New Year 2024 Wishes: ಹೊಸ ವರ್ಷಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರ ರಾಜಕೀಯ ಗಣ್ಯರಿಂದ ಶುಭ ಹಾರೈಕೆ
ಹೊಸ ವರ್ಷ ಬಂದೇ ಬಿಡ್ತು. ಈ ಹೊಸ ವರ್ಷ ಎಲ್ಲರ ಜೀವನದಲ್ಲಿ ಸುಖ:, ಶಾಂತಿ, ನೆಮ್ಮದಿ, ಸಂತೋಷ, ಸಮೃದ್ಧಿ ತರಲಿ ಎಂದು ರಾಜಕೀಯ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಜನರಿಗೆ ಹೊಸ ವರ್ಷದ ಶುಭ ಹಾರೈಯಿಸಿದ್ದಾರೆ.
'ಎಲ್ಲರಿಗೂ ಭವ್ಯವಾದ 2024ರ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ' ಎಂದು ಅವರು ಎಕ್ಸ್(ಹಿಂದಿನ ಟ್ವೀಟ್) ಮೂಲಕ ಶುಭ ಕೋರಿದ್ದಾರೆ.
Wishing everyone a splendid 2024! May this year bring forth prosperity, peace and wonderful health for all.
— Narendra Modi (@narendramodi) January 1, 2024

ಹೊಸ ವರ್ಷಕ್ಕೆ ಶುಭ ಹಾರೈಸಿದ ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೊಸ ವರ್ಷದ ಸಂದರ್ಭದಲ್ಲಿ ವಿಶೇಷ ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಇಡೀ ದೇಶಕ್ಕೆ ಶುಭ ಹಾರೈಸಿದ್ದಾರೆ. "ಹೊಸ ವರ್ಷವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಭಾರತದಲ್ಲಿ ನ್ಯಾಯ ಮತ್ತು ಪ್ರೀತಿಯ ಸಂದೇಶವನ್ನು ತರಲಿ" ಎಂದು ರಾಹುಲ್ ಗಾಂಧಿ X ನಲ್ಲಿ ಬರೆದಿದ್ದಾರೆ.
नया साल आप सभी के जीवन में खुशियां और समृद्धि की सौगात और भारत में न्याय और मोहब्बत का पैगाम ले कर आए।
— Rahul Gandhi (@RahulGandhi) December 31, 2023
Wishing everyone a very happy and prosperous New Year 2024. pic.twitter.com/PH2sAQ4Rcb
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ
ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶವಾಸಿಗಳು. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ, "ಈ ಹೊಸ ವರ್ಷದಲ್ಲಿ ನಾನು ನಿಮಗೆ ಶುಭ ಹಾರೈಸುತ್ತೇನೆ. 2024ರ ವರ್ಷವು ಬಡ ಜನರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡುವ ವರ್ಷವಾಗಬೇಕು. ಪ್ರತಿಯೊಬ್ಬ ನಾಗರಿಕನ ಹಕ್ಕುಗಳಿಗಾಗಿ ನಾವು ಒಗ್ಗಟ್ಟಿನಿಂದ ಹೋರಾಡುವುದು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸುವುದು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಮುಖ್ಯ ಕರ್ತವ್ಯವಾಗಿದೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು" ಎಂದು ಬರೆದಿದ್ದಾರೆ.
On this New Year, I extend my best wishes to all of you.
— Mallikarjun Kharge (@kharge) December 31, 2023
The year 2024 should be the year, that once again gives hope and power back to the poor and marginalised.
It is important that we fight unitedly for the rights of every citizen and ensure social justice.
It is our… pic.twitter.com/o57fiwvghN
ಹೊಸ ವರ್ಷಕ್ಕೆ ಪ್ರಿಯಾಂಕಾ ಗಾಂಧಿಯಿಂದ ಜನರಿಗೆ ವಿಶೇಷ ಮನವಿ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಈ ವಿಶೇಷ ಸಂದರ್ಭದಲ್ಲಿ ಜನರಿಗೆ ಮನವಿ ಮಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಪರಿಸ್ಥಿತಿಯ ಬಗ್ಗೆ X ನಲ್ಲಿ ಅವರು ಬರೆದಿದ್ದಾರೆ, "ನಾವು ಹೊಸ ವರ್ಷದ ಆರಂಭವನ್ನು ಆಚರಿಸುವ ಮೂಲಕ ಪರಸ್ಪರ ಹಾರೈಸುತ್ತೇವೆ. ನಮ್ಮ ಜೀವನವು ಪ್ರೀತಿ, ಶಾಂತಿ, ನಗು ಮತ್ತು ಒಳ್ಳೆಯತನದಿಂದ ತುಂಬಿರಲಿ. ತಮ್ಮ ಬದುಕುವ ಹಕ್ಕಿನ ಮೇಲೆ ಅತ್ಯಂತ ಅನ್ಯಾಯ ಮತ್ತು ಅಮಾನವೀಯ ದಾಳಿಯನ್ನು ಎದುರಿಸುತ್ತಿರುವ ಗಾಜಾದಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸ್ಮರಿಸೋಣ. ಒಂದೆಡೆ ನಮ್ಮ ಮಕ್ಕಳು ಸಂಭ್ರಮಿಸುತ್ತಿದ್ದರೆ, ಅವರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಇದನ್ನು ಪ್ರಪಂಚದ ನಾಯಕರು ಎಂದು ಕರೆಯಲ್ಪಡುವವರು ಮೌನವಾಗಿ ನೋಡುತ್ತಿದ್ದಾರೆ. ಅಧಿಕಾರ ಮತ್ತು ದುರಾಶೆಗಾಗಿ ಇವೆಲ್ಲವು ನಡೆಯುತ್ತಿವೆ'' ಎಂದು ಬರೆದಿದ್ದಾರೆ.
As we celebrate the beginning of a new year and wish each other that love, peace, laughter and goodness should fill our lives, let us remember our brothers and sisters in Gaza who are facing the most unjust and inhuman assault on their right to life, dignity and freedom.
— Priyanka Gandhi Vadra (@priyankagandhi) December 31, 2023
While… pic.twitter.com/Hs7dwu1uIP
ಇನ್ನೂ ಕರ್ನಾಟಕ ಕಾಂಗ್ರೆಸ್ ಪಕ್ಷ ಹೊಸ ವರ್ಷದ ಶುಭ ಕೋರಿದೆ. ನಾಡಿನ ಸಮಸ್ತ ಜನತೆಗೆ 2024 ಹೊಸ ವರ್ಷದ ಶುಭಾಶಯಗಳು ಎಂದು X ನಲ್ಲಿ ಬರೆದು ಗ್ಯಾರಂಟಿಗಳನ್ನು ಹಂಚಿಕೊಂಡಿದೆ.
ನಾಡಿನ ಸಮಸ್ತ ಜನತೆಗೆ 2024 ಹೊಸ ವರ್ಷದ ಶುಭಾಶಯಗಳು.#HappyNewYear pic.twitter.com/0i7OmqgJYK
— Karnataka Congress (@INCKarnataka) December 31, 2023
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಹೊಸ ವರ್ಷಕ್ಕೆ X ನಲ್ಲಿ ಶುಭ ಕೋರಿದ್ದಾರೆ.
''2024 ರ ನಿರೀಕ್ಷೆ -ಕನಸು.
•ಭಾರತದ ಸಾರ್ವಭೌಮತ್ವ ಸುಭದ್ರಗೊಳಿಸುವ
ಚುನಾವಣಾ ಫಲಿತಾಂಶ ಕಮಲದಂತೆ ಅರಳಲಿ.
•ಕರ್ನಾಟದಲ್ಲಿ ಜಾತಿ, ಧರ್ಮಗಳನ್ನು ಒಡೆದು ಎತ್ತಿಕಟ್ಟುವ ರಾಜಕಾರಣ ಕೊನೆಯಾಗಲಿ.
•ಕುವೆಂಪು ಅವರು ಕಂಡ "ಸರ್ವ ಜನಾಂಗದ ಶಾಂತಿಯ ತೋಟ...." ನಿರ್ಮಾಣವಾಗಲಿ.
•ಬಾಧಿಸುವ ಬರಗಾಲ ಮತ್ತೆ ಬಾರದಿರಲಿ.
•ಜಲ ಸಂಪತ್ತು, ಸಸ್ಯ ಸಂಪತ್ತು, ಧಾನ್ಯ ಸಂಪತ್ತುಗಳು ವೃದ್ಧಿಸಿ ಸಮೃದ್ಧ ಕರ್ನಾಟಕ ಕಂಗೊಳಿಸಲಿ.
ನಾಡಿನ ಸಮಸ್ತ ಜನತೆಗೆ 2024 ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
HappyNewYear2024'' ಎಂದು ಅವರು ಬರೆದಿದ್ದಾರೆ.
2024 ರ ನಿರೀಕ್ಷೆ -ಕನಸು.
— Vijayendra Yediyurappa (@BYVijayendra) January 1, 2024
•ಭಾರತದ ಸಾರ್ವಭೌಮತ್ವ ಸುಭದ್ರಗೊಳಿಸುವ
ಚುನಾವಣಾ ಫಲಿತಾಂಶ ಕಮಲದಂತೆ ಅರಳಲಿ.
•ಕರ್ನಾಟದಲ್ಲಿ ಜಾತಿ, ಧರ್ಮಗಳನ್ನು ಒಡೆದು ಎತ್ತಿಕಟ್ಟುವ ರಾಜಕಾರಣ ಕೊನೆಯಾಗಲಿ.
•ಕುವೆಂಪು ಅವರು ಕಂಡ "ಸರ್ವ ಜನಾಂಗದ ಶಾಂತಿಯ ತೋಟ…." ನಿರ್ಮಾಣವಾಗಲಿ.
•ಬಾಧಿಸುವ ಬರಗಾಲ ಮತ್ತೆ ಬಾರದಿರಲಿ.
•ಜಲ ಸಂಪತ್ತು, ಸಸ್ಯ ಸಂಪತ್ತು,… pic.twitter.com/eS6HJwK82j
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications