್ಲಿ ರುಪೇ ನೆಟ್ವರ್ಕ್ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ತಿಳಿಸಿದ್ದಾರೆ.
ರುಪೇ ಕಾರ್ಡ್ ಹಂತ-2ನ್ನು ಪ್ರಧಾನಿ ಮೋದಿ ಹಾಗೂ ಭೂತಾನ್ ಪ್ರಧಾನಮಂತ್ರಿಗಳು ಜಂಟಿಯಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಿದ್ದಾರೆ.
ಭಾರತ-ಭೂತಾನ್ ನಡುವಿನ ಸಾವಿರಾರು ವರ್ಷಗಳ ರಾಜತಾಂತ್ರಿಕ ಹಾಗೂ ಸಾಂಸ್ಕೃತಿಕ ಸಂಬಂಧ ಎರಡೂ ರಾಷ್ಟ್ರಗಳನ್ನು ಸದಾಕಾಲ ಒಟ್ಟಿಗೆ ಮುನ್ನಡೆಯುವಂತೆ ಪ್ರೇರೇಪಿಸುತ್ತವೆ. ಭಾರತ, ಭೂತಾನ್ ಸಂಬಂಧ ಅತ್ಯಂತ ಗಟ್ಟಿಯಾದುದು. ಮುಂದಿನ ವರ್ಷ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಸಹಾಯದೊಂದಿಗೆ ಭೂತಾನ್ ತನ್ನ ಮೊದಲ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ.
ಇದಕ್ಕಾಗಿ ಭೂತಾನ್ ರಾಷ್ಟ್ರದ ನಾಲ್ವರು ಬಾಹ್ಯಾಕಾಶ ಎಂಜಿನಿಯರ್'ಗಳು ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.
ಭೂತಾನ್ನ ಬಾಹ್ಯಾಕಾಶ ಯೋಜನೆ ಕ್ಷಿಪ್ರಗತಿಯಲ್ಲಿ ಮುಂದುವರೆಯುತ್ತಿರುವುದು ಸಂತಸವನ್ನುಂಟು ಮಾಡಿದೆ. ಭೂತಾನ್ನಲ್ಲಿ ರುಪೇ ಕಾರ್ಡ್ಗಳ ಹಂತ -1 ರ ಬಿಡುಗಡೆಯು ಭಾರತದ ಪ್ರವಾಸಿಗರಿಗೆ ಭೂತಾನ್ನಾದ್ಯಂತ ಎಟಿಎಂ ಮತ್ತು ಪಾಯಿಂಟ್ ಆಫ್ ಸೇಲ್ (ಪಿಒಎಸ್) ಟರ್ಮಿನಲ್ಗಳನ್ನು ಪ್ರವೇಶಿಸಲು ಅನುವು ಮಾಡಿಕೊಟ್ಟಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ











Click it and Unblock the Notifications