ಉತ್ತರಪ್ರದೇಶ ಚುನಾವಣೆ ಫಲಿತಾಂಶ: ಮೋದಿ ಬಗ್ಗೆ ರಾಹುಲ್ ನುಡಿದ ಭವಿಷ್ಯ
ಪ್ರಧಾನಿ ಮೋದಿ ವಿರುದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಕ್ ಪ್ರಹಾರ ಮುಂದುವರಿದಿದೆ. ಚುನಾವಣೆಯ ಫಲಿತಾಂಶ ಹೊರಬಿದ್ದ ಮೇಲೆ, ಇನ್ನೆರಡು ವರ್ಷ ಮೋದಿ ಉತ್ತರಪ್ರದೇಶದ ಬಗ್ಗೆ ಮಾತನಾಡುವುದಿಲ್ಲ ಎಂದು ರಾಹುಲ್ ಭವಿಷ್ಯ ನುಡಿದಿದ್ದಾರೆ.
ಜಲಾನ್, ಝೂನ್ಸಿ (ಉ.ಪ್ರ) ಪಿಟಿಐ, ಫೆ 19: ಏಳು ಹಂತದ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಚುನಾವಣೆ ಭಾನುವಾರ (ಫೆ 19) ಮುಕ್ತಾಯಗೊಂಡಿದೆ. ಜೊತೆಗೆ, ಪ್ರಧಾನಿ ಮೋದಿ ವಿರುದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಕ್ ಪ್ರಹಾರ ಮುಂದುವರಿದಿದೆ.
ಬಿಹಾರದಲ್ಲಿ ಆದಂತಹ ಪರಿಸ್ಥಿತಿ ಬಿಜೆಪಿಗೆ ಉತ್ತರಪ್ರದೇಶದಲ್ಲಿ ಮುಂದುವರಿಯಲಿದೆ, ಇಲ್ಲಿನ ಚುನಾವಣೆಯ ಫಲಿತಾಂಶ ಹೊರಬಿದ್ದ ಮೇಲೆ, ಇನ್ನೆರಡು ವರ್ಷ ಅಂದರೆ ಮುಂದಿನ ಲೋಕಸಭಾ ಚುನಾವಣೆಯ ವರೆಗೆ ಮೋದಿ ಉತ್ತರಪ್ರದೇಶದ ಬಗ್ಗೆ ಮಾತನಾಡುವುದಿಲ್ಲ ಎಂದು ರಾಹುಲ್ ಭವಿಷ್ಯ ನುಡಿದಿದ್ದಾರೆ.
ನಾವೆಲ್ಲಾ ಸೇರಿ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದನ್ನು ಮೋದಿಗೆ ಮನದಟ್ಟು ಮಾಡಬೇಕಾಗಿದೆ. ಇಲ್ಲಿ ಮತ್ತೆ ಸಮಾಜವಾದಿ ಪಕ್ಷದ ಸರಕಾರ ರಚನೆಯಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ ಅವರ 1200 ಕೋಟಿ ಸಾಲವನ್ನು ಮೋದಿ ಸರಕಾರ ಮನ್ನಾ ಮಾಡಿದೆ. ವಿಜಯ್ ಮಲ್ಯ ಅವರಿಂದ ದೇಶದಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎನ್ನುವುದನ್ನು ಮೋದಿ ದೇಶಕ್ಕೆ ತಿಳಿಸಬೇಕು ಎಂದು ರಾಹುಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾನುವಾರ (ಫೆ 19) ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, ಮಲ್ಯ ಅವರಿಂದ ಹಣವನ್ನು ವಸೂಲಿ ಮಾಡಿ ಉತ್ತರಪ್ರದೇಶದ ಕರಕುಶುಲ ಉದ್ಯಮಕ್ಕೆ ನೀಡಿದ್ದರೆ ಎಷ್ಟೊಂದು ಉದ್ಯೋಗ ಸೃಷ್ಟಿಯಾಗುತ್ತಿತ್ತು. ನಾವು ಮತದಾರರಿಗೆ ಸುಳ್ಳು ಭರವಸೆ ನೀಡುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.
ಅಪನಗದೀಕರಣದಿಂದ ಜನರ ದುಡ್ಡನ್ನು ಪೇಪರ್ ಗಿಂತ ಕಡೆಮಾಡಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು. ದೊಡ್ಡ ನೋಟನ್ನು ನಿಷೇಧಗೊಳಿಸಿದ್ದರಿಂದ ಎಷ್ಟೊಂದು ಅಮಾಯಕರು ಪ್ರಾಣತೆತ್ತರು.
ನೋಟ್ ಬ್ಯಾನ್ ನಿಂದಾದ ತೊಂದರೆಯನ್ನು ಜನರ ಮುಂದೆ ಸರಿಯಾಗಿ ತೋರಿಸಲು ಮಾಧ್ಯಮಗಳು ವಿಫಲವಾದವು, ಮಾಧ್ಯಮಗಳಿಗೆ ಮೋದಿ ಅಂದರೆ ಭಯ ಎಂದು ರಾಹುಲ್, ಮೋದಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೊನೇ ಮಾತು: ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ, ಸೋಲಲಿ ನೀವು ಮಾತ್ರ ನಿಮ್ಮ ಲೋಕಸಭಾ ಕ್ಷೇತ್ರ ಅಮೇಠಿಗೆ ಆವಾಗಾವಾಗ ತಲೆ ಹಾಕ್ತಾ ಇರಿ ಸ್ವಾಮಿ ಎಂದು ಸಭೆಯಲ್ಲಿದ್ದ ಜನ ಮಾತಾಡಿ ಕೊಳ್ತಾ ಇದ್ರಾ ಏನೋ?
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications